Breaking News

ಧಾರವಾಡ

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ನಿಯಮಿತ ಡ್ರೋನ್ ಆಪರೇಟರ್ ತರಬೇತಿಗಾಗಿ ಅರ್ಜಿ ಆಹ್ವಾನ

ಧಾರವಾಡ: 2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ, ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ (ಡ್ರೋನ್ ಆಪರೇಟರ್) ತರಬೇತಿಗಾಗಿ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿರುತ್ತದೆ. ಆಸಕ್ತರು ತರಬೇತಿಯನ್ನು ಪಡೆಯಲು ಡಿಸೆಂಬರ್ 5, 2024 ರೊಳಗಾಗಿ https://kmdconline.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 0836-2748226 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ [ನಿ] ಜಿಲ್ಲಾ ವ್ಯವಸ್ಥಾಪಕರು …

Read More »

ನ. 12 ಮಂಗಳವಾರ ಶಾಸಕ ಎಂ.ಆ‌ರ್.ಪಾಟೀಲ್’ ರವರ ಅಧ್ಯಕ್ಷತೆಯಲ್ಲಿ ಸಭೆ

ಕುಂದಗೋಳ : 2024-25ನೇ ಸಾಲಿನ ಮೊದಲನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯನ್ನು ನ. 12 ಮಂಗಳವಾರ ಶಾಸಕ ಎಂ.ಆ‌ರ್.ಪಾಟೀಲ್’ ರವರ ಅಧ್ಯಕ್ಷತೆಯಲ್ಲಿ ಕುಂದಗೋಳ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಆಯೋಜಿಸಲಾಗಿದೆ. ಈ ತ್ರೈಮಾಸಿಕ ಸಭೆಯಲ್ಲಿ ಕುಂದಗೋಳ ತಾಲೂಕಿನ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಉಪಸ್ಥಿತರಿವರು, ಎಂದು ತಾಲೂಕು ಪಂಚಾಯಿತಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More »

ವಿಜೃಂಭಣೆಯಿಂದ ನೆರವೇರಿದ ತೆಪ್ಪದ ತೇರು ಮಹಾ ರಥೋತ್ಸವ

ಕುಂದಗೋಳ : ಪಟ್ಟಣದ ಕೆರೆಯಂಗಳ ಮತ್ತು ಅಗಸಿಹೊಂಡ ತುಂಬಿದ ಹಿನ್ನೆಲೆಯಲ್ಲಿ ಇಂದು ತೆಪ್ಪದ ತೇರು ಮಹಾ ರಥೋತ್ಸವ ವಿಜೃಂಭಣೆಯಿಂದ ಸಾಗಿದೆ. ಮೊದಲು ಕೆರೆಯಂಗಳದಲ್ಲಿ ನಡೆದ ತೆಪ್ಪದ ರಥೋತ್ಸವ ಬಳಿಕ ಅಗಸಿ ಹೊಂಡಕ್ಕೆ ಸಾಗಿ ಭಜನೆ ಮತ್ತು ತತ್ವಪದಗಳ ನಡುವೆ ಕೆರೆಯಂಗಳವನ್ನು ಯಶಸ್ವಿಯಾಗಿ ದಾಟಿ ಅಗಸಿಹೊಂಡದಲ್ಲಿ ಯಶಸ್ವಿಯಾಗಿ ಜರುಗಿತು. ತೆಪ್ಪದ ರಥೋತ್ಸವದ ವೇಳೆ ಕೇಸರಿ ಧ್ವಜಗಳು ಯುವಕರ ಕೇಕೆ, ಶಿಳ್ಳೆ, ಚಪ್ಪಾಳೆ ಕೇಳಿ ಬಂದರೇ ಹಿರಿಯ ನಾಗರೀಕರಿಂದ ಹಿಡಿದು ಚಿಕ್ಕ ಮಕ್ಕಳವರೆಗೂ …

Read More »

ಅತಿವೃಷ್ಟಿ ಪರಿಣಾಮ ಹಾನಿಯಾದ ಬೆಳೆಗಳಿಗೆ ಪರಿಹಾರ ಕೊಡುವಂತೆ ಮನವಿ ಸಲ್ಲಿಕೆ

ಕುಂದಗೋಳ : ಅತಿವೃಷ್ಟಿ ಪರಿಣಾಮ ಹಾನಿಯಾದ ರೈತರ ಬೆಳೆಗಳಿಗೆ ಪರಿಹಾರ ಮತ್ತು ಮಳೆಯಿಂದ ಬಿದ್ದಂತಹ ಮನೆಗಳಿಗೆ 5 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿ ರತ್ನ ಭಾರತ ರೈತ ಸಮಾಜದವರು ಹುಬ್ಬಳ್ಳಿ ಲಕ್ಷ್ಮೀಶ್ವರ ರಸ್ತೆ ತಡೆ ನಡೆಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಗಾಳಿ ಮರೇಮ್ಮದೇವಿ ದೇವಸ್ಥಾನದ ಬಳಿ ಹುಬ್ಬಳ್ಳಿ ಲಕ್ಷ್ಮೀಶ್ವರ ರಾಜ್ಯ ಹೆದ್ದಾರಿಯನ್ನು ತಡೆದು ಪಾದಯಾತ್ರೆ ಮೂಲಕ ತಹಶೀಲ್ದಾರ್ ಕಚೇರಿ ಆಗಮಿಸಿದ ರತ್ನ ಭಾರತ ರೈತ ಸಮಾಜದವರು ಕೇಂದ್ರ …

