Breaking News

Breaking News

ಬೆಂಗಳೂರಿನ ಮನೆಯಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಒಂದೂವರೆ ವರ್ಷದ ಹಿಂದೆ ಮೃತಪಟ್ಟಿರುವ ಶಂಕೆ!

ಬೆಂಗಳೂರು: ಟಿ. ದಾಸರಹಳ್ಳಿ ಬಾಗಲಗುಂಟೆ ವ್ಯಾಪ್ತಿಯ ಹಾವನೂರು ಬಡಾವಣೆಯಲ್ಲಿ ಒಂದೂವರೆ ವರ್ಷದಿಂದ ಮುಚ್ಚಿದ್ದ ಮನೆಯ ಬಾತ್‌ರೂಂನಲ್ಲಿ 50 ವರ್ಷದ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ದಾಕ್ಷಾಯಿಣಿ (50) ಎಂದು ಗುರುತಿಸಲಾಗಿದೆ. ಸುಮಾರು 10 ವರ್ಷಗಳ ಹಿಂದೆ ಪತಿ ಉಮೇಶ್ ಮೃತಪಟ್ಟಿದ್ದು, ಬಳಿಕ ಅನಾರೋಗ್ಯದಿಂದ ಏಕೈಕ ಮಗನೂ ಮೃತಪಟ್ಟಿದ್ದ. ಕುಟುಂಬಸ್ಥರನ್ನು ಕಳೆದುಕೊಂಡಿದ್ದ ದಾಕ್ಷಾಯಿಣಿ ಹಲವು ವರ್ಷಗಳಿಂದ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಸುಮಾರು ಒಂದೂವರೆ ವರ್ಷದಿಂದ ಮನೆ ಮುಚ್ಚಿದ್ದ …

Read More »

ಬೆಂಗಳೂರಲ್ಲಿ ಪಾಪಿ ಪತಿಯಿಂದ ಪೈಶಾಚಿಕ ಕೃತ್ಯ.. ಪತ್ನಿಯ ಜೀವ ತೆಗೆದು ಮೋರಿಗೆ ಎಸೆದ! ಕಾರಣ?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಿ, ಮೃತದೇಹವನ್ನು ಕಸದ ಮೋರಿಗೆ ಎಸೆದಿರುವ ಘಟನೆ ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೀತಾ (48) ಕೊಲೆಯಾದ ಮಹಿಳೆಯಾಗಿದ್ದು, ಆಕೆಯ ಪತಿ ಆಂಟೋನಿ (63) ಆರೋಪಿಯಾಗಿದ್ದಾನೆ. ಆಂಟೋನಿಗೆ ಕುಡಿತದ ಚಟವಿದ್ದು, ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಘಟನೆ ನಡೆದ ದಿನವೂ ಮದ್ಯಪಾನ ಮಾಡಿ ಮನೆಗೆ ಬಂದಿದ್ದ ಆಂಟೋನಿ, ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದಾಗ …

Read More »

ವಸತಿ ನಿಲಯದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಹಾಸ್ಟೆಲ್ ಸಿಬ್ಬಂದಿ ನಿರ್ಲಕ್ಷ್ಯದ ಆರೋಪ!

ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದ ಕಸ್ತೂರಿಬಾ ವಸತಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಕಾರಗಾನಹಟ್ಟಿ ಗ್ರಾಮದ ನರಸಿಂಹಮೂರ್ತಿ ಹಾಗೂ ಶಾರದಮ್ಮ ದಂಪತಿಯ ಪುತ್ರಿ ಪ್ರಿಯಾಂಕ (13) ಮೃತ ಬಾಲಕಿ. 6 ಮತ್ತು 7ನೇ ತರಗತಿಯನ್ನು ಇದೇ ಹಾಸ್ಟೆಲ್‌ನಲ್ಲಿ ಓದಿದ್ದ ಪ್ರಿಯಾಂಕ, 8ನೇ ತರಗತಿಗೆ ಇಲ್ಲಿಗೆ ಸೇರಲು ಇಷ್ಟವಿರಲಿಲ್ಲ ಎನ್ನಲಾಗಿದೆ. ಮೊರಾರ್ಜಿ ವಸತಿ ಶಾಲೆಗೆ ಸೀಟು ಸಿಗದ ಹಿನ್ನೆಲೆಯಲ್ಲಿ ಆ.7ರಂದು ಬೆಳಗ್ಗೆ ಪೋಷಕರು ಮತ್ತೆ …

Read More »

ಬೆಚ್ಚಿಬಿದ್ದ ಯಾದಗಿರಿ; ಹಾಡಹಗಲೇ ಸಿನಿಮೀಯ ರೀತಿ ಪತ್ರಕರ್ತನ ಕಿಡ್ನಾಪ್!

