Breaking News

ಕೊಪ್ಪಳ

ವಿದೇಶಗಳ ಮೇಲೆ ಹಲ್ಲೆ : ಕುಡಿದು ದುಡ್ಡಿಗಾಗಿ ಪ್ರವಾಸಿಗರ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಸಾಲು ಸಾಲಾಗಿ ಅಪರಾಧ ಪ್ರಕರಣಗಳು ದಾಖಲಾಗುತ್ತಿದ್ದು ಇದೀಗ ವಿದೇಶಿಗರ ಮೇಲೆ ದುಡ್ಡಿಗಾಗಿ ಹಲ್ಲೆ ನಡೆಸಿದ ಯತ್ನ ಬೆಳಕಿಗೆ ಬಂದಿದೆ. ಗಾರೆ ಕೆಲಸ ಮಾಡುತ್ತಿರುವ ಇಬ್ಬರು ಆರೋಪಿಗಳು ಕುಡಿದು ಪ್ರವಾಸಿಗರಿಂದ ದುಡ್ಡನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಿ ವಿಚಾರಿಸಿದಾಗ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

Read More »

ಭತ್ತದ ನಾಡಿನಲ್ಲಿ ಬತ್ತಿದ ಸಂಸ್ಕೃತಿ. ಗ್ಯಾಂಗ್ ರೇಪ್ ಇಬ್ಬರು ಆರೋಪಿಗಳ ಬಂಧನ.

ಮಾರ್ಚ್ 6 ರಂದು ನಡೆದಿದ್ದ ಗ್ಯಾಂಗ್ ರೇಪ್. ಕೊಪ್ಪಳ ಜಿಲ್ಲೆಯ ಗಂಗಾವತಿ ಯಲ್ಲಿ ನಡೆದ ಘಟನೆ. ಗ್ಯಾಂಗ್ ರೇಪ್ ತಡೆಯಲು ಮೂವರು ಯತ್ನಿಸಿದ್ದರು ಮೂರನ್ನು ನಾಲೆಗೆ ದುಡಿ ಪರಾರಿಯಾದ ದುಷ್ಕರ್ಮಿಗಳು. ಮೂವರಲ್ಲಿ ಇಬ್ಬರು ಈಜಿ ದಡ ಸೇರಿ ಪಾರಾಗಿದ್ದಾರೆ. ಇಬ್ಬರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22) ಮತ್ತು ಚೇತನ್ ಸಾಯಿ (21) ಬಂಧಿತ ಆರೋಪಿಗಳಾಗಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು …

Read More »

ಕೊಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನ!. ಪೊಲೀಸರ ಚಾಣಕ್ಷ್ಯತನದಿಂದ ಆರೋಪಿಗಳ ಬಂಧನ.

ಕೊಪ್ಪಳ ಜಿಲ್ಲೆಯ ಗಂಗಾವತಿ ಗ್ರಾಮದಲ್ಲಿ ಮೊನ್ನೆ ರಾತ್ರಿ ನಡೆದ ಘಟನೆ ಮೂವರು ಆರೋಪಿಗಳು ಅಮಾಯಕನನ್ನು ಕೊಲೆಮಾಡಿ ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ನಿನ್ನೆ ಇಬ್ಬರು ಆರೋಪಿಗಳನ್ನು ಬಂಧನ ಮಾಡಿದ್ದೂ 3 ನೇ ಕೊಲೆಗಾರನು ಗಂಗಾವತಿ ಗ್ರಾಮದವನಾಗಿದ್ದು ಅವನಿಗಾಗಿ ಹುಡುಕಾಟ ನಡೆಸಿದ್ದಾರೆ. ಕೃತ್ಯದ ಬಳಿಕ ಬೇರೆ ಕಡೆ ತಪ್ಪಿಸಿಕೊಳ್ಳಲು ಯತ್ನ ನಡೆಸಿದರು ಪೋಲೀಸರ ಕಾರ್ಯ ಕ್ಷಮತೆಯಿಂದ ಆರೋಪಿಗಳನ್ನು ಭಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More »

