Breaking News

ಚಿಕ್ಕಬಳ್ಳಾಪುರ

ಶೂಟೌಟ್‌: ಪ್ರತಿಭಟನೆ ಮಾಡುತ್ತಿದ್ದವನ ಮೇಲೆ ಗುಂಡು ಹಾರಿಸಿದ ಮಾಜಿ ಶಾಸಕನ ಸಂಬಂಧಿ!

ಹಾಡಹಗಲಲ್ಲೇ, ಎಲ್ಲರೂ ನೋಡನೋಡುತ್ತಿದ್ದಂತೆ ಸಕಲೇಶ್‌ಕುಮಾರ್‌ ಶೂಟೌಟ್‌ ನಡೆಸಿದ್ದಾನೆ. ಈತ ಬಿಜೆಪಿ ಮಾಜಿ ಶಾಸಕ ವೈ. ಎ.ನಾರಾಯಣಸ್ವಾಮಿ ಅವರ ಸಂಬಂಧಿ ಎಂದು ಹೇಳಲಾಗಿದೆ. ವೈ.ಎ.ನಾರಾಯಣಸ್ವಾಮಿ ಕುಟುಂಬಸ್ಥರಿಗೆ ಸೇರಿದ ಗಣಿಗಾರಿಕಾ ಪ್ರದೇಶಕ್ಕೆ ರಸ್ತೆ ಮಾಡಲು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಶೂಟೌಟ್‌ ನಡೆದಿದೆ ಎನ್ನಲಾಗಿದೆ. ಗಣಿಗಾರಿಕಾ ಪ್ರದೇಶದ ರಸ್ತೆ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿ ಚಿಕನ್‌ ರವಿ ಮತ್ತು ಇತರ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸಕಲೇಶ್‌ಕುಮಾರ್‌ ಶೂಟೌಟ್‌ ಮಾಡಿದ್ದಾನೆ. ಶೂಟೌಟ್‌ನಿಂದ ಗಾಯಗೊಂಡ ರವಿಯನ್ನ …

Read More »

ಅಪಘಾತ: ಹೊತ್ತಿ ಉರಿದ ಬಸ್: ಹತ್ತಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲು.

ಖಾಸಗಿ ಬಸ್ ವಿದ್ಯುತ್ ಕಂಬ ಹಾಗೂ ಕಾಂಪೌಂಡ್ ಗೆ ಹೊಡೆದಿದ್ದು, ಪರಿಣಾಮ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಬಸ್ ಹೊತ್ತಿ ಉರಿಯಲಾರಂಭಿಸಿದೆ.ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೈಕ್ ಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ. ಪ್ರಕರಣಗಳಲ್ಲಿ ಜಪ್ತಿ ಮಾಡಿದ್ದ ಬೈಕ್ ಗಳಲ್ಲಿ ಇಲ್ಲಿ ತಂದು ನಿಲ್ಲಿಸಲಾಗಿತ್ತು. ಈ ಬೈಕ್ ಗಳು ಬೆಂಕಿಗಾಹುತಿಯಾಗಿವೆ.

Read More »

ಚಿಕ್ಕಬಳ್ಳಾಪುರ: ಪ್ರೀತಿಸಿ ವಿವಾಹವಾದ ಹಿಂದೂ—ಮುಸ್ಲಿಮ್ ಜೋಡಿ!

ಹಿಂದೂ ಯುವಕ ಹಾಗೂ ಮುಸ್ಲಿಮ್ ಯುವತಿ ಪರಸ್ಪರ ಪ್ರೀತಿಸಿ ಪೋಷಕರ ವಿರೋಧದ ನಡುವೆಯೂ ಪೊಲೀಸ್ ಠಾಣೆಯಲ್ಲಿ ಒಂದಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ.ಜೋಡಿ ಕಳೆದ 2ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ ಇವರಿಬ್ಬರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ ನಾವಿಬ್ಬರು ಜೊತೆಯಾಗಿ ಬದುಕುತ್ತೇವೆ ಎಂದು ಜೋಡಿ ತೀರ್ಮಾನಿಸಿ, ಮನೆ ಬಿಟ್ಟು ಬಂದು ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯ ಮೊರೆ ಹೋಗಿದ್ದರು.ಕೊನೆಗೂ ಪೋಷಕರ ವಿರೋಧದ ನಡುವೆಯೂ ಜೋಡಿ ದೇವಸ್ಥಾನವೊಂದರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. …

Read More »

