Breaking News

ಮಂಡ್ಯ

ಮಂಡ್ಯದಲ್ಲಿ ಹೋಳಿ ಹಬ್ಬದ ಊಟ ಸೆವಿಸಿ ವಿದ್ಯಾರ್ಥಿಗಳ ದುರಂತ ಸಾವು

ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ಮಾರ್ಚ್ ರಂದು ಹೋಳಿ ಹಬ್ಬಕ್ಕೆ ಭರ್ಜರಿ ಊಟ ಒಂದು ಮಾಡಿಸಿದ್ದರು. ಆದರೆ ಊಟ ಹೆಚ್ಚಾಗಿ ಉಳಿದಿದ್ದರಿಂದ. ಟೀ ಕಾಗೆಪುರದಲ್ಲಿರುವ ಗೋಕುಲ್ ವಿದ್ಯಾಸಂಸ್ಥೆಯ ಹಾಸ್ಟೆಲ್ ಒಂದಕ್ಕೆ ಊಟವನ್ನು ಕೊಟ್ಟಿದ್ದರು. ಈ ಊಟವನ್ನು ಸೇವನೆ ಮಾಡಿದ ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದರು. ವಸಂತ ಶಾಲೆಯ ಐದು ವಿದ್ಯಾರ್ಥಿಗಳನ್ನು ತೀವ್ರಗಟ್ಟಿನಲ್ಲಿ ಚಿಕಿತ್ಸೆ ನೀಡಲಾಗಿದೆ. ಆದರೆ ಫುಡ್ ಪಾಯಿಸನ್ ಯಿಂದ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ.

Read More »

ಮಂಡ್ಯದಲ್ಲಿ ಆತ್ಮಹತ್ಯೆಗೆ ಶರಣಾದ ನವವಿವಾಹಿತ , ನೆನು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

ಮಂಡ್ಯ ಜಿಲ್ಲೆಯ ಪಾಂಡಾಪುರ ತಾಲೂಕಿನ ಶಿಂಡ ಬೋಗಂಡಿ ಹಳ್ಳಿಯಲ್ಲಿ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ರಾಧಿಕಾ ಎಂದು ಗುರುತಿಸಲಾಗಿದ್ದು. ಪತಿಯ ಚಿಕ್ಕಪ್ಪನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಕುಟುಂಬ ಕಲಹವೆ ಸಾವಿಗೆ ಕಾರಣ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲೆಯಾಗಿದೆ.

Read More »

ಪ್ರೀತಿಸಿ ಮದುವೆಯಾದ ಜೋಡಿಗೆ ಮನೆಯಲ್ಲಿ ಬಹಿಷ್ಕಾರ. ನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಂಡ್ಯ ಜಿಲ್ಲೆಯಲ್ಲಿ ಜೋಡಿ ಒಂದು ಪ್ರೀತಿಸಿ ಮದುವೆಯಾದವರನ್ನು ಮನೆಯಿಂದ ಬಹಿಷ್ಕಾರ ಹಾಕಿದ ಹಿನ್ನೆಲೆಯಲ್ಲಿ ಯುವತಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಮಂಡ್ಯದ ಪಾಂಡವಪುರ ತಾಲ್ಲೂಕಿನ ಶಿಂಡಬೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದ ಮನನೊಂದ ರಾಧಿಕಾ ಚಿಕ್ಕಪ್ಪನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Read More »

ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಆಕ್ರೋಶ…

ಮಂಡ್ಯ: ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಲ್ಲಿದ್ದ ಹಣವನ್ನು ಬಾಕಿ ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಆಫ್ ಬರೋಡದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ನಗರದ ನೂರಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾಂಕ್ ಆಫ್ ಬರೋಡಾ ಶಾಖೆಗಳಲ್ಲಿ ರೈತರು ಪಡೆದಿರುವ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಂಡಿರುವ …

Read More »

ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆ…

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಮಳವಳ್ಳಿ ತಾಲ್ಲೂಕಿನ ಹಲಗೂರು ಹಾಗೂ ಕ್ಯಾತನಹಳ್ಳಿ ಗ್ರಾಮದಲ್ಲಿ ಬರ ಪರಿಸ್ಥಿತಿಯಿಂದ ರಾಗಿ ಹಾಗೂ ಮುಸುಕಿನ ಜೋಳ ಬೆಳೆ ಹನಿ ಉಂಟಾಗಿರುವ ಸ್ಥಳ ವೀಕ್ಷಿಸಿ ರೈತರಿಗೆ ಧೈರ್ಯ ತುಂಬಿ, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.ನಂತರ ಮಾತನಾಡಿದ ಅವರು ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿ, …

Read More »

ನಾನೂ ಸಹ ಅವರಪ್ಪನ ತರ ಮಾತನಾಡುತ್ತೇನೆ: ಎನ್. ಚೆಲುವರಾಯಸ್ವಾಮಿ.

