Shaikh BigTv
May 3, 2025
Breaking News, Crime, ಕರ್ನಾಟಕ, ದೆಹಲಿ, ದೇಶ-ವಿದೇಶ, ಬಿಹಾರ, ಮಧ್ಯಪ್ರದೇಶ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ತಹಶೀಲ್ದಾರ ಕಲಗೌಡ ಪಾಟೀಲ ಹೇಳಿದರು. ಅಂತ್ಯಕ್ರಿಯೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೋರ್ಟ್ ನಿರ್ದೇಶನದ ಮೇಲೆ ಮಣ್ಣು ಮಾಡಲಾಗಿದೆ. ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಹೆಚ್ಚಿಗೆ ಏನನ್ನೂ ಹೇಳಲು ಆಗುವುದಿಲ್ಲ ಎಂದರು. ಸಿಐಡಿ ಎಸ್.ಪಿ, ಎಸಿಪಿ, ಪಾಲಿಕೆ ಅಧಿಕಾರಿಗಳು ಸೇರಿದಂತೆ ಇನ್ನಿತರ ಸಮ್ಮುಖದಲ್ಲಿ …
Read More »
Shaikh BigTv
April 29, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಎನಕೌಂಟರ್ ಪ್ರಕರಣದ ಬಗ್ಗೆ ನಮಗಿಂತ ಮಾಧ್ಯಮದವರಿಗೆ ಹೆಚ್ಚಿನ ಮಾಹಿತಿ ಇದೆ. ಪೊಲೀಸ್ ಕಮೀಷನರ್ ರಿಪೋರ್ಟ್ ಆದರಿಸಿ ಇಲ್ಲಿ ಬಂದಿದ್ದೇವೆ. ಎನಕೌಂಟರ್ ಆದ ಸಂದರ್ಭದಲ್ಲಿ ನಾವು ಬರುವುದು ಸಹಜ. ಇಲ್ಲಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಶೀಘ್ರವಾಗಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ “ಡಾ.ಟಿ.ಶ್ಯಾಮ್ ಭಟ್” ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು,ಎನಕೌಂಟರ್ ಬಗ್ಗೆ ನಾವು …
Read More »
Shaikh BigTv
April 26, 2025
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಿಬ್ಬಂದಿಗಳ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ರೌಡಿಗಳನ್ನು ಮಟ್ಟ ಹಾಕುವುದನ್ನು ಬಿಟ್ಟು ಪುಟ್ಟ ಮಕ್ಕಳ ಮೇಲೆಯೇ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಜನಸ್ನೇಹಿ ಹೆಸರಲ್ಲಿ ಜನರಿಗೆ ಸಂಕಷ್ಟ ತಂದೊಡ್ಡುವ ಖಾಕಿ ಕಾರ್ಯಕ್ಕೆ ಈಗ ಎಲ್ಲೆಡೆಯೂ ಬೇಸರ ಮೂಡಿದೆ.ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೇರದ ಪೊಲೀಸ್ ಕಾನ್ಸ್ ಟೇಬಲ್ ನ ಅಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುವಂತಾಗಿದೆ. …
Read More »
BigTv News
April 24, 2025
Breaking News, Crime, ಕರ್ನಾಟಕ, ಕಲಬುರಗಿ
ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿರುವ ಹೈದ್ರಾ ದರ್ಗಾದಲ್ಲಿ ಆಯಿಷಾ ಸಂಬಂಧಿಕರ ಮಗುವಿನ ಕೇಶ ಮುಂಡನ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬೀದಿನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಅಫಜಲಪುರ ತಾಲೂಕಿನ ಗೊಬ್ಬೂರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಮೃತರನ್ನು ಕಲಬುರಗಿಯ ಮಿಲ್ಲತ್ ನಗರದ ನಿವಾಸಿಗಳಾದ ಆಯಿಷಾ ಅಜ್ಮೇರಾ ಹಾಗೂ ಜೈನಬ್ ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ದೇವಲ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ …
Read More »
BigTv News
April 22, 2025
Breaking News, Crime, ಕರ್ನಾಟಕ
ಗುರುವಾಯನಕೆರೆ- ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳು ಸೋಮವಾರ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಳದಂಗಡಿಯಿಂದ ಗುರುವಾಯನ ಕೆರೆ ಕಡೆ ತೆರಳುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳದತ್ತ ಪ್ರಯಾಣಿಸುತ್ತಿದ್ದ ಕಾರುಗಳು ಪರಸ್ಪರ ಅಪಘಾತಕ್ಕೀಡಾಗಿವೆ.ಗೇರುಕಟ್ಟೆಯ ಕುಸುಮಾವತಿ, ಭಾಗ್ಯವತಿ ಹಾಗೂ ವೈಭವ್ ಗಂಭೀರ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
