Breaking News

ಚಿಕ್ಕಬಳ್ಳಾಪುರ

ಬೈಕ್ ಸವಾರನ ನಿರ್ಲಕ್ಷ್ಯದಿಂದ ಅಪಘಾತ: ಅಕ್ಟಿವಾ ಮೊಪೆಡ್‌ಗೆ ಗುದ್ದಿದ ಸ್ಕಾರ್ಪಿಯೋ ಕಾರು!!

ತಿಪ್ಪೇನಹಳ್ಳಿ ಗ್ರಾಮದ ನಾರಾಯಸ್ವಾಮಿ ಮತ್ತು ಅವರ ಧರ್ಮಪತ್ನಿ ಸ್ಕಾರ್ಪಿಯೋ ಕಾರಲ್ಲಿ ನಾಮಕರಣ ಕಾರ್ಯಕ್ರಮಕ್ಕೆಂದು ಶಿಡ್ಲಘಟ್ಟದ ಕಡೆ ಹೋಗುತ್ತಿದ್ದರು. ಇದೇ ಮಾರ್ಗದಲ್ಲಿ ಹೋಗುತ್ತಿದ್ದ ಬೈಕ್ ಸವಾರ ಯಾವ ಸಿಗ್ನಲ್ ನೀಡದೆ ಏಕಾಏಕಿ ಎಡದಿಂದ ಬಲಕ್ಕೆ ವಾಹನವನ್ನು ತಿರುಗಿಸಿದ್ದಾರೆ. ದ್ವಿಚಕ್ರ ವಾಹನದ ಹಿಂದೆಯೇ ಇದ್ದ ಸ್ಕಾರ್ಪಿಯೋ ಕಾರು ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಚಿಕ್ಕಬಳ್ಳಾಪುರದತ್ತ ಬರುತ್ತಿದ್ದ ಹೋಂಡಾ ಆಕ್ಟಿವಾ ಗಾಡಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಗಾಡಿ ಜಕಂ ಆಗಿದ್ದರೆ ಬೈಕ್ ಸವಾರ ಕಾರಿನ …

Read More »

ಫೋನ್​ ಮಾಡಿ ಕರೆದ್ರೂ ಪ್ರಿಯಕರ ಮನೆಗೆ ಬರದಿದ್ದಕ್ಕೆ ಆತ್ಮಹತ್ಯೆ.!

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಮೂಲದ ಈಕೆಯನ್ನು ಚಿಕ್ಕಬಳ್ಳಾಪುರ ತಾಲ್ಲೂಕಿನ ಗಂಗರೇಕಾಲುವೆ ನಿವಾಸಿ ಅಡುಗೆಭಟ್ಟ ಸತೀಶ್ ಎನ್ನುವವರಿಗೆ ಕೊಟ್ಟು ಮದುವೆ ಮಾಡಲಾಗಿತ್ತು.ವಿನುತ ಮನೆಯ ಬೆಡ್ ರೂಂನಲ್ಲಿ ಶವವಾಗಿದ್ದಾಳೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಂತೆ ಕಂಡುಬಂದಿದೆ.ವಿನುತಾಗೆ ಈಗಾಗಲೇ ಮದುವೆಯಾಗಿದ್ದು ಮಗು ಸಹ ಇದೆ. ಆದರೂ ಸಹ ವಿನುತಾ ಗ್ರಾಮದ ಯುವಕನೋರ್ವನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು ಎನ್ನಲಾಗಿದೆ. ಹಲವು ಬಾರಿ ಕರೆ ಮಾಡಿ, ಮನೆಗೆ ಬರುವಂತೆ ಹೇಳಿದ್ದಾಳಂತೆ. ಆದರೆ ಬಾಲರಾಜು ಎಲ್ಲಿ …

Read More »

ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್​ ಸವಾರರು ಸಾವು.!