Read More »

ಪ್ರಯಾಣಿಕರ ಬ್ಯಾಗ್ ಮರಳಿಸಿ ಪ್ರಮಾಣಿಕತೆ ಮರೆದ ಬಸ್ಸ್ ಚಾಲಕ

ಕುಂದಗೋಳ : ಪ್ರಯಾಣಿಕರೊಬ್ಬರು ಸಾರಿಗೆ ಬಸ್‌ ಒಳಗೆ ಮರೆತು ಹೋದ ನಗದು ಹಣ, ಬೆಳ್ಳಿ ಆಭರಣ ಮತ್ತು ಬಟ್ಟೆ ಬರೆ ಇರುವ ಬ್ಯಾಗನ್ನು ಪುನಃ ಪ್ರಯಾಣಿಕರಿಗೆ ತಲುಪಿಸುವ ಮೂಲಕ ಸಾರಿಗೆ ನಿರ್ವಾಹಕ ಮತ್ತು ಚಾಲಕ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನವಲಗುಂದ ತಾಲೂಕಿನ ಹಣಸಿ ಗ್ರಾಮದ ಕಮಲಾ ಎಂಬ ಮಹಿಳೆ ಕುಂದಗೋಳ ತಾಲೂಕಿನ ದೇವನೂರು ಗ್ರಾಮಕ್ಕೆ ತೆರಳಲು ಹುಬ್ಬಳ್ಳಿಯಿಂದ ಕುಂದಗೋಳ ಮಾರ್ಗವಾಗಿ ಹೊರಡುವ ಯರಗುಪ್ಪಿ ಬಸ್‌’ನಲ್ಲಿ ಪ್ರಯಾಣ ಬೆಳೆಸಿದ್ದರು.ಪ್ರಯಾಣ ಮಧ್ಯೆ ಕುಂದಗೋಳದಲ್ಲಿ …

Read More »

ಬೆಳೆವಿಮೆ ಹಾಗೂ ಪರಿಹಾರವನ್ನು ಸಕಾಲದಲ್ಲಿ ಒದಗಿಸುವಂತೆ ಆಗ್ರಹಿಸಿ ಮನವಿ‌ ಸಲ್ಲಿಕೆ

ನವಲಗುಂದ: ಬೆಣ್ಣೆ ಹಳ್ಳ ಹಾಗೂ ತುಪ್ಪರಿಹಳ್ಳ ಪ್ರವಾಹದಿಂದ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ಬೆಳೆವಿಮೆ ಹಾಗೂ ಪರಿಹಾರವನ್ನು ಸಕಾಲದಲ್ಲಿ ಒದಗಿಸುವಂತೆ ಆಗ್ರಹಿಸಿ ಭಾಜಪಾ ತಾಲೂಕಾಧ್ಯಕ್ಷ ಗಂಗಪ್ಪ ಮನಮಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಮಾಡಿದರು. ಜಿಲ್ಲಾಧಿಕಾರಿಗಳು ಇಂದು ಮೊರಬ ಗ್ರಾಮಕ್ಕೆ ಭೇಟಿ ನೀಡಿದ ಹಿನ್ನಲೆಯಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಗಂಗಪ್ಪ ನವಲಗುಂದ ಗ್ರಾಮೀಣ ಭಾಗದ ರೈತರಿಗೆ ಪ್ರವಾಹದಿಂದಾಗಿ ಸಾಕಷ್ಟು ನಷ್ಟವಾಗಿದೆ. ರಸ್ತೆಗಳು ಸಂಪರ್ಕ ಕಡಿದುಕೊಂಡಿರುವದರಿಂದ ಸಂಚಾರ ವ್ಯವಸ್ಥೆ ಅಸ್ಥವ್ಯಸ್ಥಗೊಂಡಿರುವದರಿಂದ ಪರಿಸ್ಥಿತಿಯನ್ನು …

Read More »

