ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ� ಫೆ.11 ರವಿವಾರ ತಡರಾತ್ರಿ 2 ಗಂಟೆ ವೇಳೆಗೆ� ಮೈಸೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜಿಲ್ಲಾಡಳಿತದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ� ಬಿ.ವೈ.ವಿಜಯೇಂದ್ರ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಅವರು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಿದರು. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ,ಸಂಸದ ಪ್ರತಾಪ ಸಿಂಹ, ಶಾಸಕರಾದ ಶ್ರೀ ವತ್ಸ,ಮಾಜಿ ಶಾಸಕರಾದ ನಾಗೇಂದ್ರ, ಹರ್ಷವರ್ಧನ್ ನಗರ ಪೊಲೀಸ್ …
Read More »ಅಮಿತ್ ಶಾ ಸ್ವಾಗತ ವಿಚಾರ: ಸಂಸದ ಪ್ರತಾಪ್ ಸಿಂಹ, ಪ್ರೀತಂ ಗೌಡ ನಡುವೆ ವಾಕ್ಸಮರ…
ಕೇಂದ್ರ ಗೃಹ ಸಚಿವ ಅಮಿತ್ ರವಿವಾರ ಬೆಳಗಿನ ಜಾವ ಮೈಸೂರಿಗೆ ಆಗಮಿಸಿದ ವೇಳೆ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ..� ಪ್ರೀತಂ ಗೌಡ ನಡುವೆ..� ಕಿತ್ತಾಟ ನಡೆದಿದೆ ಎಂದು ತಿಳಿದು ಬಂದಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೇಂದ್ರ ಗೃಹ ಸಚಿವರ ಸ್ವಾಗತಕ್ಕೆ ಸರದಿ ಸಾಲು ಬಗ್ಗೆ ಸೂಚನೆ ನೀಡಲಾಗಿತ್ತು. ಇದರ ನೇತೃತ್ವವನ್ನು ಮಾಜಿ ಶಾಸಕ ಪ್ರೀತಂ ಗೌಡರಿಗೆ ವಹಿಸಲಾಗಿತ್ತು. ಈ ವೇಳೆ ಸಂಸದ …
Read More »ರಾಹುಲ್ ನ್ಯಾಯ ಯಾತ್ರೆ ಮೇಲಿನ ದಾಳಿ ಹೇಯ ಕೃತ್ಯ: ಈಶ್ವರ ಖಂಡ್ರೆ..
ಮೈಸೂರು:ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ, ಆದರೆ, ರಾಹುಲ್ ಗಾಂಧೀ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರಶ್ನಿಸಿದ್ದಾರೆ.ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯ ವೇಳೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಇಂದು ದೇಶವನ್ನು ಧರ್ಮ, ಜಾತಿ ಹೆಸರಲ್ಲಿ ಒಡೆಯಲಾಗುತ್ತಿದೆ. …
Read More »ಕಾವೇರಿಯು ಇಲ್ಲಿ ಶಿವ ಕ್ಷೇತ್ರ ಮತ್ತು ವಿಷ್ಣುಕ್ಷೇತ್ರವನ್ನು ಸೃಷ್ಟಿಸಿದ್ದು ಚತುರ್ ವಾಹಿನಿಯಾಗಿ ಹರಿಯುವುದು ತಲಕಾಡಿನ ಸುಂದರತೆಗೆ ಸಾಕ್ಷಿಯಾಗಿದೆ..
ಮೈಸೂರು:ಸುತ್ತಲೂ ಹಸಿರಿನಿಂದ ಕಂಗೊಳಿಸುವ ನಿಸರ್ಗಸಿರಿ, ಮರಳ ರಾಶಿ ನಡುವಿನ ದೇವಾಲಯಗಳು, ವಿಶಾಲವಾಗಿ ಹರಡಿ ಹರಿಯುವ ಕಾವೇರಿ ನದಿಯ ಚೆಲುವು ಮನಪುಳಕಗೊಳಿಸುತ್ತದೆ. ಕಾವೇರಿಯು ಇಲ್ಲಿ ಶಿವ ಕ್ಷೇತ್ರ ಮತ್ತು ವಿಷ್ಣುಕ್ಷೇತ್ರವನ್ನು ಸೃಷ್ಟಿಸಿದ್ದು ಚತುರ್ (ಪೂರ್ವ, ದಕ್ಷಿಣ, ಪಶ್ಚಿಮ ಮತ್ತು ಉತ್ತರ) ವಾಹಿನಿಯಾಗಿ ಹರಿಯುವುದು ತಲಕಾಡಿನ ಸುಂದರತೆಗೆ ಸಾಕ್ಷಿಯಾಗಿದೆ. ಹೀಗಾಗಿ ಹೆಚ್ಚಿನ ಪ್ರವಾಸಿಗರು ಇಲ್ಲಿ ಒಂದಷ್ಟು ಹೊತ್ತು ಸಮಯ ಕಳೆಯಲು ಇಷ್ಟಪಡುತ್ತಾರೆ.ಮೈಸೂರು ಜಿಲ್ಲೆಗೆ ಸೇರಿರುವ ತಲಕಾಡು ಐತಿಹಾಸಿಕ ಸ್ಥಳವಾಗಿ, ಸುಂದರ ಪ್ರವಾಸಿ ತಾಣವಾಗಿ …
Read More »ಚುಂಚನಕಟ್ಟೆ ಜಾನುವಾರು ಜಾತ್ರೆ ದಕ್ಷಿಣ ಭಾರತದಲ್ಲಿಯೇ ಹೆಸರುವಾಸಿ….
