Breaking News

ಹಾವೇರಿ

ಗ್ಯಾಂಗ್‌ರೇಪ್‌ ಆರೋಪಿಗಳಿಗೆ ಜಾಮೀನು, ಭರ್ಜರಿ ರೋಡ್‌ಶೋ

ಗ್ಯಾಂಗ್ ರೇಪ್ ಆರೋಪಿಗಳ ರೋಡ್ ಶೋ..?? ಜಾಮೀನು ಸಿಕ್ಕ ಮೇಲೆ ರೀಲ್ಸ್ ಮಾಡಿ ಹರಿಬಿಟ್ಟ ಪುಂಡರು… ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ರೋಡ್ ಶೋ ಮೂಲಕ ಪಟ್ಟಣದ ಬೀದಿ ಬೀದಿಗಳಲ್ಲಿ ಮೆರೆದಾಡಿರುವ ಘಟನೆ ನಡೆದಿದೆ. ಆಲೂರು ಪಟ್ಟಣದಲ್ಲಿ ಆರೋಪಿಗಳು 5 ಕಾರುಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.ಆರೋಪಿಗಳು ಮೆರವಣಿಗೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.2024ರ ಜ.8ರಂದು ಹಾನಗಲ್ ಹೊರವಲಯದಲ್ಲಿ …

Read More »

ದುರಂತ: ಟ್ರ್ಯಾಕ್ಟರ್ ನಿಂದ ಬಿದ್ದು ಇಬ್ಬರು ದುರ್ಮರಣ!!

ಗೋಡಿಹಾಳ ಗ್ರಾಮದಿಂದ ಹರಿಹರಕ್ಕೆ ನಾಮಕರಣ ಶಾಸ್ತ್ರಕ್ಕೆ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ಟ್ರೇಲರ್ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ರಾಣೆಬೆನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ಗೋಡಿಹಾಳ ಗ್ರಾಮದ ಅಶೋಕ್ ಸಿದ್ದಪ್ಪ ಮಾಗನೂರ (56) ಹಾಗೂ ಜಗದೀಶ್ ಸಿದ್ದಪ್ಪ (50) ಎಂದು ಗುರುತಿಸಲಾಗಿದೆ.ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹಾವೇರಿ :ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ, ಆರೋಪ!!

ಶಿಲ್ಪಾ ಶಿಗ್ಗಾಂವಿಯ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು. ನವೀನ್​ ಆರೋಪಿ ರಂಜಾನ್ ನದಾಫ್​ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ರಂಜಾನ್​ ನದಾಫ್​ ಮೃತ ಶಿಲ್ಪಾಗೆ ಕರೆ ಮಾಡಿ ಕಿರುಕುಳ ನೀಡಿದ್ದನಂತೆ. ಈತನ ಕಿರುಕುಳಕ್ಕೆ ಬೇಸತ್ತು ಶಿಲ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ನವೀನ್​ಗೆ ಹೊಡೆದು ಬಡೆದು ರಂಜಾನ್ ಪೊಲೀಸರಿಗೆ ದೂರು ನೀಡಿದ್ದಾರೆ. ನವೀನ್ ಮೊಬೈಲ್ ಕಸಿದುಕೊಂಡು ಅದರಲ್ಲಿನ ಶಿಲ್ಪಾ ನಂಬರ್ ತೆಗೆದುಕೊಂಡು ಕರೆ ಮಾಡಿ ಕಿರುಕುಳ …

Read More »

ತಾಯಿಯ ವಿರುದ್ಧ ಸಾಕ್ಷಿ ಹೇಳಿದ್ದಕ್ಕೆ ಆಕೆಯ ಕುಟುಂಬಸ್ಥರು ನಿಂದಿಸಿದ್ದರಿಂದ ನೊಂದ ಪುತ್ರ ವಿಷ ಸೇವಿಸಿ ಆತ್ಮಹತ್ಯೆ!!

ಕೌಟುಂಬಿಕ ಕಲಹದಿಂದ ಅಶ್ವಿ‌ನಿ 4 ವರ್ಷಗಳ ಹಿಂದೆಯೇ ತವರಿಗೆ ತೆರಳಿದ್ದಾಳೆ. ದಂಪತಿಯ ವಿಚ್ಛೇದನ ಪ್ರಕರಣದ ವಿಚಾರಣೆ ವೇಳೆ ಹಿರಿಯ ಪುತ್ರ ಬಸವರಾಜ ಸಹಿತ ಮೂವರು ಮಕ್ಕಳು ತಂದೆ ಪರ ಹಾಗೂ ತಾಯಿ ವಿರುದ್ಧ ಸಾಕ್ಷಿ ಹೇಳಿದ್ದಾರೆ. ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ತಾಯಿ ಮನೆಗೆ ತೆರಳಿದ್ದಾಗ ಅಲ್ಲಿ ನಿಂದಿಸಿದ್ದರಿಂದ ಬಸವರಾಜ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುತ್ತಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಸವರಾಜ ಕರಿಯಪ್ಪ ಚಿಟಗಿ ಆತ್ಮಹತ್ಯೆ ಮಾಡಿಕೊಂಡವನು. ತಾಲೂಕಿನ ತೆರೆದಹಳ್ಳಿ ಗ್ರಾಮದ …

Read More »

ಹಾವೇರಿ ನಗರದಲ್ಲಿ 11ರಿಂದ ಒಂದೇ ಭಾರತ್ ನಿಲುಗಡೆ.

