BigTv News
March 20, 2025
Breaking News, Crime, ವಿಜಯಪುರ
ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲ್ಲೂಕಿನ ಜಂಬಲದಿನ್ನಿ ಗ್ರಾಮದ ವೀರೇಶ ಶಾಂತಗೌಡ ಬಿರಾದಾರ ಟ್ಯಾಂಕರ್ ಚಾಲಕ ಶಿಕ್ಷೆಗೆ ಒಳಗಾದ ವ್ಯಕ್ತಿ. ಶಹಾಪುರ ತಾಲ್ಲೂಕಿನ ರಸ್ತಾಪುರ ಗ್ರಾಮದ ಟಂಟಂ ಚಾಲಕ ಮಲ್ಲಪ್ಪ ಮಲ್ಲಪ್ಪ ನಾಯ್ಕೋಡಿ ಅವರಿಗೆ ದಂಡ ವಿಧಿಸಲಾಗಿದೆ. ಟ್ರ್ಯಾಕ್ಟರ್-ಟಂಟಂ ಡಿಕ್ಕಿಯಾಗಿ ಆರು ಜನರ ಸಾವಿಗೆ ಕಾರಣವಾದ ಟ್ಯಾಂಕರ್ ಚಾಲಕನಿಗೆ ಆರು ತಿಂಗಳು ಜೈಲು ಶಿಕ್ಷೆ, ₹3500 ದಂಡ, ವಿಧಿಸಲಾಗಿದೆ.
Read More »
BigTv News
March 17, 2025
Breaking News, ವಿಜಯಪುರ
ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವಂತಹ ದಾರುಣ ಘಟನೆ ನಡೆದಿದೆ. ಮೃತರನ್ನು 30 ವರ್ಷದ ಉತ್ನಾಳದ ಬೀರಪ್ಪ ಗೋಡೆಕರ್, 25 ವರ್ಷದ ಹಣಮಂತ ಕಡ್ಲಿಮಟ್ಟಿ ಮತ್ತು ಜುಮನಾಳ ಗ್ರಾಮದ 19 ವರ್ಷದ ಯಮನಪ್ಪ ನಾಟೀಕಾರ್ ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ ಉಮೇಶ್ ಭಜಂತ್ರಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »
BigTv News
March 17, 2025
Breaking News, ವಿಜಯಪುರ
ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.ಮೃತರೆಲ್ಲರೂ ವಿಜಯಪುರ ತಾಲೂಕಿನ ಉತ್ನಾಳ ಗ್ರಾಮದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮತ್ತೊರ್ವನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲೆಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ವಿಜಯಪುರ ಗ್ರಾಮಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
Read More »
BigTv News
March 15, 2025
Breaking News, Crime, ವಿಜಯಪುರ
ವಿಜಯಪುರ ನಗರದ ಆಲಕುಂಟೆ ನಗರದ ವೀರಭದ್ರ ಹಾಗೂ ಬಾಗಮ್ಮ ಹಡಪದ ದಂಪತಿಗೆ ಇಳಿವಯಸ್ಸಿನಲ್ಲಿ ಮಕ್ಕಳೇ ವಿಲನ್ ಆಗಿದ್ಧಾರೆ.5 ವರ್ಷದ ಹಿಂದೆ ಬಸವರಾಜಗೆ ಹೇರ್ ಕಟಿಂಗ್ ಸಲೂನ್ ಹಾಕಲು ಜೀವನಕ್ಕೆ ಆಸರೆಯಾಗಿದ್ದ ಮನೆಯ ಮೇಲೆ ನಗರದ ಜನ ಸ್ಮಾಲ್ ಫೈನಾನ್ಸ್ ನಲ್ಲಿ 5 ಲಕ್ಷ ಸಾಲ ಪಡೆದುಕೊಟ್ಟಿದ್ದರು. ಈ ಹಣ ಪಡೆದ ಬಸವರಾಜ ಸಲೂಲ್ ಶಾಪ್ ಹಾಕಿದ್ದ. ನಂತರ ಸಾಲದ ಕಂತು ಕಟ್ಟದೇ ತಂದೆ-ತಾಯಿ ಬಿಟ್ಟು ಬೇರೆಯಾಗಿದ್ದಾನೆ. ಇನ್ನು ಕಿರಿಯ ಮಗನೂ …
Read More »
BigTv News
March 14, 2025
Breaking News, ವಿಜಯಪುರ
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಮಣಂಕಲಗಿ ಗ್ರಾಮದಲ್ಲಿ ನಾಲ್ವರ ಮೇಲೆ ಚಿರತೆಯೊಂದು ದಾಳಿ ಮಾಡಿದೆ. ಇದರ ಬೆನ್ನಲ್ಲೇ ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಸ್ಥಳೀಯರ ನೆರವಿನೊಂದಿಗೆ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಸ್ಥಳಕ್ಕೆ ಝಳಕಿ ಪಿಎಸ್ಐ ಎಸ್.ಬಿ.ಪಾಟೀಲ ಮತ್ತು ಸಿಬ್ಬಂದಿ ಹಾಗೂ ಅರಣ್ಯಾಧಿಕಾರಿಗಳು ದೌಡಾಯಿಸಿ ಬರಡೋಲ ಮತ್ತು ಹಲಸಂಗಿ ಗ್ರಾಮದ ಗೊಲ್ಲರ ಸಹಾಯದಿಂದ ಚಿರತೆ ಹಿಡಿಯುವ ಕಾರ್ಯಾಚರಣೆ ಕೈಗೊಂಡರು. ಸುಮಾರು ನಾಲ್ಕೈದು ಗಂಟೆಗಳ ಹರಸಹಾಸ ಪಟ್ಟು ಚಿರತೆಯನ್ನು …
