Breaking News

ಬೆಂಗಳೂರು

ಐಪಿಎಸ್ ಅಧಿಕಾರಿಗಳನ್ನ  ವರ್ಗಾವಣೆಗೊಳಿಸಿ  ರಾಜ್ಯ ಸರ್ಕಾರ ಆದೇಶ

ಬೆಂಗಳೂರು:  ಐಪಿಎಸ್ ಅಧಿಕಾರಿಗಳನ್ನ  ವರ್ಗಾವಣೆಗೊಳಿಸಿ  ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾರ್ತಿಕ್ ರೆಡ್ಡಿ, ಎಸ್ ಪಿ ,ರಾಮನಗರ. ಡಿ ದೇವರಾಜು, ಡಿಸಿಪಿ, ಉತ್ತರ ವಿಭಾಗ. ಸಿರಿ ಗೌರಿ, ಎಸ್ ಪಿ, ಐಎಸ್ ಡಿ. ಟಿ ಪಿ ಶಿವಕುಮಾರ್, ಎಸ್ ಪಿ ,ಕೆಪಿಟಿಸಿಎಲ್. ಶೇಖರ್ ಎಚ್ ಟೆಕ್ಕನವರ್, ಡಿಸಿಪಿ ,ಕಾನೂನು ಸುವ್ಯವಸ್ಥೆ, ಬೆಳಗಾವಿ. ಪದ್ಮಿನಿ ಸಾಹೊ, ಎಸ್ ಪಿ,ಚಾಮರಾಜನಗರ. ವಿನಾಯಕ್ ಪಾಟೀಲ್, ಎಐಜಿಪಿ, ಬೆಂಗಳೂರು. ಸಂತೋಷ್ ಬಾಬು,ಎಸ್ ಪಿ, ಇಂಟೆಲಿಜೆನ್ಸ್‌. ರಾಜ್ಯ …

Read More »

ಐಪಿಎಸ್ ಅಧಿಕಾರಿ ಆರ್. ದಿಲೀಪ್ ನಿಧನ

ಬೆಂಗಳೂರು: ಐಪಿಎಸ್ ಅಧಿಕಾರಿ ಆರ್. ದಿಲೀಪ್ ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ದಿಲೀಪ್ ಅವರು ಡಿಐಜಿಯಾಗಿದ್ದರು. ಹುಬ್ಬಳ್ಳಿ ಧಾರವಾಡದಲ್ಲಿ ಕಮಿಷನರ್ ಆಗಿ ಉತ್ತಮ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದು, ಯಕೃತ್ತು ಕಸಿ ಮಾಡಿಸಲಾಗಿತ್ತು. ಚಿಕಿತ್ಸೆ ಬಳಿಕ ದಿಲೀಪ್ ಅವರು ಮತ್ತೆ ಕರ್ತವ್ಯಕ್ಕೆ ಮರಳಿದ್ದರು. ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿ ಅಪೋಲೊ ಅಸ್ಪತ್ರೆಗೆ ಮತ್ತೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ …

Read More »

ಡಿ.30 , 31 ಕ್ಕೆ ಅಮಿತ್ ಶಾ ರಾಜ್ಯ ಪ್ರವಾಸ

ಬೆಂಗಳೂರು:ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲವರ್ಧನೆಗೆ ಪೂರಕವಾಗಿ ಮಂಡ್ಯದಲ್ಲಿ ಸಾರ್ವಜನಿಕ ಸಭೆ ಮತ್ತು ಬೆಂಗಳೂರಿನಲ್ಲಿ ಬೂತ್ ಅಧ್ಯಕ್ಷರ ಸಮಾವೇಶ ನಡೆಯಲಿದೆ. ಪಕ್ಷದ ನಾಯಕರ ಜೊತೆಯೂ ಸಭೆ ನಡೆಸಲು ಸಮಯ ನಿಗದಿಪಡಿಸಿದ್ದಾರೆ.ಡಿ.29 ರಂದು ರಾತ್ರಿ 10.5ಕ್ಕೆ ಯಲಹಂಕ ವಾಯುನೆಲೆಗೆ ಆಗಮಿಸಲಿರುವ ಅಮಿತ್ ಶಾ ರಾತ್ರಿ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜಧಾನಿ ಬೆಂಗಳೂರಲ್ಲಿ ಇಂದು (ಡಿ.27) ಮತ್ತು‌ ನಾಳೆ (ಡಿ.28)‌ ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಡಿ.27) ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯಾತೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಕೂಡ ಒಣಹಣೆ ಮುಂದುವರಿಯಲಿದೆ …

Read More »

ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಸಿಂಚನವಾಗುತ್ತಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು (ಡಿ. 27) ಮತ್ತು ಡಿ. 28ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. …

Read More »