ಕೊಪ್ಪಳ: ಹುಲಿಗೆಮ್ಮ ದೇವಿ ದೇವಸ್ಥಾನದ ಅಭಿವೃದ್ದಿಗೆ ಕೇಂದ್ರ ಸರ್ಕಾರದಿಂದ 100 ಕೋಟಿ ಅನುದಾನ

ಕೊಪ್ಪಳ: ಲಕ್ಷ ಲಕ್ಷ ಭಕ್ತರನ್ನು ಸೆಳೆಯುತ್ತಿರುವ ಹಾಗೂ ಕೋಟಿ ಕೋಟಿ ಆದಾಯ ತಂದುಕೊಡುತ್ತಿರುವ ಹುಲಿಗೆಮ್ಮ ದೇವಸ್ಥಾನವನ್ನು ಮಾಸ್ಟರ್‌ಪ್ಲಾನ್‌ನಂತೆ ಅಭಿವೃದ್ಧಿ ಮಾಡುವುದಕ್ಕೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಲು ತಾತ್ಕಾಲಿಕ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಆದೇಶವೂ ಆಗಬಹುದು. ಸಂಸದ ರಾಜಶೇಖರ ಹಿಟ್ನಾಳ ಅವರು ಕೇಂದ್ರಕ್ಕೆ ಮಾಡಿದ್ದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ತಕ್ಷಣ ಡಿಪಿಆರ್‌ ಕಳುಹಿಸಿಕೊಟ್ಟರೆ ನೀಡುವುದಾಗಿ ಹೇಳಿದೆ. ಹೀಗಾಗಿ ಬಹುದಿನಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. …

Read More »

ಕೊಪ್ಪಳ: ಶಾಲಾ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸವಿದ ಜಿ.ಪಂ. ಸಿಇಒ

ಕೊಪ್ಪಳ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡಿರುವ ಶಾಲಾ ಶೌಚಾಲಯಗಳ ನಿರ್ಮಾಣ ಕಾಮಗಾರಿಗಳ ಗುಣಮಟ್ಟವನ್ನು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಇಂದು ಪರಿಶೀಲಿಸಿ, ಗುಣಮಟ್ಟ ಕಾಯ್ದುಕೊಳ್ಳಲು ಕರೆ ನೀಡಿದ್ದಾರೆ. ಕೊಪ್ಪಳ ತಾಲೂಕಿನ ಹಾಲವರ್ತಿ, ಗಿಣಿಗೇರಾ ಹಾಗೂ ಚಿಕ್ಕಬೊಮ್ಮನಾಳ ಗ್ರಾಮ ಪಂಚಾಯತಿಗಳಲ್ಲಿ ಅನುಷ್ಠಾನಗೊಂಡ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಕಾಮಗಾರಿಗಳನ್ನು ಸೋಮವಾರ ಪರಿಶೀಲಿಸಿದರು. ಶಾಲಾ ಶೌಚಾಲಯ ಹಾಗು ಸಂಜೀವಿನಿ ಸಂಘದ ಶೆಡ್ ಕಾಮಗಾರಿಗಳ ಪರಿಶೀಲನೆ: ಗ್ರಾಮ …

Read More »

ಜನಾರ್ದನ ರೆಡ್ಡಿ, ಶ್ರೀರಾಮಲು ಕಾಂಗ್ರೆಸ್ ತೋರಿಸಿ ಬಿಜೆಪಿಯಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ: ಸಚಿವ ಜಮೀರ್

ಕೊಪ್ಪಳ : ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ನಡುವಿನ ಗುದ್ದಾಟ ಅವರ ಆಂತರಿಕ ವಿಚಾರವಾಗಿದ್ದು, ಅವರು ಕಾಂಗ್ರೆಸ್ ಬರುವ ಹಾಗೆ ಕಾಣುತ್ತಿಲ್ಲ. ಕಾಂಗ್ರೆಸ್ ತೋರಿಸಿ ಬಿಜೆಪಿಯಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿದ್ದು, ನಾಟಕ ಮಾಡುತ್ತಿದ್ದಾರೆ ಎಂದು ನನಗೆ ಅನಿಸುತ್ತಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ರವಿವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ನಾವು ಯಾರು ಅವರನ್ನು ಪಕ್ಷಕ್ಕೆ ಕರೆದಿಲ್ಲ. ನಮ್ಮ ಪಕ್ಷಕ್ಕೆ ತಗೋಬೇಕಾದ್ರೆ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. …

Read More »

