BigTv News
May 1, 2025
Breaking News, Crime, ರಾಯಚೂರು
ರಾಯಚೂರು ನಗರದ ರೈಲ್ವೆ ನಿಲ್ದಾಣದ ಮೈದಾನದಲ್ಲಿ ಘಟನೆ ನಡೆದಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ವೀರೇಶನನ್ನು ಹತ್ಯೆಗೈದು ಸ್ನೇಹಿತರು ಪರಾರಿಯಾಗಿದ್ದಾರೆ. ರಾಯಚೂರಿನಲ್ಲಿ ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ ನಡೆದಿದೆ. ಇಂದಿರಾನಗರದ ವೀರೇಶ್ ಅಲಿಯಾಸ್ ಪಂದಿ ವೀರೇಶ್(27) ಕೊಲೆಯಾದ ಯುವಕ.ರೈಲ್ವೆ ಮೈದಾನದಲ್ಲಿ ಸ್ನೇಹಿತರ ಜೊತೆ ಪಾರ್ಟಿಯಲ್ಲಿ ಭಾಗವಹಿಸಿದ್ದ ವೇಳೆ ಕಿರಿಕ್ ಆಗಿ ಸ್ನೇಹಿತರಿಂದಲೇ ವೀರೇಶನ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್ಪಿ ಪು ಟ್ಟಮಾದಯ್ಯ ಹಾಗೂ ಪಶ್ಚಿಮ ಠಾಣೆ ಪೊಲೀಸರು ಭೇಟಿ …
Read More »
BigTv News
April 26, 2025
Breaking News, Crime, ರಾಯಚೂರು
ತುಂಬು ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಬೂದಿವಾಳ ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅನುಪಮಾ ಮೃತ ಗೃಹಿಣಿ. ವರದಕ್ಷಿಣೆ ಕಿರುಕುಳದಿಂದ ಗಂಡನ ಮನೆಯವರೇ ಕೊಲೆ ಮಾಡಿರು ಆರೋಪ ಕೇಳಿಬಂದಿದೆ. ಸದ್ಯ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
April 25, 2025
Breaking News, Crime, ರಾಯಚೂರು
ಪಟ್ಟಣದ ಸಾರಿಗೆ ಘಟಕದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಬ್ದುಲ್ ಶಿರೂರು ವಿಷ ಸೇವಿಸಿದ್ದು, ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.ಡ್ಯೂಟಿ ಸಂದರ್ಭದಲ್ಲಿ ಕೆಎಂಪಿಎಲ್ ತರುವಂತೆ ಹಾಗೂ ಹೈದರಾಬಾದ್ ತಲುಪಿದ ನಂತರ ಡೇ ಡ್ಯೂಟಿ ಸೇರಿದಂತೆ ಹಲವು ರೀತಿಯಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಹೀಗಿದ್ದರೂ ಇಷ್ಟು ದಿನ ಸಹಿಸಿಕೊಂಡಿದ್ದೆ. ಇಂದು ರಾತ್ರಿ ಹೈದರಾಬಾದ್ಗೆ ಹೋಗಿ ಬೆಳಿಗ್ಗೆ ವಾಪಸ್ ಬರುವಂತೆ ಹೇಳಿದರು. ವಿಶ್ರಾಂತಿ ಇಲ್ಲದೇ ಡ್ಯೂಟಿ ಮಾಡಲು ನನ್ನಿಂದ ಆಗಲ್ಲ ಎಂದಾಗ ಅಮಾನತು …
Read More »
BigTv News
April 9, 2025
Breaking News, Crime, ರಾಯಚೂರು