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಬೈಪಾಸ್​ನಲ್ಲಿ ಖಾಸಗಿ ಶಾಲೆಯ ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಉದಯ್ ಕುಮಾರ್, ಜಾರ್ಖಂಡ್​ ಮೂಲದ ಕಾರ್ಮಿಕ ಪ್ರಕಾಶ್ ಮೃತರು. ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More »

ಕೈ ಕೊಟ್ಟ ಹುಡುಗಿ ಪ್ರೇಮಿ ದಗ ದಗ ಕಾಲೇಜು ಪ್ರೀತಿ ಜೀವನ್ಮರಣ ಹೋರಾಟ

ಆರು ವರ್ಷದಿಂದ ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಾಳೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಗಿರೀಶ್ ಎಂಬುವವನು ಚೊಕ್ಕ ಹಳ್ಳಿಯ ಚಿಕ್ಕಬಳ್ಳಾಪುರದವನಾಗಿರುತ್ತಾನೆ. ಆರು ವರ್ಷದಿಂದ ಪ್ರೀತಿ ಮಾಡುತ್ತಿರುವವರ ನಡುವೆ ಇತ್ತೀಚಿಗೆ ಬಿರುಕು ಶುರುವಾಗಿತ್ತು ಸ್ವಯಂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಸಾರ್ವಜನಿಕರು ಅವನಿಗೆ ಸಹಾಯ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ 30% ಸುಟ್ಟಿರುವ ನಿರೀಕ್ಷೆ.

Read More »

ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಡುವೆ ಇಂದಿನಿಂದ ಬರೋಬ್ಬರಿ ಆರು ರೈಲುಗಳ ಸಂಚಾರ ಆರಂಭ..

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಡುವೆ ಇಂದಿನಿಂದ ಬರೋಬ್ಬರಿ ಆರು ರೈಲುಗಳ ಸಂಚಾರ ಆರಂಭವಾಗಲಿದ್ದು, ಇದರಿಂದ ದಿನಪೂರ್ತಿ ರೈಲು ಸೇವೆ ಲಭ್ಯವಾದಂತಾಗಿದೆ. ಇದರಿಂದ ಬೆಂಗಳೂರಿಗೆ ನಿತ್ಯ ಹೋಗಿ ಬರುವ ಸ್ಥಳೀಯರು, ವ್ಯಾಪಾರಸ್ಥರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲುಗಳ ಸೇವೆ ಆರಂಭಿಸಲಾಗಿತ್ತು. ಈ ರೈಲುಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಗೆ ಬಂದು ನಿಲ್ಲುತ್ತಿದ್ದವು. ಅಷ್ಟೂ ರೈಲುಗಳನ್ನು ಈಗ ಚಿಕ್ಕಬಳ್ಳಾ ಪುರದವರೆಗೂ ಸಂಚರಿಸಲು ಹಸಿರು ನಿಶಾನೆ ತೋರಲಾಗಿದೆ. …

Read More »

ಬೆತ್ತಲೆ ಫೋಟೋ ಆರೋಪ : ಓರ್ವ ಬರ್ಬರವಾಗಿ ಕೊಲೆ

ಚಿಕ್ಕಬಳ್ಳಾಪುರ: ಸಹೋದರಿಯ ಬೆತ್ತಲೆ ಫೋಟೋ ಹೊಂದಿದ್ದ ಆರೋಪ ಸಂಬಂಧ ನಡೆದ ಜಗಳದಲ್ಲಿ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ಹೊಂದಿದ್ದಕ್ಕೆ ಆಕ್ರೋಶಗೊಂಡಿದ್ದ ದರ್ಶನ್, ತನ್ನ ಸಹಚರ ಆಶ್ರಯ್ ಜೊತೆ ಸೇರಿಕೊಂಡು ದೊಡ್ಡಬಳ್ಳಾಪುರ ಮೂಲದ ನಂದಾ ಎಂಬಾತನನ್ನ ಬರ್ಬರವಾಗಿ ಕೊಲೆ ಮಾಡಿದ್ದಾರೆ. ದೊಡ್ಡಬಳ್ಳಾಫುರ ಮೂಲದ ಯುವಕ ನಂದಾ (ಕೊಲೆಯಾದವ) ಎಂಬಾತ ಚಿಕ್ಕಬಳ್ಳಾಫುರ ತಾಲೂಕಿನ ಹಾರೋಬಂಡೆ …

Read More »

ಶಬರಿಮಲೈ ಯಾತ್ರಿ ಸಾವು

ಚಿಕ್ಕಬಳ್ಳಾಪುರ: ತಾಲ್ಲೂಕಿನ ದೊಡ್ಡ ಪೈಲಗುರ್ಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಬರಿಮಲೈ ಯಾತ್ರಿಯೊಬ್ಬರು ಸಾವನ್ನಪ್ಪಿದ್ದಾದ್ದರೆ. 22 ವರ್ಷದ ದರೇಶ್ ಮೃತ ದುರ್ದೈವಿಯಾಗಿದ್ದು, ಇನ್ನು ಈ ಘಟನೆಯಲ್ಲಿ ಇನ್ನಿಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡು, ಗಾಯಾಳನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದವರು ಹೊರಗಡೆ ಹಾರಿ ಬಿದ್ದಿದ್ದು. ಸುದ್ದಿ ತಿಳಿದ ಪೇರೆಂಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Read More »

