Breaking News

ಬೀದರ್

ಟಿಪ್ಪರ್ , ಆಟೊ ನಡುವೆ ಭೀಕರ ಅಪಘಾತ : 7 ಜನ ಸಾವು

ಬೀದರ್​ : ಸರ್ಕಾರಿ ಶಾಲೆ ಹತ್ತಿರ ನಿನ್ನೆ ಟಿಪ್ಪರ್ ಮತ್ತು ಆಟೊ ನಡುವೆ ಭೀಕರ ಅಪಘಾತ ಆಟೊದಲ್ಲಿದ್ದ ಏಳು ಮಹಿಳೆಯರು ಮೃತಪಟ್ಟ ಘಟನೆ ಬೀದರ್​ನಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿ ಚಿಟಗುಪ್ಪ ತಾಲ್ಲೂಕಿನ ಉಡುಬನಳ್ಳಿ ಗ್ರಾಮದ ಪ್ರಭಾವತಿ ದೇವೇಂದ್ರ (36), ಯಾದಮ್ಮ ಅಷ್ಮಿತ (40), ಗುಂಡಮ್ಮಾ ನರಸಿಂಗ (60), ಜಗಮ್ಮಾ ಪ್ರಭು (34), ರುಕ್ಮಿಣಿಬಾಯಿ ಅಮೃತ (60), ಈಶ್ವರಮ್ಮ ಬಕ್ಕಪ್ಪ (55) ಪಾರ್ವತಿ ಮಾರುತಿ (42) ಮೃತರು. ಎಲ್ಲರೂ ಕೃಷಿ ಕಾರ್ಮಿಕರಾಗಿದ್ದು, …

Read More »

ಮಾಜಿ ಸಿಎಂಗಾಗಿ ಶಾಸಕನಿಂದ ಕ್ಷೇತ್ರ‌ ತ್ಯಾಗ

ಬೀದರ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವುದರ ಬಗ್ಗೆ ಚರ್ಚೆ ನಡೆದಿದೆ. ಸಿದ್ದರಾಮಯ್ಯ ಅವರಿಗಾಗಿ ಕ್ಷೇತ್ರ ತ್ಯಾಗ ಮಾಡುವುದಾಗಿ ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಹೀಂ ಖಾನ್ ಅವರು, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸುವುದಾದರೆ ಬೀದರ್ ಉತ್ತರ ಕ್ಷೇತ್ರ ತ್ಯಾಗ ಮಾಡಲು ಸಿದ್ಧವಾಗಿದ್ದು, ಅವರನ್ನು ಗೆಲ್ಲಿಸುವ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ಬೀದರ್ …

Read More »

ಕಲ್ಯಾಣ ಕರ್ನಾಟಕದ‌ ಅಭಿವೃದ್ದಿಗೆ 5 ಸಾವಿರಕೋಟಿ ರೂ ನೀಡಲಾಗುವುದು : ಸಿಎಂ

ಬೀದರ್ :ಕಲ್ಯಾಣ ಕರ್ನಾಟಕದ‌ ಅಭಿವೃದ್ದಿಗೆ ಮುಂದಿನ ಬಜೆಟ್ನಲ್ಲಿ 5 ಸಾವಿರಕೋಟಿ ರೂ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ . ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ನೀಡಲಿದ್ದೇನೆ, ನಾವು ಅಧಿಕಾರಕ್ಕೆ ಬಂದ ಮೇಲೆ ಗರಿಷ್ಟ 3 ಸಾವಿರ ಕೋಟಿ ನೀಡಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ …

Read More »

ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ನಿಶ್ಚಿತ : ಎಚ್.ಎಂ. ರೇವಣ್ಣ

ಬೀದರ್: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಮಾಜಿ ಸಚಿವರೂ ಆದ ಕೆಪಿಸಿಸಿ ಉಪಾಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು. ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಜನಸಾಗರವನ್ನು ಕಂಡು ಬಿಜೆಪಿಗೆ ನಡುಕ ಉಂಟಾಗಿದೆ. ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಭೀತಿಯಿಂದ ಸಚಿವರು ಅವರ ವಿರುದ್ಧ ಸತ್ಯಕ್ಕೆ ದೂರವಾದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು. ತಾಕತ್ತಿದ್ದರೆ ನಮ್ಮ ಗೆಲುವು …

Read More »

ನಾಡಗೀತೆ ಮೊಟಕುಗೊಳಿಸುವ ನಿರ್ಧಾರ : ವಿ.ಸುನಿಲ್
ಕುಮಾರ್

ಬೀದರ್ : ನಾಡಗೀತೆ ಮೊಟಕುಗೊಳಿಸುವ ಕುರಿತಂತೆ ರಾಜ್ಯ ಸರ್ಕಾರ ಒಂದು ವಾರದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ಕುಮಾರ್ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ವಿ.ಸುನಿಲ್ ಕುಮಾರ್, ನಾಡಗೀತಿಯ ಧಾಟಿ ಹಾಗೂ ಮೊಟಕುಗೊಳಿಸುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಕುರಿತ ಗೊಂದಲಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

Read More »

