Breaking News

ಮಂಡ್ಯ

ಹೆದ್ದಾರಿಯಲ್ಲಿ ವಾಹನ ಡಿಕ್ಕಿ :ಸಾವು

ಮಂಡ್ಯ ಜಿಲ್ಲೆಯ ಹನಕೆರೆ ಬಳೆ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಗುರುವಾರ ರಾತ್ರಿ ವಾಹನ ಡಿಕ್ಕಿಯಾಗಿ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಹೆದ್ದಾರಿಯ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ದಿಢೀರ್ ಪ್ರತಿಭಟಿಸಿದರು ಬಿ ಗೌಡಗೆರೆ ಗ್ರಾಮದ ಜಿ.ಕೆ ಕೆಂಪೇಗೌಡ ಎಂಬುವರ ಪತ್ನಿ ಯಶೋದಮ್ಮ ಮೃತ ಮಹಿಳೆ. ಸ್ಥಳೀಯ ಸಾರ್ವಜನಿಕರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ

Read More »

ಮತಾಂತರಕ್ಕೆ ಒಪ್ಪದ ಪತ್ನಿ, ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ!!

ಪತ್ನಿ ಲಕ್ಷ್ಮೀ, ಅತ್ತೆ ಶ್ರುತಿ ಇಬ್ಬರನ್ನು ಮತಾತಂತರವಾಗುವಂತೆ ಪತಿ ಶ್ರೀಕಾಂತ್ ಸೇರಿ ಹಲವರು ಬಲವಂತ ಮಾಡುತ್ತಿದ್ದರು. ಒಪ್ಪದಿದ್ದಾಗ ಹಲ್ಲೆ ನಡೆಸಲಾಗಿದೆ. ಪತಿ ಶ್ರೀಕಾಂತ್ ಪತ್ನಿ ಹಾಗೂ ಅತ್ತೆಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಇದಕ್ಕೆ ಪತ್ನಿ ಹಾಗೂ ಅತ್ತೆ ನಿರಾಕರಿಸಿದಾಗ ಶ್ರೀಕಾಂತ್ ಹಾಗೂ ಆತನ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಲಕ್ಷ್ಮೀ ಸಹೋದರ ನೀಡಿದ ದೂರುನ ಹಿನ್ನೆಲೆಯಲ್ಲಿ ಪತಿ ಶ್ರೀಕಾಂತ್ ಹಾಗೂ ಕುಟುಂಬದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಪ್ರಕರಣ …

Read More »

ಮಂಡ್ಯ: ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು!!

ಕುಟುಂಬದ ಮೂವರು ನಾಲೆಗೆ ಇಳಿದ ವೇಳೆ ಆಯತಪ್ಪಿ ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ.ಮೃತಪಟ್ಟವರನ್ನು ಮೈಸೂರಿನ ಗೌಸಿಯಾ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮಂಡ್ಯ ಸಮೀಪ ಚಿಕ್ಕಾಯರಹಳ್ಳಿ ಮಾರಮ್ಮನ ಜಾತ್ರೆಗೆ ಆಗಮಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ.ಈ ಘಟನೆ ಕಂಡ ಸ್ಥಳೀಯರು ಮೊದಲಿಗೆ ಸೋನು ಹಾಗೂ ಸಿದ್ದೇಶ್ ಮೃತದೇಹಗಳನ್ನು ಹೊರಗೆ ತೆಗೆದಿದ್ದು, ಆ ನಂತರ ಪೊಲೀಸರ ಸಹಾಯದಿಂದ ಮತ್ತೊಂದು ಮೃತದೇಹವನ್ನು ಹೊರತೆಗೆಯೆಲಾಗಿದೆ.

Read More »

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟ ‘ASI’ ಮಗಳು.ದುರಂತ ಕಾರಣ.!

ಬಂದೀಗೌಡ ಬಡಾವಣೆ ಸಮೀಪ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನ ಎಂದು ಗುರುತಿಸಲಾಗಿದೆ. ಮಂಡ್ಯದಲ್ಲಿ ಘೋರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್‌ಐ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್ ಐ ಅನ್ಸ್ರ್ ಪಾಷಾ ಅವರ ಮಗಳಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Read More »