ಮೈಸೂರು: ರಾಮನ ಹೆಜ್ಜೆಗುರುತುಗಳು ದೇಶದಾದ್ಯಂತ ನೆಟ್ಟಿವೆ. ಆತ ಕಾಲಿಟ್ಟ ಸ್ಥಳಗಳೆಲ್ಲವೂ ಇವತ್ತಿಗೂ ಪವಿತ್ರ ಕ್ಷೇತ್ರಗಳಾಗಿ ಭಕ್ತರಿಂದ ಪೂಜಿಸಲ್ಪಡುತ್ತಿವೆ. ಇಂತಹ ಕ್ಷೇತ್ರಗಳ ಪೈಕಿ ಜಿಲ್ಲೆಯ ಕೆ.ಆರ್.ನಗರ ಬಳಿಯಿರುವ ಚುಂಚನಕಟ್ಟೆಯೂ ಒಂದಾಗಿದ್ದು, ಇಲ್ಲಿ ರಾಮ ನೆಲೆನಿಂತು ಭಕ್ತರಿಂದ ಪೂಜಿಸಲ್ಪಡುತ್ತಿದ್ದರೆ, ಇಲ್ಲಿ ನಡೆಯುವ ಜಾನುವಾರು ಜಾತ್ರೆ ದಕ್ಷಿಣ ಭಾರತದಲ್ಲಿಯೇ ಹೆಸರುವಾಸಿಯಾಗಿದೆ. ಕೊರೊನಾ ಮತ್ತು ಜಾನುವಾರುಗಳಿಗೆ ತಗುಲಿದ ಚರ್ಮಗಂಟು ರೋಗದ ಕಾರಣದಿಂದಾಗಿ ಕಳೆದ ಕೆಲವು ವರ್ಷಗಳಿಂದ ನಡೆಯದ ಚುಂಚನಕಟ್ಟೆ ಜಾನುವಾರು ಜಾತ್ರೆ ಈ ಬಾರಿ ಅದ್ಧೂರಿಯಾಗಿ …
Read More »ಹೊಸ ವರ್ಷಾಚರಣೆಯ ನೆಪದಲ್ಲಿ ಅಸಭ್ಯವಾಗಿ ವರ್ತಿಸುವುದು,ಕಾನೂನು ಉಲ್ಲಂಘನೆಯ ಚಟುವಟಿಕೆ ನಡೆಸುವವರನ್ನು ಹೆಡೆಮುರಿ ಕಟ್ಟಲು ಮೈಸೂರಿನಲ್ಲಿ ಚಾಮುಂಡಿ ಪಡೆ ತಯಾರಾಗಿದೆ….
ಮೈಸೂರು: ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31ರ ರಾತ್ರಿ ಅಸಭ್ಯವಾಗಿ ವರ್ತಿಸುವುದು, ಕುಡಿದು ಹುಚ್ಚಾಟವಾಡುವುದು ಸೇರಿದಂತೆ ಕಾನೂನು ಉಲ್ಲಂಘನೆಯ ಚಟುವಟಿಕೆ ನಡೆಸುವವರನ್ನು ಹೆಡೆಮುರಿ ಕಟ್ಟಲು ಮೈಸೂರಿನಲ್ಲಿ ಚಾಮುಂಡಿ ಪಡೆ (ಸುರಕ್ಷತಾ ಪಿಂಕ್ ಗರುಡಾ) ತಯಾರಾಗಿದೆ.ಹೊಸ ವರ್ಷಾಚರಣೆ ಸಲುವಾಗಿ ಜನ ಮನೆಯಿಂದ ಹೊರಬಂದು ತಮಗೆ ಇಷ್ಟವಾದ ಸ್ಥಳಗಳಲ್ಲಿ ಪಾರ್ಟಿಗಳನ್ನು ಮಾಡುವುದರಿಂದ ನಗರದಾದ್ಯಂತ ಜನ ಸಂದಣಿಯಿರುತ್ತದೆ. ಹೋಟೆಲ್, ರೆಸಾರ್ಟ್ಗಳಲ್ಲಿ ವರ್ಷಾಚರಣೆಯ ಕಾರ್ಯಕ್ರಮಗಳು ಜೋರಾಗಿಯೇ ನಡೆಯುತ್ತದೆ. ರಾತ್ರಿಯಿಡೀ ಕೆಲವರು ನಗರದಲ್ಲಿ ಅಡ್ಡಾಡುವ ಮೂಲಕ ಹೊಸ …
Read More »ಪ್ರಕರಣದಲ್ಲಿ ನಿಮ್ಮ ಪಾತ್ರ ಇಲ್ಲವೇ ಎಂಬುದನ್ನು ಬಹಿರಂಗಪಡಿಸಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ…..