ಲಿಂಗಾಯತ ಧರ್ಮ ಸಂಸ್ಥಾಪಕ ಬಸವಣ್ಣನವರ ಇತಿಹಾಸ ತಿರುಚಿರುವುದು ಅಕ್ಷಮ್ಯ : ಅಕ್ಕ ಅನ್ನಪೂರ್ಣ

ಬೀದರ್‌: ಪಠ್ಯಪುಸ್ತಕ ರಚನಾ ಸಮಿತಿಯು ಬದಲಾಯಿಸಿರುವ ಪಠ್ಯ ಕುರಿತು ಅನೇಕ ಆಕ್ಷೇಪಗಳಿವೆ. ಅದರಲ್ಲಿಯೂ ಲಿಂಗಾಯತ ಧರ್ಮ ಸಂಸ್ಥಾಪಕ ಬಸವಣ್ಣನವರ ಇತಿಹಾಸ ತಿರುಚಿರುವುದು ಅಕ್ಷಮ್ಯ. ಅದು ಬಸವಾದಿ ಶರಣರಿಗೆ ಮತ್ತು ಲಿಂಗಾಯತ ಧರ್ಮಕ್ಕೆ ಎಸಗಿದ ಅಪಚಾರ ಎಂದು ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ಖಂಡಿಸಿದ್ದಾರೆ.‌ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕ (ಪರಿಷ್ಕೃತ-2022) ಭಾಗ-1ರ ಪುಟ 27-28 ರಲ್ಲಿ ಬಸವಣ್ಣನವರ ಜೀವನ ಮತ್ತು ಸಾಧನೆ ಕುರಿತ ಪಾಠವಿದ್ದು, ಹಳೆಯ ಪಠ್ಯದಲ್ಲಿನ ಕೆಲವೂ …

Read More »

ಯುಕ್ರೇನ್ ನಿಂದ ಮರಳಿ ತವರಿಗೆ ಸೇರಿದ ಬೀದರ್ ವಿದ್ಯಾರ್ಥಿಗಳು

ಬೀದರ್: ಯುದ್ಧ ಪೀಡಿತ ಉಕ್ರೇನ್ ದೇಶದಲ್ಲಿ ಸಿಲುಕಿರುವ ಗಡಿ ಜಿಲ್ಲೆಯ ನಾಲ್ವರು ವೈದ್ಯ ವಿದ್ಯಾರ್ಥಿಗಳ ಪೈಕಿ ಇಬ್ಬರು ಶನಿವಾರ ಸ್ವದೇಶಕ್ಕೆ ಆಗಮಿಸಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳು ಸಹ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಸುಪರ್ದಿಯಲ್ಲಿ ಸುರಕ್ಷಿತವಾಗಿದ್ದಾರೆ. ಹೀಗಾಗಿ ತೀವ್ರ ಆತಂಕದಲ್ಲಿದ್ದ ಮಕ್ಕಳ ಪಾಲಕರು ಈಗ ನಿಟ್ಟಿಸಿರುಬಿಟ್ಟಿದ್ದಾರೆ.ಉಕ್ರೇನ್‌ನ ಖಾರ್ಕೀವ್ ನಗರದ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿರುವ ಜಿಲ್ಲೆಯ 4 ಜನ ವಿದ್ಯಾರ್ಥಿಗಳು ರಷ್ಯಾ ದಾಳಿಯಿಂದ ಉಕ್ರೇನ್‌ನಲ್ಲಿಯೇ ಸಿಲುಕಿದ್ದರು.ನಗರದ ಮಂಗಲಪೇಟ್ ನಿವಾಸಿ …

Read More »

ಈಶ್ವರಪ್ಪ ವಿವಾದಾತ್ಮಕ ಹೇಳಿಕೆ : ಕಾಂಗ್ರೆಸ್ ಪ್ರತಿಭಟನೆ

ಬೀದರ್‌: ಸಚಿವ ಕೆ.ಎಸ್‌.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇಲ್ಲಿಯ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿದರು.ನಂತರ ಬ್ಯಾನರ್‌ ಹಿಡಿದುಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದು, ರಾಜ್ಯಪಾಲರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ದೇಶದಲ್ಲಿ ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸುವುದಾಗಿ ನೀಡಿರುವ ಹೇಳಿಕೆ ಅಪಾಯಕಾರಿಯಾಗಿದೆ. ತ್ರಿವರ್ಣ ಧ್ವಜವು ದೇಶದ ಸ್ವಾತಂತ್ರ್ಯ, …

Read More »

ಗೋವಿಂದ ರೆಡ್ಡಿ ನೂತನ ಜಿಲ್ಲಾಧಿಕಾರಿಯಾಗಿ ನೇಮಕ

ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ವಿಜಯಪುರ ಜಿಲ್ಲಾ ಪಂಚಾಯಿತಿ ಗೋವಿಂದ ರೆಡ್ಡಿ ಅವರನ್ನು ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

Read More »

ತಹಶೀಲ್ದಾರ್ ಮೇಲೆ ಹಲ್ಲೆ : 5 ಜನ ಬಂಧನ

ಬೀದರ್ : ಮನವಿ ಸ್ವೀಕರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ತಹಶೀಲ್ದಾರ್ ಮೇಲೆ ಪ್ರತಿಭಟನಾ ನಿರತ ಕೆಲವರು ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಜಿಲ್ಲೆಯ ಹುಮ್ನಾಬಾದ್ ನಲ್ಲಿ ಶುಕ್ರವಾರ ಬಿ ಎಸ್ ಪಿ ಮುಖಂಡ ಅಂಕುಶ್ ಗೋಖಲೆ ಸೇರಿದಂತೆ ಹಲವರು ಪ್ರತಿಭಟನೆ ನಡೆಸಿದ್ದರು.

Read More »

You cannot copy content of this page