ಮಂಡ್ಯದವರು ಛತ್ರಿಗಳು ಎಂದ ಡಿಕೆಶಿ ವಿರುದ್ಧ ಸಿಡಿದೆದ್ದ ಮಂಡ್ಯದ ಜನ

ಮಂಡ್ಯದವರು ಛತ್ರಿಗಳು ಎಂಬ ಡಿ ಸಿ ಎಂ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಜಿಲ್ಲಾದಂತ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಡಿಕೆಶಿ ನೀಡಿರುವ ಹೇಳಿಕೆ ವಿರುದ್ಧ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಟೀಕೆ ಮಾಡಲಾಗುತ್ತಿದೆ . ಜಿಲ್ಲೆ ಜನರಿಗೆ ಡಿಕೆಶಿ ಅವಮಾನ ಮಾಡಿದ್ದಾರೆ. ಮಂಡ್ಯ ಜನರ ಭಿಕ್ಷೆಯಿಂದ ಕಾಂಗ್ರೆಸ್ಗೆ ಅಧಿಕಾರ ಸಿಕ್ಕಿದೆ. ಇವಳರಲ್ಲಿ ಐದು ಕ್ಷೇತ್ರಗಳು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ ಮಂಡ್ಯದವರ ಸಿಎಂ ಆಗಿದ್ದಾಗ ಅವರ ಕಾಲಿಗೆ ಬಿದ್ದು ಬೆಳೆದವರು …

Read More »

ಅನಾಥಾಶ್ರಮದಲ್ಲಿ ಊಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥ,ಓರ್ವ ವಿದ್ಯಾರ್ಥಿ ಸಾವು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಅನಾಥಾಶ್ರಮದಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನಿಂಗ್ ಆಗಿದೆ. ವಿಷ ಪ್ರಾಶನದ ಪರಿಣಾಮ 6ನೇ ತರಗತಿಯ ವಿದ್ಯಾರ್ಥಿ ಕೆರ್ಲಾಂಗ್ ಸಾವನ್ನಪ್ಪಿದ್ದು, 29 ಮಕ್ಕಳು ಅಸ್ವಸ್ಥರಾಗಿದ್ದಾರೆ.ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಫುಡ್ ಪಾಯ್ಸನಿಂಗ್ ಕುರಿತು ಪ್ರಕರಣ ದಾಖಲಿಸಲಾಗಿದೆ. ಘಟನೆಯ ಪೂರ್ಣ ಮಾಹಿತಿ ಸಂಗ್ರಹಿಸಲು ಆರೋಗ್ಯ ಇಲಾಖೆ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ …

Read More »

“ನಾಲೆ”ರಿಪೇರಿ.

ಸತತವಾಗಿ ನಾಲೆ ಬಗ್ಗೆ ದೂರು ವರದಿ ನೀಡಿದ ಮೂಲಕ ಎಚ್ಚೆತ್ತ ರಾಯಚೂರು ಜಿಲ್ಲಾಡಳಿತ ಹಲವು ದಿನದಿಂದ ಆಕ್ಸಿಡೆಂಟ್ ನಡೆಯುತ್ತಿದ್ದ ಮಂಡ್ಯದ ವಿಸಿನಾಲೆಯು ಹದಗಟ್ಟಿದ್ದು. ಇದೀಗ ಜಿಲ್ಲಾಡಳಿತವು ಎಚ್ಚೆತ್ತು ಮಂಡ್ಯದ ವಿಸಿನಾಲೆಯನ್ನು ರಿಪೇರಿ ಮಾಡಿದ್ದಾರೆ. ನಾಲಗೆ ತಡ ಗೋಡೆ ಇಲ್ಲದ ಕಾರಣ ಹಲವಾರು ಆಕ್ಸಿಡೆಂಟ್ ಗಳು ನಡೆಯುತ್ತಿದ್ದವು ಎರಡುವರೆ ಕಿಲೋಮೀಟರ್ ವರೆಗೂ ತಡಗೋಡೆಯನ್ನು ನಿರ್ಮಾಣ ಮಾಡಿದೆ. ಇದರ ಬಗ್ಗೆ ಸಾರ್ವಜನಿಕರು ಸಂತೋಷ ವ್ಯಕ್ತಪಡಿಸಿದ್ದಾರೆ.

Read More »

ಕಾಂತರಾಜು ವರದಿ ಜಾರಿಗೆ ಸಂಪೂರ್ಣವಾಗಿ ಜನಗಣತಿ ಮಾಡಿಲ್ಲ….