Read More »
BigTv News
January 27, 2025
Breaking News, ವಿಜಯಪುರ
ವಿಜಯಪುರ: ಅಭಿವೃದ್ಧಿಯಿಂದಾಗಿ ರೈತರ ಜಮೀನಿಗೆ ಭಾರಿ ಬೆಲೆ ಬಂದಿದ್ದು, ಅನ್ನದಾತರರು ತಮ್ಮ ಭೂಮಿಯನ್ನು ಮಾರಾಟ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕಿವಿಮಾತು ಹೇಳಿದರು. ಬಬಲೇಶ್ವರ ತಾಲ್ಲೂಕಿನ ಬೋಳಚಿಕ್ಕಲಕಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗ್ರಾಮ ಪಂಚಾಯಿತಿ ಕಟ್ಟಡ, ಎಸ್.ಡಬ್ಲ್ಯೂ.ಎಂ ಘಟಕ, ಗೋದಾಮು, ಎನ್.ಆರ್.ಎಲ್.ಎಂ ಘಟಕ ಮತ್ತು ಪ್ರೌಢಶಾಲೆ ಕಟ್ಟಡವನ್ನು ಉದ್ಘಾಟಿಸಿ ಆವರು ಮಾತನಾಡಿದರು. ಅಭಿವೃದ್ಧಿ ಕಾರ್ಯಗಳಿಂದಾಗಿ ಆರ್ಥಿಕವಾಗಿ ಸಮರ್ಥರಾಗಿರುವ ರೈತರು ತಮ್ಮ ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಗುಣಮಟ್ಟದ …
Read More »
BigTv News
January 24, 2025
Breaking News, ವಿಜಯಪುರ
ವಿಜಯಪುರ: ನಗರದ ಇಟ್ಟಿಗೆ ಭಟ್ಟಿಯೊಂದರ ಮಾಲೀಕರಿಂದ ಹಲ್ಲೆಗೆ ಒಳಗಾದ ಕಾರ್ಮಿಕರೊಂದಿಗೆ ಶುಕ್ರವಾರ (ಜ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಫೋನ್ ಮೂಲಕ ಮಾತನಾಡಿದರು. ನಗರದ ಜಿಲ್ಲಾಸ್ಪತ್ರೆಯಲ್ಲಿ ಮೂವರು ಕಾರ್ಮಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಸಚಿವ ಎಚ್.ಆಂಜನೇಯ ಇಂದು ಮೂವರು ಕಾರ್ಮಿಕರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಅವರಿಗೆ ಫೋನ್ ಮಾಡಿದ ಆಂಜನೇಯ, ಕಾರ್ಮಿಕರೊಂದಿಗೆ ಫೋನ್ ನಲ್ಲಿ ಸಿಎಂ ಅವರಿಂದ ಮಾತನಾಡಿಸಿದರು. ಆಗ ಕಾರ್ಮಿಕರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ, ಎಲ್ಲ …
Read More »
BigTv News
January 23, 2025
Breaking News, ವಿಜಯಪುರ
ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ …
Read More »
BigTv News
January 23, 2025
Breaking News, ವಿಜಯಪುರ
ವಿಜಯಪುರ: ರಾಜ್ಯದಲ್ಲಿ ಲೈನ್ಮನ್ಗಳ ಕೊರತೆ ಇದ್ದು, ಖಾಲಿ ಇರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಏಪ್ರೀಲ್ ಒಳಗಾಗಿ ಖಾಲಿ ಇರುವ ಲೈನ್ಮನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದೆಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಭರವಸೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರ ಆಗ್ರಹಕ್ಕೆ ಪೂರಕವಾಗಿ ಈ ಭರವಸೆ ನೀಡಿದರು. ಲೈನ್ಮನ್ಗಳ ಸೇವೆ ಅನನ್ಯ. ಮಳೆಗಾಲದ …
Read More »
BigTv News
January 20, 2025
Breaking News, ವಿಜಯಪುರ
ವಿಜಯಪುರ: ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸಚಿವರು, ಒಟ್ಟು ಪ್ರತಿ ಕ್ರಿಂಟಾಲ್ಗೆ ಎಂಟು ಸಾವಿರ ರೂ. ಬೆಂಬಲ ಬೆಲೆ ನೀಡಲಾಗುವುದು ಎಂದು ತಿಳಿಸಿದರು. ಕೇಂದ್ರ ಸರ್ಕಾರದ ನಫೆಡ್ ಖರೀದಿ ಏಜನ್ಸಿಯಾಗಿದ್ದು, ದಾಖಲೆಗಳನ್ನು ಸಕಾಲಕ್ಕೆ ಒದಗಿಸದ ಕಾರಣ ಖರೀದಿ ಪ್ರಕ್ರಿಯೆ ವಿಳಂಬವಾಗಿದೆ. ರಾಜ್ಯಾದ್ಯಂತ 400ಕ್ಕೂ ಅಧಿಕ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, …
Read More »