ವಿಜಯಪುರ: ಹಾಡಹಗಲೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಘಟನೆ ನಗರದ ಲುಂಬಿನಿ ಪಾರ್ಕ್‌ ಎದುರು ಶನಿವಾರ ನಡೆದಿದೆ. ಕ್ರಾಂತಿ ಪತ್ರಿಕೆಯ ಜಿಲ್ಲಾ ವರದಿಗಾರ ಸಾಗರ್‌ಕುಮಾರ ದೇಸಾಯಿ (35) ಅಪಹರಣಕ್ಕೊಳಗಾದವರು. ಬೆಳಗ್ಗೆ 11.45ರ ಸುಮಾರಿಗೆ ನಂಬರ್ ಪ್ಲೇಟ್‌ ಇಲ್ಲದ ಕಾರಿನಲ್ಲಿ ಬಂದ ನಾಲ್ವರು ಸಾಗರ್‌ ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಬಳಿಕ ಸುತ್ತಮುತ್ತಲಿನವರು ಗಮನಿಸುವ ಮುನ್ನವೇ ಅವರನ್ನು ಕಾರಿನಲ್ಲಿ ಹಾಕಿಕೊಂಡು ವೇಗವಾಗಿ ಪರಾರಿಯಾಗಿದ್ದಾರೆ. ತಡೆಯಲು ಬಂದ …

Read More »

ಕೆಲಸ ಬಿಟ್ಟರೂ ಲೇಡಿ ಬಾಸ್‌ ಕಿರುಕುಳ: ಡೆತ್‌ನೋಟ್‌ ಬರೆದಿಟ್ಟು ಮೈಸೂರು ಮಹಿಳೆ ದುರಂತ ಅಂತ್ಯ!

ಮೈಸೂರು: ರಜೆ ನೀಡದೆ ಕಿರುಕುಳ ನೀಡುತ್ತಿದ್ದ ಮಹಿಳಾ ಸೂಪರ್‌ವೈಸರ್ ವಿರುದ್ಧ ಡೆತ್‌ನೋಟ್ ಬರೆದಿಟ್ಟು 45 ವರ್ಷದ ಮಹಿಳೆಯೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿನಕಲ್‌ನಲ್ಲಿ ನಡೆದಿದೆ. ಮೃತರನ್ನು ನಾಗೇಶ್ವರಿ ಎಂದು ಗುರುತಿಸಲಾಗಿದೆ. ಹಿನಕಲ್‌ನ ಮಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರು, ನಾಲ್ಕು ತಿಂಗಳ ಹಿಂದೆ ಸೂಪರ್‌ವೈಸರ್ ಆಗಿದ್ದ ಡಾಲಿ ಎಂಬುವವರು ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಮಾರ್ಟ್ ಕೆಲಸ ಬಿಟ್ಟು ಬೇರೆ ಶಾಪಿಂಗ್ ಮಾಲ್‌ಗೆ ಸೇರಿದ್ದರೂ ಅಲ್ಲಿಗೂ …

Read More »

ಎಣ್ಣೆ ಕಿಕ್​​ನಲ್ಲಿ ಲವರ್​ ಮನೆ ಬಾಗಿಲು ಬಡಿದವ ಯಮನ ಪಾದ ಸೇರಿದ! ಅಷ್ಟಕ್ಕೂ ಅಲ್ಲಿ ಆಗಿದ್ದೇನು?

ಬೆಂಗಳೂರು: ಮಧ್ಯರಾತ್ರಿ ಪ್ರೇಯಸಿ ಮನೆಗೆ ತೆರಳಿ ಬಾಗಿಲು ಬಡಿದಿದ್ದ ಯುವಕ, ಮನೆಯವರು ಹೊರಬರುತ್ತಿದ್ದಂತೆ ಭಯಗೊಂಡು ಪರಾರಿಯಾಗಲು ಯತ್ನಿಸುವ ವೇಳೆ ಮೊದಲ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾರಕ್ಕಿ ನಿವಾಸಿ ಮಹದೇವಸ್ವಾಮಿ (21) ಮೃತ ಯುವಕ. ಡೆಲಿವರಿ ಬಾಯ್ ಆಗಿದ್ದ ಆತ, ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆ.5ರಂದು ಸ್ನೇಹಿತರೊಂದಿಗೆ ಪಾರ್ಟಿ ಮುಗಿಸಿ ಮದ್ಯದ ಅಮಲಿನಲ್ಲಿ ರಾತ್ರಿ 12.30ರ ಸುಮಾರಿಗೆ ಯುವತಿ …

Read More »