ಮಂಡ್ಯ: ಕಾಂತರಾಜು ವರದಿ ಜಾರಿಗೆ ಸಂಪೂರ್ಣವಾಗಿ ಜನಗಣತಿ ಮಾಡಿಲ್ಲ, ಸಂಪೂರ್ಣ ಸಿದ್ದತೆಯನ್ನೂ ಮಾಡಿಲ್ಲ. ಗೊತ್ತಿಲ್ಲದೆ ಇರೋ ಶಾಲಾ ಮಕ್ಕಳಿಂದ ಸಹಿ ಹಾಕಿಸಿಕೊಂಡು ಅವರಿಗೆ ಬೇಕಾದಂತೆ ಸಿದ್ದತೆ ಮಾಡಿರುವ ಜಾತಿಗಣತಿ ವರದಿ ಅನ್ನೋದು ಜಗಜ್ಜಾಯಿರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಮುಖ್ಯಮಂತ್ರಿ ಟ್ವೀಟ್ ಗಮನಿಸಿದ್ದೇನೆ, ಅವರ ಹೆಮ್ಮೆಯ ರಾಹುಲ್ ಗಾಂಧಿ ಭಾವನೆಗೆ ಸ್ಪಂಧಿಸಿ ಜಾತಿಗಣತಿ ಪಡೆಯೋದಾಗಿ ಹೇಳಿದ್ದಾರೆ. ಈಗಾಗಲೇ ಮಾಧ್ಯಮದಲ್ಲಿ ಕಾಂತರಾಜು ಅವರ …

Read More »

ಇದೆಲ್ಲಾ ಮಾತನಾಡುವುದನ್ನು ಬಿಟ್ಟು ಮೊದಲು ರೈತರ ಸಂಕಷ್ಟಕ್ಕೆ ಸ್ಪಂದಿಸುವುದನ್ನು ಕಲಿಯಲಿ: ಶಾಸಕ ಕೆ. ಸುರೇಶ್‌ಗೌಡ.

ಮಂಡ್ಯ: ನಾವು ಚೆಡ್ಡಿ ಹಾಕಿಕೊಳ್ಳುತ್ತೇವೋ ಅಥವಾ ಬುಂಡಾ ಬುಂಡಾ ತಿರುಗುತ್ತೇವೆ ಅವರಿಗೆ ಯಾಕೆ? ಇದೆಲ್ಲಾ ಮಾತನಾಡುವುದನ್ನು ಬಿಟ್ಟು ಮೊದಲು ರೈತರ ಸಂಕಷ್ಟಕ್ಕೆ ಸ್ಪಂದಿಸುವುದನ್ನು ಕಲಿಯಲಿ ಎಂದು ಮಾಜಿ ಶಾಸಕ ಕೆ. ಸುರೇಶ್‌ಗೌಡ ಸಚಿವ ಚಲುವರಾಯಸ್ವಾಮಿಗೆ ತಿರುಗೇಟು ನೀಡಿದರು. ಸುದ್ಧಿಗಾರರೊಂದಿಗೆ ಮಾತನಾಡಿ, ಬಿಜೆಯವರು ಹೇಳಿದರೆ ಜೆಡಿಎಸ್‌ನವರು ಚೆಡ್ಡಿ ಬೇಕಾದರೂ ಹಾಕ್ತಾರೆ ಎಂಬ ಚಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಾವು ಚೆಡ್ಡಿ ಹಾಕ್ತೇವೋ, ಕುಣಿತೀವೋ, ಮಲಗುತ್ತೇವೋ ಚಲುವರಾಯಸ್ವಾಮಿಗೆ ಯಾಕೆ ಬೇಕು, ರೈತರು …

Read More »

ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯ ಸರ್ಕಾರ ನಾಟಕವಾಡುತ್ತಿದೆ: ಚಕ್ರವರ್ತಿ ಸೂಲಿಬೆಲೆ..

ಮಂಡ್ಯ: ತಮಿಳುನಾಡು ಮುಖ್ಯಮಂತ್ರಿಯೊಂದಿಗೆ ಸಖ್ಯೆ ಬೆಳಸಿ, ಕರ್ನಾಟಕದ ಕಾವೇರಿ ನೀರನ್ನು ರಾಜಕೀಯ ಹಿತಕ್ಕಾಗಿ ಬಿಡುಗಡೆ ಮಾಡಿ ಈಗ ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯ ಸರ್ಕಾರ ನಾಟಕವಾಡುತ್ತಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದರು. ನಗರದ ಸರ್ ಎಂ.ವಿ. ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಪ್ರೀಂಕೋರ್ಟ್ ಅಥವಾ ಪ್ರಾಧಿಕಾರ ಹೇಳಿದೇ ನೀರು ಬಿಟ್ಟು ಈಗ ಪ್ರಧಾನಿ ಮಧ್ಯಸ್ಥಿಕೆ ವಹಿಸಿ …

Read More »