ಕಾರು ಟೈರ್ ಸ್ಫೋಟ! ಕೂಡಲೇ ಆಸ್ಪತ್ರೆಗೆ ದಾಖಲು. ಚಿಕಿತ್ಸೆ ಫಲಿಸದೇ ಮೂವರು ಸಾವು

ಚಿಕ್ಕಬಳ್ಳಾಪುರದ ಚಿಂತಾಮಣಿ ಯಲ್ಲಿ ಟಯರ್ ಸ್ಫೋಟಗೊಂಡು ಕಾರು ಪಾಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಚಿಕಿತ್ಸೆ ಫಲಕಾರಿ ಆಗದೆ ಆಸ್ಪತ್ರೆಯಲ್ಲಿ ಬಿಡುತ್ತದೆ ಬೆಂಗಳೂರಿನ ಗುರಪ್ಪನ ಪಾಳ್ಯದ ಅಬ್ದುಲ್ ರೋಹಿನ್ ಅವರ ಪುತ್ರ ಸಕ್ಲಿನ್ ಸ್ಥಳದಲ್ಲಿ ಅಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲೆಸಿದ್ದ ಸರ್ದಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Read More »

ಚಿಕ್ಕಬಳ್ಳಾಪುರದಲ್ಲಿ ಇಂದು ನಮ್ಮ ಗ್ರಾಮ, ನಮ್ಮ ಶಾಸಕರು ಕಾರ್ಯಕ್ರಮ

ಚಿಕ್ಕಬಳ್ಳಾಪುರ: ನಗರದಲ್ಲಿ ಇಂದು ‘ನಮ್ಮ ಗ್ರಾಮ ನಮ್ಮ ಶಾಸಕರು’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆ ನಡೆಯಲಿದೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಇಂದು ಬೆಳಗ್ಗೆ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೌಡಗೆರೆ ಮತ್ತು ಅದ್ದೆಗೊಪ್ಪ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ನಮ್ಮ ಗ್ರಾಮ ನಮ್ಮ ಶಾಸಕರು’ ಕಾರ್ಯಕ್ರಮ ಸಂದರ್ಭದಲ್ಲಿ ತಾಲ್ಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರಲಿದ್ದಾರೆ ಎಂದು ಶಾಸಕರ ಕಚೇರಿ …

Read More »

2027 ಮಾರ್ಚ್ ಅಂತ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ಯೋಜನೆ

ಚಿಕ್ಕಬಳ್ಳಾಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಹಳ್ಳಿ ಬಳಿ ಸೆ.6ರಂದು ಎತ್ತಿನಹೊಳೆ ನೀರಾವರಿ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಹೀಗೆ ಮೊದಲ ಹಂತದ ಯೋಜನೆಗೆ ಚಾಲನೆ ನೀಡಿದ್ದರೂ ಜಿಲ್ಲೆಗೆ ಎತ್ತಿನಹೊಳೆ ನೀರು ಬರಲು ಇನ್ನೂ ಎರಡು ವರ್ಷ ಬೇಕಿದೆ. ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ಯಾವಾಗ ಹರಿಸಲಾಗುತ್ತದೆ’ ಎಂದು ಬಾಗೇಪಲ್ಲಿ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ, ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಳಗಾವಿಯಲ್ಲಿ …

Read More »

ಚಿಕ್ಕಬಳ್ಳಾಪುರ: ಬಿಸಿಯೂಟ ಸಿಬ್ಬಂದಿಗೆ ಬಾರದ ಗೌರವಧನ

ಚಿಕ್ಕಬಳ್ಳಾಪುರ: ಸರ್ಕಾರವು ಈ ಬಾರಿ ಬರಗಾಲದ ಕಾರಣ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಬರಗಾಲದಲ್ಲಿಯೂ ಬಿಸಿಯೂಟ ನೀಡಿತ್ತು, ವಿದ್ಯಾರ್ಥಿಗಳು ರಜೆ ಇದ್ದರೂ ಬಿಸಿಯೂಟಕ್ಕಾಗಿ ಶಾಲೆಗೆ ಬರುತ್ತಿದ್ದರು. ಹೀಗೆ ಬರದಲ್ಲಿಯೂ ಬಿಸಿಯೂಟವನ್ನು ತಯಾರಿಸಿದ ಸಿಬ್ಬಂದಿಗೆ ಮಾತ್ರ ಇಲ್ಲಿಯವರೆಗೂ ಆ ಎರಡು ತಿಂಗಳ ಗೌರವಧನವನ್ನು ಸರ್ಕಾರ ಪಾವತಿಸಿಲ್ಲ. ಏಪ್ರಿಲ್ ಮತ್ತು ಮೇ ತಿಂಗಳ ಗೌರವಧನ ಈ ಬಾರಿ ಬರುತ್ತದೆ ಮುಂದಿನ ಬಾರಿ ಬರುತ್ತದೆ ಎಂದು ಪ್ರತಿ ತಿಂಗಳೂ ಜಿಲ್ಲೆಯ ಬಿಸಿಯೂಟ ಸಿಬ್ಬಂದಿ ಕಾಯುತ್ತಲೇ ಇದ್ದಾರೆ. …

