Breaking News

ಸುಳ್ಯ

ನಟಿ ಗಾಯತ್ರಿ ಜೋಶಿ ಕಾರು ಅಪಘಾತ…

ಶಾರುಖ್ ಖಾನ್ ಅಭಿನಯದ ‘ಸ್ವದೇಶ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಗಾಯತ್ರಿ ಜೋಶಿ ಅವರು ತಮ್ಮ ಪತಿ ವಿಕಾಸ್ ಒಬೆರಾಯ್ ಜೊತೆ ಇಟಲಿಯಲ್ಲಿ ಐಷಾರಾಮಿ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಅಪಘಾತವಾಗಿದೆ. ವಿಕಾಸ್ ಒಬೆರಾಯ್ ಅವರ ಮ್ಯಾನೇಜರ್ ಪ್ರಕಾರ ದಂಪತಿಗಳು ಈಗ ಸುರಕ್ಷಿತವಾಗಿದ್ದಾರೆ. ಈ ಅಪಘಾತ ಸಂಭವಿಸಿದಾಗ ಗಾಯತ್ರಿ ಮತ್ತು ಅವರ ಪತಿ ಇಟಲಿಯ ಸಾರ್ಡಿನಾದಲ್ಲಿ ವಿಹಾರಕ್ಕೆ ತೆರಳಿದ್ದರು. ಗಾಯತ್ರಿ ಮತ್ತು ವಿಕಾಸ್ ಅವರ ಕಾರು ಮತ್ತು ಹಲವಾರು ಕಾರುಗಳು ಮತ್ತು ಕ್ಯಾಂಪರ್ …

Read More »

ಸುಳ್ಯ ಸೇರಿದಂತೆ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ…

ಸುಳ್ಯ (ದಕ್ಷಿಣ ಕನ್ನಡ) : ಕೋಝಿಕ್ಕೋಡ್​​ನಲ್ಲಿ ಇಬ್ಬರು ಶಂಕಿತ ನಿಫಾ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಕೇರಳದ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಸುಳ್ಯ ಸೇರಿದಂತೆ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈಗಾಗಲೇ ನಿಫಾ ವೈರಸ್‌ ಪತ್ತೆಯಾಗಿ ಇಬ್ಬರು ಮೃತಪಟ್ಟ ಕೇರಳದ ಕೊಝಿಕ್ಕೋಡ್ ಜಿಲ್ಲೆಯ ಮರುದ್ವಾಂಕರ, ಆಯಂಚೇರಿ, ಕಾವಿಲಂಪ್ಪಾರ, ವಿಲ್ಯಾಂಪಳ್ಳಿ, ಕುಟ್ಯಾಡಿ, ಮಂಗಲಾಡ್ ಸೇರಿದಂತೆ ಹಲವಾರು …

Read More »

ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ರಾಹುಲ್ ಗಾಂಧಿ ಚಾಲನೆ

ಬೆಂಗಳೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ರಾಹುಲ್ ಗಾಂಧಿ ಚಾಲನೆ ನೀಡಿದರು. ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಈಗಾಗಲೇ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವ ರಾಜ್ಯ ಸರ್ಕಾರ ಇಂದು ಗೃಹಲಕ್ಷಿ ಯೋಜನೆಯ 2,000 ರೂ. ಹಣವನ್ನು ಮಹಿಳೆಯರ ಖಾತೆಗೆ ವರ್ಗಾಯಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಕರ್ನಾಟಕ ಅಭಿವೃದ್ಧಿ ಮಾದರಿ ಆಡಳಿತಕ್ಕೆ 100 ದಿನಗಳು …

Read More »

ಸುಳ್ಯದ ಮೂವರು ಸೇರಿ ಕರಾವಳಿ ಭಾಗದ 11 ವಿಜ್ಞಾನಿಗಳು ಮಹತ್ವದ ಯೋಜನೆಯಲ್ಲಿ ಭಾಗಿಯಾಗಿರುವುದು ವಿಶೇಷ….

ಸುಳ್ಯ: ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್‌ ಅನ್ನು ಸುರಕ್ಷಿತವಾಗಿ ಇಳಿಸಿದ ಕೀರ್ತಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಪಾತ್ರವಾಗಿದೆ. ಈ ಚಂದ್ರಯಾನದ ಯಶಸ್ಸಿಗೆ ನೂರಾರು ವಿಜ್ಞಾನಿಗಳು, ತಂತ್ರಜ್ಞರು, ಇಂಜಿನಿಯರ್‌ಗಳು ಸೇರಿದಂತೆ ಅನೇಕ ಸಿಬ್ಬಂದಿ ಅವಿರತವಾಗಿ ದುಡಿದಿದ್ದಾರೆ. ಈ ತಂಡದಲ್ಲಿ ಸುಳ್ಯದ ಮೂವರು ಸೇರಿ ಕರಾವಳಿ ಭಾಗದ 11 ವಿಜ್ಞಾನಿಗಳು ಮಹತ್ವದ ಯೋಜನೆಯಲ್ಲಿ ಭಾಗಿಯಾಗಿರುವುದು ವಿಶೇಷ. ಕಳೆದ ಹಲವು ವರ್ಷಗಳಿಂದ ಇಸ್ರೋದಲ್ಲಿ ಡಿಜಿಟಲ್ ಸ್ಟ್ರಕ್ಚರ್ ಡಿಸೈನ್ ವಿಭಾಗದಲ್ಲಿ ಕಾರ್ಯ …