ಮೈಸೂರು: ಸಂಸದ ಪ್ರತಾಪಸಿಂಹ ಅವರಿಗೆ ಚಾಮುಂಡೇಶ್ವರಿ ಮೇಲೆ ಭಕ್ತಿ ಇದ್ದರೆ ಕೇಂದ್ರದ ವೀಕ್ಷಕರು ಮಾಡಿರುವ ವರದಿಯಲ್ಲಿ ಏನಿದೆ ? ಮನೋರಂಜನ್ಗೂ ನಿಮಗೂ ಸಂಪರ್ಕ ಇಲ್ಲವೇ, ಪ್ರಕರಣದಲ್ಲಿ ನಿಮ್ಮ ಪಾತ್ರ ಇಲ್ಲವೇ ಎಂಬುದನ್ನು ಬಹಿರಂಗಪಡಿಸಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಭದ್ರತಾ ವೈಲ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್ಸಿಂಹ ಹಾಗೂ ಮನೋರಂಜನ್ಗೂ ಏನು ಸಂಬಂಧ ? ಒಟ್ಟು ಪ್ರಕರಣದಲ್ಲಿ ಅವರ ಪಾತ್ರವೇನು …
Read More »ಎರಡು ಬಾರಿಯೂ ಗೆಲುವಿನ ಪತಾಕೆ ಹಾರಿಸಿರುವ ಸಂಸದ ಪ್ರತಾಪ್ ಸಿಂಹ ಅವರು ಈ ಬಾರಿಯ ಚುನಾವಣೆಯಲ್ಲಿ ಸುಲಭವಾಗಿಯೇ ಗೆಲ್ಲುತ್ತಾರೆ….
ಮೈಸೂರು: ಸಂಸತ್ನಲ್ಲಿ ಸ್ಮೋಕ್ ಬಾಂಬ್ ಸಿಡಿಸಿದ ಪ್ರಕರಣದ ಆರೋಪಿಗಳು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದಿದ್ದರು ಎಂಬ ವಿಚಾರದೊಂದಿಗೆ ಅವರ ಹೆಸರು ದೇಶದಾದ್ಯಂತ ಮುನ್ನಲೆಗೆ ಬಂದಿದ್ದು, ಎದುರಾಳಿ ಕಾಂಗ್ರೆಸ್ ನಾಯಕರು ಇದನ್ನು ಹೇಗೆ ಬೇಕೋ ಹಾಗೆ ಬಳಸಿಕೊಳ್ಳುವಲ್ಲಿಯೂ ಯಶಸ್ವಿಯಾಗಿರುವುದರಿಂದ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಲಾಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಕ್ಷೇತ್ರದಲ್ಲಿ ಊಹಾಪೋಹದ ಸುದ್ದಿಗಳು ಹರಿದಾಡುತ್ತಿದ್ದು, ಕೆಲವರು ಈ ಬಾರಿ ಹಾಲಿ ಸಂಸದ ಪ್ರತಾಪ್ ಸಿಂಹ …
Read More »ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ- 2023….
ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಇಂದು ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನ ನವರು ಉದ್ಘಾಟಿಸಿ, ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಸಂತೋಷ ವ್ಯಕ್ತ ಪಡಿಸಿದರು. ಕಳೆದ ಬಾರಿಯಂತೆ ಈ ವರ್ಷವೂ ಕೂಡ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ …
Read More »ಅಮಿತ್ ಷಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ: ಸಿದ್ದರಾಮಯ್ಯ.
ಮೈಸೂರು: ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಲಾಗಿದ್ದು, ಡಿಸೆಂಬರ್ 23 ರಂದು ಅಮಿತ್ ಷಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಶುಕ್ರವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರಪರಿಹಾರ ಸೇರಿದಂತೆ ರಾಜ್ಯದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅವುಗಳನ್ನು ಕೇಂದ್ರ …
Read More »