Read More »

ಭಾರೀ ಮಳೆಯಿಂದಾಗಿ ಟೊಮೆಟೊ ಬೆಲೆ ಕುಸಿತ

ಚಿಕ್ಕಬಳ್ಳಾಪುರ: ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದೆ ಈ ಬಿಟ್ಟೂಬಿಡದ ಜಿಟಿ ಜಿಟಿ ಮಳೆಯಿಂದ ಕೆಂಪು ಸುಂದರಿ ಟೊಮೆಟೊಗೆ ಕಂಟಕ ಎದುರಾಗಿದ್ದು ಟೊಮೇಟೊ ಬೆಲೆ ಕುಸಿದಿದೆ. ಮೂರು ದಿನಗಳ ಹಿಂದೆ 15 ಕೆಜಿಯ ಒಂದು ಬಾಕ್ಸ್ ಟೊಮೇಟೊ ಬೆಲೆ ಸಾವಿರ ರೂಪಾಯಿ ಇತ್ತು. ಆದರೆ ಈಗ ದಿಢೀರ್ ಬೆಲೆ ಕುಸಿದಿದ್ದು 15 ಕೆಜಿಯ ಒಂದು ಬಾಕ್ಸ್ ಟೊಮೇಟೊ ಬೆಲೆ 250 ರೂಪಾಯಿಗೆ ಆಗಿದೆ. ಮಳೆಯಿಂದ ಟೊಮೆಟೊ ಒಂದು ಕಡೆಯಿಂದ ಇನ್ನೊಂದು ಕಡೆ ಸಾಗಾಟವಾಗದ …

Read More »

ಟೊಮೆಟೊಗೆ ಬಂಪರ್ ಬೆಲೆ: ರೈತರ ಮೊಗದಲ್ಲಿ ಸಂತಸ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಪ್ರಮುಖ ತೋಟಗಾರಿಕಾ ಬೆಳೆ ಟೊಮೆಟೊಗೆ ಈಗ ಬಂಪರ್ ಬೆಲೆ ಬಂದಿದ್ದು, ಜೂನ್ ಜುಲೈನಲ್ಲಿ ಉತ್ತಮ ದರವಿತ್ತು ಆ ನಂತರ ದರ ಕುಸಿಯಿತು. ಈಗ ಮತ್ತೆ ಉತ್ತಮ ದರ ಬಂದಿದೆ ಇದರಿಂದ ಸಹಜವಾಗಿ ರೈತರ ಮುಖದಲ್ಲಿ ಸಂತಸ ಮೂಡಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಮಧ್ಯಮ ದರ್ಜೆಯ ಒಂದು ಕೆ.ಜಿ ಟೊಮೆಟೊ ಬೆಲೆ ₹ 80ರಿಂದ 85 ಇದೆ. ಗುಣಮಟ್ಟದ ಹಣ್ಣು ಹೊರ ಜಿಲ್ಲೆ ಮತ್ತು ರಾಜ್ಯಗಳಿಗೆ ರವಾನೆ …

Read More »

ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸದಸ್ಯರಾಗಿ ಡಾ.ಕೆ ಸುಧಾಕರ್ ನೇಮಕ

ಚಿಕ್ಕಬಳ್ಳಾಪುರ: ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ಡಾ.ಕೆ.ಸುಧಾಕರ್ ನೇಮಕ ಮಾಡಲಾಗಿದೆ. ಡಾ.ಕೆ.ಸುಧಾಕರ್‌ ಅವರು ಮೊದಲ ಬಾರಿಗೆ ಸಂಸದರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲೇ ಅವರನ್ನು ಸ್ಥಾಯಿ ಸಮಿತಿಗೆ ನೇಮಿಸಿ ಮಹತ್ವದ ಹೊಣೆ ವಹಿಸಲಾಗಿದೆ. ಇದಕ್ಕೆ ಸಂಸದ ಡಾ.ಕೆ.ಸುಧಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಮತ್ತು ಸಂತಸದ ವಿಷಯ ಎಂದು ಅವರು ಹೇಳಿದ್ದಾರೆ. 2025 ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ …

Read More »