ಮೃತ ಈರಪ್ಪನ ಮಗ ಮೌನೇಶ ಎನ್ನುವಾತ ಸಣ್ಣ ಪಕೀರಪ್ಪ ಕೊನದವರು ಎನ್ನುವ ಕೊಲೆ ಆರೋಪಿಯ ಮಗಳನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಹಿನ್ನೆಲೆಯಲ್ಲಿ ಜುಲೈ 11 ನೇ 2020 ರಂದು ಸಂಜೆ 04-45 ಗಂಟೆ ಸುಮಾರಿಗೆ ಸಣ್ಣ ಪಕೀರಪ್ಪ ಸೇರಿ ಎಲ್ಲ ಆರೋಪಿತರು ಸಿಂಧನೂರು ನಗರದ ಸುಕಾಲಪೇಟೆಯ ಹಿರೇಲಿಂಗೇಶ್ವರ ಕಾಲೊನಿಯಲ್ಲಿಈರಪ್ಪನ ಮನೆಗೆ ನುಗ್ಗಿ ಸಿಕ್ಕಿಸಿಕ್ಕವರ ಮೇಲೆ ದಾಳಿ ಮಾಡಿದ್ದು, ಈರಪ್ಪ ಆತನ ಪತ್ನಿ ಸುಮಿತ್ರಮ್ಮ. ಮಕ್ಕಳಾದ ನಾಗರಾಜ, ಹನುಮೇಶ ಹಾಗೂ ಮಗಳಾದ …
Read More »
BigTv News
March 31, 2025
Breaking News, Crime, ರಾಯಚೂರು
ತಿಮ್ಮಪ್ಪ ಎನ್ನುವ ವ್ಯಕ್ತಿಯೇ ಈ ರೀತಿ ವಿಕೃತವಾಗಿ ದಾಳಿ ನಡೆಸಿದ್ದಾನೆ. ಆರೋಪಿ ತಿಮ್ಮಪ್ಪ ತನ್ನ ಪತ್ನಿ ಪದ್ಮಾವತಿ, ಪದ್ಮಾವತಿ ತಂಗಿ ಭೂದೇವಿಯನ್ನು ಮಚ್ಚಿನಿಂದ ಹೊಡೆದಿದ್ದಾನೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋವನ್ನು ನೋಡಿ ಜನ ಬೆಚ್ಚಿಬಿದ್ದಿದ್ದಾರೆ.ತಿಮ್ಮಪ್ಪ ಪತ್ನಿ ಹಾಗೂ ನಾದಿನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸೋಕೆ ಕಾರಣವೇ ಆಸ್ತಿ. ಘಟನೆಯಲ್ಲಿ ಪದ್ಮಾವತಿಯ ಕೈ ಬೆರಳುಗಳು ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ. ಮತ್ತೊಂದೆಡೆ ಅಕ್ಕನ ಜೊತೆಗಿದ್ದ ತಂಗಿಯ ಮುಂಗೈ …
Read More »
BigTv News
March 30, 2025
Breaking News, Crime, ರಾಯಚೂರು
ಏಗನೂರು ಗ್ರಾಮದಲ್ಲಿ ಶನಿವಾರ ಸಂಜೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಪತ್ನಿಯ ತಂಗಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ್ದಾನೆ. ಪದ್ಮಾವತಿ ಹಾಗೂ ರಾಜಮ್ಮ ಇಬ್ಬರನ್ನೂ ರಿಮ್ಸ್ಗೆ ದಾಖಲಿಸಲಾಗಿದ್ದು, ಪದ್ಮವಾತಿ ಜೀವನಮರಣದ ಮಧ್ಯೆ ಹೋರಾಟ ನಡೆಸಿದ್ದಾರೆ.ತಿಮ್ಮಪ್ಪ ಯಾದವ ಮಚ್ಚಿನಿಂದ ಹೊಡೆದು ಪತ್ನಿಯ ಕೊಲೆಗೆ ಯತ್ನಿಸಿದ್ದಾನೆ. ಅಕ್ಕನ ಮೇಲೆ ಹಲ್ಲೆ ನಡೆಸಲು ಮುಂದಾದಾಗ ತಂಗಿಯ ಮೇಲೂ ಹಲ್ಲೆ ಮಾಡಿದ್ದಾನೆ. ಪೊಲೀಸರು ಗ್ರಾಮಕ್ಕೆ ಭೇಟಿ ಕೊಟ್ಟಿದ್ದಾರೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು …
Read More »
BigTv News
March 28, 2025
Breaking News, ರಾಯಚೂರು
ಹೌದು ಪ್ರಾಣಿ ಪ್ರಿಯರೇ ಎಚ್ಚರ ಕೊರೋನ ವೈರಸ್ಹ,ಹಕ್ಕಿ ಜ್ವರ ಹೀಗೆ ಅನೇಕ ರೋಗಗಳ ನಡುವೆ, ಇದೀಗ ಹೊಸ ವೈರಸ್ ಪತ್ತೆ.! ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ಇದೀಗ ಮಾರಣಾಂತಕ “ಎಫ್ಪಿವಿ” ವೈರಸ್ ಬೆಕ್ಕುಗಳಲ್ಲಿ ಕಂಡು ಬಂದಿದೆ. ಇದೀಗ ನೂರಕ್ಕೂ ಹೆಚ್ಚು ಬೆಕ್ಕುಗಳು ವೈರಸ್ಗೆ ಬಲಿಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