Read More »

ಹಾವೇರಿಗೆ ಬರಲು ಹಾಂಸಿ, ಶಾಕಾರ ಗ್ರಾಮದ ಜನರ ಪರದಾಟ….

ಹಾವೇರಿ: ತಾಲೂಕಿನ ಹಾಂಸಿ, ಶಾಕಾರ ಗ್ರಾಮಗಳನ್ನು ತುಂಗಭದ್ರಾ ನದಿ ಹಾವೇರಿ ಜಿಲ್ಲೆಯಿಂದ ಪ್ರತ್ಯೇಕಿಸುತ್ತದೆ. ಇದರಿಂದಾಗಿ ಗ್ರಾಮಸ್ಥರು ತಮ್ಮ ನಿತ್ಯ ಕೆಲಸ ಕಾರ್ಯಕ್ಕಾಗಿ ಹಾವೇರಿ ತಾಲೂಕು ಕೇಂದ್ರ ಹಾಗೂ ಸಮೀಪದ ಗ್ರಾಮಗಳನ್ನು ಅವಲಂಬಿಸಿದ್ದಾರೆ. ಇದೇ ಕಾರಣದಿಂದ ಸಂಚರಿಸಲು ಬ್ರಿಡ್ಜ್ ಇಲ್ಲದೇ ಸಂಕಷ್ಟ ಎದುರಿಸುತ್ತಿದ್ದಾರೆ. ತೆಪ್ಪ ಅಥವಾ ದೋಣಿಗಳ ಸಹಾಯದಿಂದಲೇ ತುಂಗಭದ್ರಾ ನದಿ ದಾಟಿಯೇ ಹಾವೇರಿಗೆ ಬರಬೇಕಾದ ಪರಿಸ್ಥಿತಿ ಇದೆ. ಇದಲ್ಲದೇ ಇದ್ದರೆ 40 ಕಿ.ಮೀ ದೂರ ಕ್ರಮಿಸಿ ಹಾವೇರಿಯ ಗುತ್ತಲ, ಹಾವನೂರು …

Read More »

ಎಲಿಜಬೆತ್ ಅವರು ಚೆನ್ನೈನಲ್ಲಿ ಪಶುವೈದ್ಯಕೀಯ ರೋಗಶಾಸ್ತ್ರಜ್ಞರಾಗಿದ್ದಾರೆ…

ಸುಳ್ಯ: ಕೇರಳದ ಗಡಿ ಪ್ರದೇಶವಾದ ಬದಿಯಡ್ಕದ ಎಲಿಜಬೆತ್‌ ವರ್ಗೀಸ್​​ಗೆ ಅಮೆರಿಕದಿಂದ 2.5 ಕೋಟಿ ರೂಪಾಯಿಯ ಫೆಲೋಶಿಪ್ ಲಭ್ಯವಾಗಿದೆ. ಅಮೆರಿಕದ ಸ್ಟಿಲ್ವಾಟರ್ ಒಕ್ಲಹೋಮ ಸ್ಟೇಟ್ ಯೂನಿವರ್ಸಿಟಿಯಿಂದ 5 ವರ್ಷಗಳ ಸಂಶೋಧನೆಗಾಗಿ ಬದಿಯಡ್ಕದ ಚುಳ್ಳಿಕಾನ ನಿವಾಸಿ ಎಲಿಜಬೆತ್ ಅವರಿಗೆ ಪಶುವೈದ್ಯಕೀಯ ರೋಗಶಾಸ್ತ್ರದಲ್ಲಿ ಸಂಶೋಧನೆ ನಡೆಸುವುದಕ್ಕಾಗಿ ಈ 2.5 ಕೋಟಿ ರೂಪಾಯಿಯ ಫೆಲೋಶಿಪ್ ಲಭ್ಯವಾಗಿದೆ. ಎಲಿಜಬೆತ್ ಅವರು ಚೆನ್ನೈನಲ್ಲಿ ಪಶುವೈದ್ಯಕೀಯ ರೋಗಶಾಸ್ತ್ರಜ್ಞರಾಗಿದ್ದಾರೆ. ಎಲಿಜಬೆತ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಮಿಳುನಾಡಿನಲ್ಲಿ ಪಡೆದು ನಂತರದ ಶಿಕ್ಷಣವನ್ನು ಗೋರಕ್‌ಪುರದಲ್ಲಿ …

Read More »