ಕಳೆದ 24 ದಿನಗಳಲ್ಲಿ ಒಟ್ಟು ಏಳು ಪಾಸಿಟಿವ್ ಪ್ರಕರಣಗಳು ಪತ್ತೆ

ಬೆಂಗಳೂರು: ಚೀನಾದಲ್ಲಿ ಮತ್ತೆ ಭಯ ಹುಟ್ಟಿಸಿರುವ ರೂಪಾಂತರಿ ಕೊರೊನಾ ಬಗ್ಗೆ ರಾಜ್ಯದಲ್ಲೂ ಆತಂಕ ಶುರುವಾಗಿದೆ. ರಾಜ್ಯ ಸರ್ಕಾರದ ಒಂದಷ್ಟು ತಯಾರಿಗಳ ಮಧ್ಯೆಯೂ ಕೊರೊನಾ ಬಿಎಫ್​​7 ಈಗಾಗಲೇ ಬಂದುಬಿಟ್ಟಿದ್ಯಾ ಎಂಬ ಭಯ ಶುರುವಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ 24 ದಿನಗಳಲ್ಲಿ ಒಟ್ಟು ಏಳು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹಾಗೆಯೇ ನವೆಂಬರ್​ರಲ್ಲಿ 8 ಪಾಸಿಟಿವ್ ಪ್ರಕರಣ ಪತ್ತೆ ಆಗಿವೆ. ಇದು ಕೊರೊನಾದ BF.7 ತಳಿಯೇ ಎಂಬ ಭಯ ಶುರುವಾಗಿದೆ. ಯಾಕಂದ್ರೆ …

Read More »

ಇಂದಿನಿಂದ 3 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಮಾಂಡೌಸ್ ಚಂಡಮಾರುತದಿಂದ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಉಂಟಾಗಿತ್ತು.ನಾಲ್ಕೈದು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ  ಇದೀಗ ಮತ್ತೆ ಅಬ್ಬರಿಸತೊಡಗಿದ್ದಾನೆ. ಇಂದಿನಿಂದ 3 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯಿದೆ.ಬೆಂಗಳೂರಿನಲ್ಲಿ ಭಾನುವಾರ ಕೂಡ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ಕೆಲವೆಡೆ …

Read More »

ಶಿಕ್ಷಕರಿಗೆ ಸಿಹಿ ಸುದ್ದಿ

ಬೆಂಗಳೂರು: ಜನವರಿಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಶೀಘ್ರವೇ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆಯ ತಿದ್ದುಪಡಿಯನ್ನು ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಸಮ್ಮತಿಸಿದ್ದಾರೆ. ಮುಂದಿನ ತಿಂಗಳು ಜನವರಿ ಅಂತ್ಯದೊಳಗೆ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಲಾಗಿದೆ. ಶಿಕ್ಷಕರ ಸ್ನೇಹಿ ವರ್ಗಾವಣೆ ನಿಯಮ ರೂಪಿಸಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ(ಶಿಕ್ಷಕರ ವರ್ಗಾವಣೆ …

Read More »

5 ಜನ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಪೊಲೀಸ್ ಇಲಾಖೆ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದ ಸರ್ಕಾರ 5 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಆರ್. ಚೇತನ್ -ಗುಪ್ತಚರ ಎಸ್.ಪಿ., ಸೀಮಾ ಲಾಟ್ಕರ್ -ಮೈಸೂರು ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ, ಶಿವಪ್ರಕಾಶ್ ದೇವರಾಜು -ಬೆಂಗಳೂರು ಅಪರಾಧ ವಿಭಾಗದ ಎಐಜಿಪಿ, ಎಂ.ಮುತ್ತರಾಜು -ಮೈಸೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ, ಬಾಬಾ ಸಾಬ್ ನೇಮಗೌಡ ಗದಗ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.

Read More »

ಲೋಕಾಯುಕ್ತಕ್ಕೆ ಒಂದೇ ದಿನದಲ್ಲಿ 15 ಡಿವೈಎಸ್​ಪಿಗಳನ್ನು ನೇಮಕ

ಬೆಂಗಳೂರು: ಇತ್ತೀಚೆಗಷ್ಟೇ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ದಾದ ಬೆನ್ನಲ್ಲೇ ಎಸಿಬಿಗೆ ಮಂಜೂರಾಗಿದ್ದ ಅಧಿಕಾರಿ/ಸಿಬ್ಬಂದಿ ಹುದ್ದೆಗಳನ್ನು ಬಳಸಿಕೊಂಡು ಹೊಸದಾಗಿ 9 ಉಪ ವಿಭಾಗ ಮತ್ತು 4 ಸಂಚಾರ ಠಾಣೆಗಳನ್ನು ಸೃಜಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆ ಪೈಕಿ ಎಸಿಬಿ ಮಂಜೂರಾಗಿದ್ದ 10 ಎಸ್‌ಪಿ, 35 ಡಿವೈಎಸ್​ಪಿ, 76 ಇನ್‌ಸ್ಪೆಕ್ಟರ್ ಸೇರಿದಂತೆ 445 ಹುದ್ದೆಗಳ ಪೈಕಿ ಲೋಕಾಯುಕ್ತ ಸಂಸ್ಥೆಗೆ 224 ಹುದ್ದೆಗಳನ್ನು ವರ್ಗಾಯಿಸಿ, ಉಳಿದ 221 ಹುದ್ದೆಗಳನ್ನು ಪೊಲೀಸ್ ಇಲಾಖೆ ತನ್ನ ವಶದಲ್ಲಿ …

Read More »

You cannot copy content of this page