ಸತತ ಮಳೆಯಿಂದಾಗಿ ಮನೆ ಗೋಡೆ ಕುಸಿತ

ಕಲಘಟಗಿ : ನಿನ್ನೆ ಸಾಯಂಕಾಲ ದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಘಟಗಿ ಪಟ್ಟಣದ ಮನೆಯ ಗೋಡೆಯೊಂದು ಕುಸಿದು ಬಿದ್ದಿದೆ. ಕಲಘಟಗಿ ಪಟ್ಟಣ ಮಚಿಗಾರ ಓಣಿಯಲ್ಲಿ ಇರುವ ಮಂಜುನಾಥ ಮಂಗೋಡಿ ಎಂಬುವರ ಮನೆ ಗೋಡೆ ಕುಸಿದು ಬಿದ್ದಿದ್ದು ಅದೃಷ್ಟವಾಶ ಯಾವದೇ ಪ್ರಾಣ ಹಾನಿ ಸಂಭವಿಸಿಲ್ಲಾ. ಬಹಳಷ್ಟು ಹಳೆಯ ಗೋಡೆ ಇದಾಗಿದ್ದು ಸತತ ಮಳೆ ಇಂದಾಗಿ ಗೋಡೆ ನೆನೆದು ಕುಸಿದಿದ್ದು ಕೂಲಿ ಮಾಡಿಕೊಂಡು ಬದಕು ಸಾಗಿಸುತ್ತಿರುವ ಇವರಿಗೆ ಸರ್ಕಾರ ಶೀಘ್ರವಾಗಿ ಪರಿಹಾರ ನೀಡಬೇಕೆಂದು …

Read More »

ಆಸಿಡ್ ಟ್ಯಾಂಕರ್ ವಾಹನ ಪಲ್ಟಿ

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಆಸಿಡ್ ತೆಗೆದುಕೊಂಡು ಹೋಗುತ್ತಿದ್ದ ಟ್ಯಾಂಕರ್ ವಾಹನ ದಾರಾವತಿ ಟೆಂಪಲ್‌ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರಲ್ಲಿದ್ದ ಆಸಿಡ್‌ ಎಲ್ಲ ಲಿಕೇಜ್ ಆಗಿ ರಸ್ತೆ ಪೂರ್ತಿ ಹರಿದ ಪರಿಣಾಮ ದಟ್ಟ ಹೊಗೆ ಆವರಿಸಿಕೊಂಡು ಬೈಪಾಸ್ ನಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಆಸಿಡ್ ರಸ್ತೆ ತುಂಬಾ ಬಿದ್ದ ಕೂಡಲೇ ದಟ್ಟ ಹೊಗೆಯಿಂದ ವಾಹನ ಸಂಚಾರಕ್ಕೆ ಅನಾನುಕೂಲವಾದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಸಂಚಾರಿ ವಿಭಾಗದ ಡಿಸಿಪಿ …

Read More »

ಮಹಾತ್ಮಾ ಗಾಂಧಿ ಪ್ರತಿಮೆಯ ಮಾಯವಾದ ಕನ್ನಡಕ

ಕಲಘಟಗಿ : ತಾಲ್ಲೂಕಿನ ಗಳಗಿ ಹುಲಕೊಪ್ಪ ಗ್ರಾಮದ ಗಾಂಧಿ ಸರ್ಕಲ್ ನಲ್ಲಿ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಇರಿಸಲಾಗಿದೆ. ಆದರೆ, ಕಳೆದ ಎರಡು ತಿಂಗಳಿಂದಲೂ ಈ ಪ್ರತಿಮೆಗೆ ಹಾಕಲಾಗಿದ್ದ ಕನ್ನಡಕ “ಮಾಯ”ವಾಗಿದೆ! ಕನ್ನಡಕ ಇಲ್ಲದೇ ಇಲ್ಲಿಯ ಗ್ರಾಮ ಪಂಚಾಯತ್ ಅಧಿಕಾರಿಗಳು ಗಾಂಧಿ ಜಯಂತಿಯನ್ನು ಆಚರಿಸಿ ಮಹಾತ್ಮರಿಗೆ ಅವಮಾನಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲಾ ತಿಳಿದಿದ್ದರೂ ಈ ಬಗ್ಗೆ ಇಲ್ಲಿಯ ಗ್ರಾಮ ಪಂಚಾಯತ್ ಅಧಿಕಾರಿಗಳು ಕಂಡು ಕಾಣದಂತೆ ಕೂತಿದ್ದಾರೆ. …

Read More »

ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ : ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಕೆ

ಕುಂದಗೋಳ : ಭಾಗದ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ಸೇವೆ ಒದಗಿಸಿದ್ದಕ್ಕೆ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಂಜುನಾಥ ಎಂಟೂವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದಾರೆ. ಕುಂದಗೋಳ ಗ್ರೇಡ್-2 ತಹಶೀಲ್ದಾರ್ ಹೆಚ್.ಎಸ್.ಭಜಂತ್ರಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಹಿಂದೆ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್, ಆರೋಗ್ಯ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಮನ್ನಣೆ ನೀಡುವಂತೆ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ …

Read More »

You cannot copy content of this page