Read More »
BigTv News
March 23, 2025
Breaking News, SPECIAL NEWS, ರಾಯಚೂರು
ಮಸ್ಕಿ ಪಟ್ಟಣದ ರಾಮಣ್ಣ ಹಾಗೂ ಶೃತಿ ದಂಪತಿಯ ವಿವಾಹವಾಗಿ 15 ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲ. ರಾಮಣ್ಣ ಅವರು ಮಸ್ಕಿ ಪಟ್ಟಣದ ಕಾಲೇಜುವೊಂದರಲ್ಲಿ ಉಪನ್ಯಾಸರಾಗಿ ಕೆಲಸ ಮಾಡುತ್ತಿದ್ದರೇ, ಶೃತಿ ಕಂಪ್ಯೂಟರ್ ಶಿಕ್ಷಕಿಯಾಗಿದ್ದಾರೆ.ವಿವಾಹವಾಗಿ 15 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂಬ ಚಿಂತೆಯಲ್ಲಿ ದಂಪತಿ ಅದೆಷ್ಟೋ ದೇವರಿಗೆ ಹರಕೆ ಹೊತ್ತಿದರೂ, ಅದೆಷ್ಟೋ ವೈದ್ಯರಲ್ಲಿ ಚಿಕಿತ್ಸೆ ಪಡೆದಿದರೂ ಸಂತಾನ ಭಾಗ್ಯ ಮಾತ್ರ ಪ್ರಾಪ್ತಿಯಾಗಿಲ್ಲ.ದಂಪತಿ ತಮ್ಮ ಸ್ವಂತ ದುಡಿಮೆಯಲ್ಲಿನ ಹಣವನ್ನೇ ಈ ಮಕ್ಕಳಿಗಾಗಿ ಬಳಕೆ ಮಾಡುತ್ತಿದ್ದಾರೆ. …
Read More »
BigTv News
March 6, 2025
Breaking News, SPECIAL NEWS, ರಾಯಚೂರು
ರಾಯಚೂರು RTO ಆಫೀಸ್ ನಲ್ಲಿ ನಡೆದ ಘಟನೆ. ಕರ್ನಾಟಕದಲ್ಲಿ ಒಟ್ಟು 71 RTO ಆಫೀಸ್ ಗಳಿವೆ ಫ್ರೀ ಕೌಂಟರ್ ನಲ್ಲಿ ಹೆಚ್ಚುವರಿಗಾಗಿ 50ರೂ ತೆಗೆದುಕೊಂಡರೆ ಸೂಪರ್ ಎಂಡ್ 100ರೂ ತೆಗೆದುಕೊಳ್ಳುತ್ತಿದ್ದಾರೆ.ಅಧಿಕಾರಿಗಳು ಮತ್ತು ಏಜೆಂಟ್ಗಳ ನಡುವೆ ಗುದ್ದಾಟ ಪ್ರಾರಂಭವಾಗಿದೆ. ರಾಯಚೂರ್ ನಲ್ಲಿ RTO ಲಂಚದ ಕಮಿಷನ್ ಗಾಗಿ ಮುಷ್ಕರ ನಡೆಯುತ್ತಿದೆ. ಲಂಚದ ಹಣವನ್ನು ಎರಡು ಪಟ್ಟು ಮಾಡಿದ್ದು ಇದೀಗ ಏಜೆಂಟ್ಗಳು ಅದರ ವಿರುದ್ಧ ವಿರೋಧ ವ್ಯಕ್ತಪಡಿಸಿದ್ದಾರೆ. ಡ್ರೈವಿಂಗ್ ಲೈಸನ್ಸ್ ಸಿಗದೇ ಮಾಲೀಕರ …
Read More »
BigTv News
January 27, 2025
Breaking News, ರಾಯಚೂರು
ರಾಯಚೂರು: ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಪಂಗಡ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ವೈದ್ಯಕೀಯ ಮತ್ತು ರಾಯಚೂರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್ ಪಾಟೀಲ್ ಅವರು ಲೋಕಾರ್ಪಣೆ ಮಾಡಿದರು. ನೂತನ ಕಟ್ಟಡ ವೀಕ್ಷಣೆ ಮಾಡಿದ ಸಚಿವರು ಮತ್ತು ಶಾಸಕರು ಮಾತನಾಡಿ, ಕಟ್ಟಡವನ್ನು ಸರಿಯಾಗಿ ನಿರ್ವಹಣೆ ಮಾಡಿ ಹಾಳಾಗದಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಟೇಬಲ್, ಖುರ್ಚಿ, ಕಾಟ್ ಸೇರಿದಂತೆ ಇನ್ನೀತರ ಸಾಮಗ್ರಿಗಳನ್ನು ಗುಣಮಟ್ಟ ಪರೀಕ್ಷಿಸಿ ಅಳವಡಿಸಿ ವಿದ್ಯಾರ್ಥಿಗಳಿಗೆ …
Read More »