Read More »
BigTv News
April 13, 2025
Breaking News, Crime, ಕರ್ನಾಟಕ
ಸೈಬರ್ ವಂಚಕರು ಹೊಸ ಹೊಸ ರೂಪದಲ್ಲಿ ಜನರನ್ನು ಮೋಸದ ಬಲೆಗೆ ಬೀಳಿಸುತ್ತಲೇ ಇದ್ದಾರೆ.ವ್ಯಕ್ತಿಯೊಬ್ಬರ ವಾಟ್ಸ್ಆಯಪ್ಗೆ ₹1,000 ಮೊತ್ತದ ಟ್ರಾಫಿಕ್ ಚಲನ್ ಇರುವ ಪಿಡಿಎಫ್ ಫೈಲ್ ಮಾದರಿಯ ಎಪಿಕೆ ಫೈಲ್ ಬಂದಿದೆ. ಇದರಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆಯೂ ಕಂಡಿದ್ದರಿಂದ, ಲಿಂಕ್ ನಂಬಿದ ವ್ಯಕ್ತಿ ಅದರ ಮೇಲೆ ಕ್ಲಿಕ್ ಮಾಡಿದ್ದಾರೆ. ಬಳಿಕ ಬ್ಯಾಂಕ್ ಖಾತೆಯಿಂದ ಹಂತ- ಹಂತವಾಗಿ ಹಣ ಕಡಿತಗೊಂಡಿದ್ದರೂ ಅವರ ಗಮನಕ್ಕೆ ಬಂದಿಲ್ಲ.ಮೂರು ಬ್ಯಾಂಕ್ ಖಾತೆಗಳಿಂದ ಒಟ್ಟು ₹7.42 ಲಕ್ಷ ಹಣ …
Read More »
BigTv News
April 12, 2025
Breaking News, Crime, ಕರ್ನಾಟಕ, ಬೆಂಗಳೂರು
ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯರು ಕಸದ ತೊಟ್ಟಿಯಲ್ಲಿ ನೋಡಿದಾಗ ನವಜಾತ ಶಿಶು ಪತ್ತೆಯಾಗಿದೆ. ಹೆಣ್ಣು ಎಂಬ ಕಾರಣಕ್ಕೆ ಜನಿಸಿದ ದಿನವೇ ಮಗುವನ್ನು ಪೋಷಕರು ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ.ಶಿಶುವಿಗೆ ಚಿಕಿತ್ಸೆಯ ಅಗತ್ಯವಿದ್ದು, ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಮೂರು ದಿನಗಳವರೆಗೆ ಚಿಕಿತ್ಸೆ ನೀಡಲಾಗುತ್ತದೆ. ನಂತರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗುವುದು’ ಎಂದು ಸಿಡಿಪಿಒ ಕೃಷ್ಣಮೂರ್ತಿ ತಿಳಿಸಿದರು.ಘಟನೆ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Read More »
BigTv News
April 12, 2025
Breaking News, ಕರ್ನಾಟಕ
ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಚಾಲಕನ ಸ್ಥಿತಿ ಗಂಭೀರವಾಗಿದ್ದು, ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.
Read More »
BigTv News
April 12, 2025
Breaking News, Crime, ಕರ್ನಾಟಕ
ಮದುವೆಯಾಗಲು ಯಾರೂ ಹೆಣ್ಣು ನೀಡುತ್ತಿಲ್ಲವೆಂದು ಮನನೊಂದ ಮಾಡ್ಲಗೇರಿ ಗ್ರಾಮದ ಇಮಾಮ್ ಸಾಬ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈತ ಪೋಲಿಯೋ ಪೀಡಿತನಾಗಿದ್ದು, ಎಡಗಾಲಿನ ವೈಕಲ್ಯ ಹೊಂದಿದ್ದ. ಪಾಲಕರು ಮದುವೆ ಮಾಡಿಸಲು ಪ್ರಯತ್ನ ನಡೆಸಿದರೂ ಹೆಣ್ಣು ನೀಡಲು ಯಾರೂ ಮುಂದೆ ಬಂದಿಲ್ಲ.ಇದರಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ಮೃತಪಟ್ಟಿದ್ದಾನೆ.
Read More »
Shaikh BigTv
April 7, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹಳೆ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಇಬ್ಬರು ಸ್ನೇಹಿತರು ದುಡ್ಡಿನ ವಿಷಯಕ್ಕಾಗಿ ಹೊಡೆದಾಡಿಕೊಂಡಿದ್ದಾರೆ. ಮಾತಿನ ಚಕಮಕಿಯಲ್ಲಿ ಶುರುವಾದ ಜಗಳ ಚಾಕು ಇರಿತಕ್ಕೆ ಕಾರಣವಾಗಿದೆ. ಎಂಬ ಸ್ನೇಹಿತನಿಗೆ ದುಡ್ಡಿನ ವಿಷಯಕ್ಕಾಗಿ ಚಾಕು ಇರಿದ ಸ್ನೇಹಿತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಪ್ರಕರಣವು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Read More »