ಮಂಡ್ಯ: ಕುಮಾರಸ್ವಾಮಿ ಅವರು ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೆ ಮಾತನಾಡುತ್ತಿದ್ದಾರೆ. ಅವರ ರೀತಿ ಮಾತನಾಡೋದು ಸರಿ ಅಂದರೆ ನಾನೂ ಸಹ ಅವರಪ್ಪನ ತರ ಮಾತನಾಡುತ್ತೇನೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಗುಡುಗಿದರು.ಮಳವಳ್ಳಿ ತಾಲೂಕು ಹಲಗೂರಿನಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಲಿ, ಅವರ ಬಳಿ ಇರುವ ಪೆನ್‌ಡ್ರೈವ್ …

Read More »

2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಸಮಲತಾ ಹಾಗೂ ನಿಖಿಲ್‌ ಕುಮಾರಸ್ವಾಮಿ ನಡುವೆ ತೀವ್ರ ಸ್ಪರ್ಧೆ…

ಮಂಡ್ಯ: 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಸಮಲತಾ ಹಾಗೂ ನಿಖಿಲ್‌ ಕುಮಾರಸ್ವಾಮಿ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟು, ಚುನಾವಣೆಯಲ್ಲಿ ಸುಮಲತಾ ಅಂಬರೀಶ್‌ ಗೆಲುವು ಸಾಧಿಸಿದ್ರು. ಆದರೆ, ನಾನು ಮಂಡ್ಯ ಕ್ಷೇತ್ರವನ್ನ ಬಿಟ್ಟು ಕೊಡಲ್ಲ, ಮುಂದೆ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದ ಸುಮಲತಾ ಇದೀಗ ಇಕ್ಕಟ್ಟಿಗೆ ಸಿಲುಕಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಸರ್ಕಾರ ರಚಿಸಿರುವ ಕಾಂಗ್ರೆಸ್‌ ಇದೀಗ, ಲೋಕಸಭಾ ಚುನಾವಣೆಯಲ್ಲಿ …

Read More »

ವಿಶೇಷ ಹಾಗೂ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳು ಬೆಲ್ಲದಲ್ಲಿ ತಯಾರಿ….

ಮಂಡ್ಯ: ಗಣಪತಿ ಹಬ್ಬ ಇನ್ನೇನು ಬಂದೇ ಬಿಡ್ತು. ಗಣಪತಿ ಹಬ್ಬದಲ್ಲಿ ಗಣೇಶನ ಮೂರ್ತಿಯನ್ನು ಕೂರಿಸಿ ಭಕ್ತಿ-ಭಾವದಿಂದ ಪೂಜೆ ಸಲ್ಲಿಸುವುದು ವಾಡಿಕೆ. ಹೀಗಾಗಿ ಮಾರುಕಟ್ಟೆಯಲ್ಲೂ ಸಹ ಮಣ್ಣಿನ ಗಣಪ, ಪಿಒಪಿ ಗಣೇಶನ ಮೂರ್ತಿಗಳು ಮಾರಾಟಕ್ಕೆ ಸಜ್ಜಾಗಿವೆ. ಆದರೆ ಸಕ್ಕರೆ ನಗರಿ ಮಂಡ್ಯದಲ್ಲಿ ಎಲ್ಲಿಯೂ ಸಿಗದ ವಿಶೇಷ ಹಾಗೂ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳು ಬೆಲ್ಲದಲ್ಲಿ ತಯಾರಾಗಿದ್ದು, ಜನರ ಗಮನ ಸೆಳೆಯುತ್ತಿವೆ. ಹಾಗಾದ್ರೆ ಈ ಸ್ಟೋರಿ ನೋಡಿ. ಮಂಡ್ಯ ಅಂದ್ರೆ ವಿವಿಧ ಬಗೆಯ …

Read More »

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು…

ಮಂಡ್ಯ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಹಿನ್ನೆಲೆ, ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಬುಧವಾರ ಜಂಟಿ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿ ಮಂಗಳವಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಸಿಐಡಿ, ಐಜಿ ಪ್ರವೀಣ್‌ ಮಧುಕರ್‌ ಪವಾರ್‌ ನೇತೃತ್ವದ ತಂಡ ಜಿಲ್ಲಾಧಿಕಾರಿ ಕಚೇರಿ …

Read More »

ಲೋಕಾಯುಕ್ತ ದಾಳಿ, ತಹಶೀಲ್ದಾರ್‌ ವಿರುದ್ಧ ಪ್ರಕರಣ

ಮಂಡ್ಯ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಒಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಪಾಂಡವಪುರ ತಹಶೀಲ್ದಾರ್ ಸೌಮ್ಯಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುರುವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತಹಶೀಲ್ದಾರ್ ಕಚೇರಿಯಲ್ಲಿ 40 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದಾಗ ಸೌಮ್ಯಾ ಸಿಕ್ಕಿಬಿದ್ದಿದ್ದಾರೆ. ಗ್ರಾಮಲೆಕ್ಕಾಧಿಕಾರಿ ಒಬ್ಬರ ವರ್ಗಾವಣೆ ವಿಚಾರಕ್ಕೆ ಸೌಮ್ಯಾ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗ್ರಾಮಲೆಕ್ಕಾಧಿಕಾರಿ ಮರಿಸ್ವಾಮಿ …

Read More »

You cannot copy content of this page