ಅವೈಜ್ಞಾನಿಕ ಹೈವೇ ಕಾಮಗಾರಿ – ಸರಣಿ ಅಪಘಾತ 7 ಮಂದಿಗೆ ಗಾಯ

ಚಿಕ್ಕಬಳ್ಳಾಪುರ: ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಸೇತುವೆ ಬಳಿ ನಡೆದಿದೆ. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ವಾಪಸಂದ್ರ ಸೇತುವೆ ಬಳಿ ಹೆದ್ದಾರಿಯಲ್ಲಿ ಭಾರೀ ಪ್ರಮಾಣದ ಗುಂಡಿ ಬಿದ್ದಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ತಾತ್ಕಾಲಿಕವಾಗಿ ತೇಪೆ ಹಾಕಲಾಗಿದೆ. ಆದರೆ ತೇಪೆ ಹಾಕಿರುವ ಜಾಗದಲ್ಲಿ ಮತ್ತೆ ಹಳ್ಳ ಬಿದ್ದಿದ್ದು, ಹೈವೇಯಲ್ಲಿ ಅತಿ ವೇಗವಾಗಿ ಬರುವ ವಾಹನಗಳು ಹಳ್ಳದಲ್ಲಿ ಬಿದ್ದು ಜಂಪ್ ಹೊಡೆಯುತ್ತಿದೆ. ಇಂದು ಸಹ …

Read More »

ಕುವೆಂಪು ಸೊಸೆ, ಕವಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ಇನ್ನಿಲ್ಲ

ಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ವ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ರಾಜೇಶ್ವರಿ ಅವರು ಪತಿ ಪೂರ್ಣಚಂದ್ರ ತೇಜಸ್ವಿ ನಿಧನ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದಲ್ಲಿ ಒಬ್ಬರೇ ವಾಸವಾಗಿದ್ದರು. ಕಳೆದ ಕೆಲ ದಿನದ …

Read More »

ಚಿಂತಾಮಣಿ ಕೆಎಂಎಫ್​ ಅಧಿಕಾರಿ ಕೃಷ್ಣಾ ರೆಡ್ಡಿ‌ ಮನೆಯಲ್ಲಿ ಚಿನ್ನ, ಅಪಾರ ಆಸ್ತಿ ದಾಖಲೆ ಪತ್ತೆ

ಚಿಕ್ಕಬಳ್ಳಾಪುರ : ಬೆಳ್ಳಂಬೆಳ್ಳಗೆ ರಾಜ್ಯದೆಲ್ಲೆಡೆ ಎಸಿಬಿ ಅಧಿಕಾರಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ಜಿಲ್ಲೆಯ ಚಿಂತಾಮಣಿಯ ಕೆಎಂಎಫ್​ ಅಧಿಕಾರಿ ಕೃಷ್ಣಾ ರೆಡ್ಡಿ‌ ಎಂಬುವರ ಮನೆ ಮೇಲೆ ದಾಳಿ‌ ನಡೆಸಲಾಗಿದೆ. ಇಂದು ಡಿವೈಎಸ್ಪಿ ಸುಧೀರ್​ ,ಇನ್ಸ್‌ಪೆಕ್ಟರ್ ರವಿ ನೇತೃತ್ವದ ತಂಡ ಅಧಿಕಾರಿಯ ಮನೆಗೆ ದಾಳಿ ನಡೆಸಿ ಅನೇಕ ಗಂಟೆಗಳ ಕಾಲ ತಪಾಸಣೆ ನಡೆಸಿದೆ. ಈ ವೇಳೆ ಬೆಂಗಳೂರಿನಲ್ಲಿ ಎರಡು‌ ಸೈಟ್​​ನಲ್ಲಿ ‌5 ಮನೆಗಳ ನಿರ್ಮಾಣ, ಚಿಂತಾಮಣಿಯಲ್ಲಿ ಮೂರು ಮನೆ, 4 ಸೈಟ್​​​​ಗಳ ದಾಖಲೆಗಳು, …

Read More »