ಕೊಪ್ಪಳ; ಜಿಲ್ಲೆಯಲ್ಲಿ ಸ್ಥಾವರ ಸ್ಥಾಪನೆ ಅಂತಿಮವೇ ಆಗಿಲ್ಲ, ಆತಂಕವೂ ಬೇಡ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಜಿಲ್ಲೆಯಲ್ಲಿ ಪರಮಾಣು ವಿದ್ಯುತ್‌ ಸ್ಥಾವರ ಸ್ಥಾಪನೆ ಮಾಡಲಾಗುತ್ತಿದೆ ಎಂದು ಜನರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದ್ದು, ಇದರಿಂದ ಯಾರೂ ಆತಂಕಕ್ಕೆ ಒಳಗಾಗುವುದು ಬೇಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು ‘ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮೇಲಿಂದ ಮೇಲೆ ಭೂಮಿಯಲ್ಲಿರುವ ಖನಿಜದ ಬಗ್ಗೆ ಮಾಹಿತಿ ಸಂಗ್ರಹಿಸುವ ಸಾಮಾನ್ಯ ಪ್ರಕ್ರಿಯೆ ನಡೆಸುತ್ತಿದ್ದಾರೆ. ಪರಮಾಣು ಸ್ಥಾವರ ಸ್ಥಾಪನೆ ಅಂತಿಮವೇ ಆಗಿಲ್ಲ. ಒಂದು ವೇಳೆ …

Read More »

ಜ.24 ರಂದು ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಸಂದರ್ಶನ

ಕೊಪ್ಪಳ: ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 30 ವರ್ಷ ವಯೋಮಾನದ ಆಸಕ್ತ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವಾಕ್ ಇನ್ ಸಂದರ್ಶನ ಜನವರಿ 24ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ. ಈ …

Read More »

ಕೊಪ್ಪಳ: ಗಣರಾಜ್ಯೋತ್ಸವ ದಿನಾಚರಣೆ ಕಟ್ಟುನಿಟ್ಟಾಗಿ ಆಚರಿಸಿ; ಜಿಲ್ಲಾಧಿಕಾರಿ

ಕೊಪ್ಪಳ: ಜನವರಿ 26 ರಂದು ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಬೇಕೆಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಗಣರಾಜ್ಯೋತ್ಸವ ದಿನಾಚರಣೆಯ ನಿಮಿತ್ತ ಜ.26 ರ ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನಡೆಯಲಿದೆ. ನಂತರ ಅಂದು ಬೆಳಿಗ್ಗೆ 9 ಗಂಟೆಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ …

Read More »

ಗವಿಸಿದ್ದೇಶ್ವರ ಮಠದ ಜಾತ್ರೆಯ ಮಹಾರಥೋತ್ಸವ: ಎರಡನೇ ದಿನವೂ ಭರಪೂರ ಜನ

ಕೊಪ್ಪಳ: ಇಲ್ಲಿನ ಗವಿಸಿದ್ಧೇಶ್ವರ ಮಠದ ಜಾತ್ರೆಯ ಮಹಾರಥೋತ್ಸವ ನಡೆದು ಒಂದು ದಿನವಾದರೂ ಗುರುವಾರ ದಿನಪೂರ್ತಿ ಎಲ್ಲಿ ನೋಡಿದರೂ ಜನವೋ ಜನ. ಬೆಳಗಿನ ಜಾವದಿಂದಲೇ ಜನ ಪಾದಯಾತ್ರೆ ಹಾಗೂ ವಾಹನಗಳ ಮೂಲಕ ಬಂದು ಗವಿಮಠದ ದರ್ಶನ ಪಡೆದರು. ಸಂಜೆ ಹೊತ್ತು ಏರುತ್ತಿದ್ದಂತೆ ಭಕ್ತರ ಸಂಖ್ಯೆಯೂ ಹೆಚ್ಚಾಗುತ್ತಲೇ ಇತ್ತು. ದಿನಪೂರ್ತಿ ನಡೆದ ಕ್ರೀಡಾಕೂಟಗಳು, ವಿವಿಧ ವಸ್ತುಪ್ರದರ್ಶನಗಳು ಹಾಗೂ ಆಟಿಕೆಗಳು ಜನರ ಗಮನ ಸೆಳೆದವು. ಅನ್ವೇಷಣೆ: ಮಠದ ಶಾಂತವನದಲ್ಲಿ ನಡೆದ ಅನ್ವೇಷಣೆ ಹಾಗೂ ಆಧ್ಯಾತ್ಮಿಕ …

Read More »

You cannot copy content of this page