ಬಿಡದಿ: ಹೆದ್ದಾರಿಯಲ್ಲಿ ಬಸ್ ಪಲ್ಟಿ; ಇಬ್ಬರ ಸಾವು

ಬಿಡದಿ (ರಾಮನಗರ): ಇಲ್ಲಿನ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅವರೆಗೆರೆ ಸೇತುವೆ ಬಳಿ ಬೆಳಿಗ್ಗೆ ಕೇರಳದ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಹಲವರಿಗೆ ಗಾಯವಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದಿಂದ ರಾತ್ರಿ ಹೊರಟಿದ್ದ ಬಸ್ ಬೆಂಗಳೂರಿಗೆ ಬರುತ್ತಿತ್ತು. ಅತಿ ವೇಗವಾಗಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕ ನಿದ್ರೆ ಮಂಪರಿನಲ್ಲಿ ರಸ್ತೆ ವಿಭಜಕಕ್ಕೆ ಗುದ್ದಿದಾಗ ಬಸ್ ಪಲ್ಟಿಯಾಗಿದೆ. ಶವಗಳನ್ನು ಚಲ್ಲಘಟ್ಟದಲ್ಲಿರುವ ರಾಜರಾಜೇಶ್ವರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು …

Read More »

ಸಂಜೀವಿನಿ ಒಕ್ಕೂಟದ ಮತ್ತೊಂದು ಅಕ್ರಮ ಬಯಲು| ಹೆಬ್ರಿಯಲ್ಲಿ ಮೂರನೇ ಪ್ರಕರಣ ದಾಖಲು: 28ಲಕ್ಷ ರೂ. ವಂಚನೆ

ಉಡುಪಿ, ಆ. 8: ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಿಂದ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಕಳೆದ ಒಂದು ತಿಂಗಳಲ್ಲಿ ದಾಖಲಾದ ಮೂರು ಪ್ರಕರಣಗಳಲ್ಲಿ ಒಟ್ಟು ₹84.69 ಲಕ್ಷ ಹಣವನ್ನು ಮೋಸ ಮಾಡಿರುವುದು ವರದಿಯಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣ, ಸ್ವಾವಲಂಬನೆ ಮತ್ತು ಉಳಿತಾಯ ಸಂಸ್ಕೃತಿ ಬೆಳೆಸುವ ಉದ್ದೇಶದಿಂದ ಆರಂಭಿಸಲಾದ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಲ್ಲಿ ನಡೆಯುತ್ತಿರುವ ವಂಚನೆ ಪ್ರಕರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ಸಂಬಂಧ ಹಿರಿಯಡ್ಕ, …

Read More »

ಬೆಂಗಳೂರಲ್ಲಿ 1 ತಿಂಗಳ ಗಂಡು ಮಗುವನ್ನು ದೇಗುಲದಲ್ಲಿ ಬಿಟ್ಟು ಹೋದ ಪಾಪಿಗಳು!

ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಗಟ್ಟಿಗುಂದ ಗ್ರಾಮದ ಬಳಿ ಒಂದು ತಿಂಗಳು ಹಸುಗೂಸನ್ನು ಪಾಪಿಗಳು ದೇಗುಲದಲ್ಲಿ ಬಿಟ್ಟು ಹೋಗಿದ್ದಾರೆ. ಸೇವಾಲಾಲ್ ದೇವಸ್ಥಾನದ ಬಳಿ ಪಾಪಿಗಳು ಒಂದು ತಿಂಗಳ ಗಂಡು ಮಗುವನ್ನು ಬಿಟ್ಟು ಹೋಗಿದ್ದಾರೆ. ಮಗುವಿನ ಚಿರಾಟ ಕೇಳಿ ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ. ಮಗುವನ್ನು ಕನಕಪುರ ತಾಲೂಕು, ಆಸ್ಪತ್ರೆಗೆ ದಾಖಲಿಸಿದ್ದು, ನಂತರ ರಾಮನಗರ ದತ್ತು …

Read More »

ಸ್ನ್ಯಾಕ್ಸ್ ಪ್ಯಾಕೆಟ್‌ನಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಕಾಲೇಜು ಬಳಿ ಮಾರಾಟ: ಆರೋಪಿ ಬಂಧನ

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉದ್ಯಮಬಾಗ ಪೊಲೀಸರು ಬಂಧಿಸಿದ್ದಾರೆ. ಭೋಲು ಪ್ರಜಾಪತಿ ಎಂಬಾತ ಕಾಲೇಜೊಂದರ ಬಳಿ ಗಾಂಜಾ ಚಾಕ್ಲೆಟ್ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯಿಂದ ₹54 ಸಾವಿರ ಮೌಲ್ಯದ 6 ಕೆಜಿ ಗಾಂಜಾ, ಮೊಬೈಲ್ ಹಾಗೂ ಸ್ಕೂಟಿಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹94 ಸಾವಿರ …

Read More »