ಹಾವೇರಿ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಒಂದೇ ಭಾರತ ರೈಲು ನಿಲುವಡೆ ದಿನಾಂಕ ನಿಗದಿಯಾಗಿದೆ. ಕೇಂದ್ರ ರೈಲ್ವೆ ಕಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಏಪ್ರಿಲ್ ೧೧ ರಂದು ಮಧ್ಯಾಹ್ನ 2ಕ್ಕೆ ಹಾವೇರಿ ನಿಲ್ದಾಣದಲ್ಲಿ ಒಂದೇ ಭಾರತ ರೈಲು ನಿಲುಗಡೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು-ಹುಬ್ಬಳ್ಳಿ-ಧಾರವಾಡ ನಡುವೆ ಕಳೆದ ಎರಡು ವರ್ಷಗಳಿಂದ ಸಂಚರಿಸುತ್ತಿರುವ ಒಂದೇ ಭಾರತದ ನೀಡಬೇಕು ಎಂಬ ಬೇಡಿಕೆ ಜಿಲ್ಲೆಯ ಜನರದ್ದಾಗಿತ್ತು. ಇದಕ್ಕೆ ಪೂರಕವಾಗಿ ಸಂಸದ ಬಸವರಾಜ್ …

Read More »

ಎಸ್‌ಎಸ್‌ಎಲ್ಸಿ ಉತ್ತರ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತ.!

ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ, ಧಾರವಾಡ ಜಿಲ್ಲೆಗಳ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಲೋಡ್ ಮಾಡಿಕೊಂಡು ಹಾವೇರಿ ಮಾರ್ಗವಾಗಿ ಬೆಂಗಳೂರಿಗೆ ವಾಹನ ತೆರಳುತ್ತಿತ್ತು.ಬಂಕಾಪುರ ಟೋಲ್ ಸಮೀಪ ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋದಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ವಾಹನ ಪಲ್ಟಿಯಾಗಿದೆ. ಉತ್ತರ ಪತ್ರಿಕೆಯ ಬಂಡಲ್ ಗಳನ್ನು ಸುರಕ್ಷಿತವಾಗಿ ಬೇರೆ ವಾಹನದಲ್ಲಿ ಬೆಂಗಳೂರು ಪ್ರೌಢಶಾಲಾ ಬೋರ್ಡ್ ಗೆ ಕಳುಹಿಸಲಾಗಿದೆ.

Read More »

ಶಿಗ್ಗಾವ್ :”ನಮ್ಮ ಊರು ನಮ್ಮ ಕೆರೆ” ಹಸ್ತಾಂತರ ಕಾರ್ಯಕ್ರಮ.

ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ “ನಮ್ಮ ಊರು ನಮ್ಮ ಕೆರೆ” ಹಸ್ತಾಂತರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಹಾವೇರಿ ಜಿಲ್ಲಾ ನಿರ್ದೇಶಕರಾದ ಶಿವರಾಯ ಪ್ರಭು ಪೂರ್ಣ ಕುಂಭ ಹಸ್ತಾಂತರಿಸುವ ಮೂಲಕ ಕೆರೆಯ ಜವಾಬ್ದಾರಿಯನ್ನು ಗ್ರಾಮ ಪಂಚಾಯತ್ ಮತ್ತು ಕೆರೆ ಸಮಿತಿಯವರಿಗೆ ನೀಡಿದರು. “ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಲ್ಲಿ ಅತ್ತಿಗೇರಿ ಗ್ರಾಮವನ್ನು ಆಯ್ಕೆ ಮಾಡಿಕೊಂಡು 24 ದಿನಗಳ ಕಾಲ ಕೆರೆ ಕಾಮಗಾರಿಯನ್ನು ಮಾಡಧಿಕೃತವಾಗಿ ಗ್ರಾಮ ಪಂಚಾಯತ್ ಮತ್ತು ಕೆರೆ ಅಭಿವೃದ್ಧಿ …

Read More »

ಹಾವೇರಿ: ವಂದೇ ಭಾರತ ರೈಲು ನಿಲುಗಡೆಗೆ ಆದೇಶ,ಕೇಂದ್ರದಿಂದ ಒಪ್ಪಿಗೆ.

ಬೆಂಗಳೂರು-ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್‌ ರೈಲು ಹಾವೇರಿಯಲ್ಲಿ ನಿಲುಗಡೆ ಮಾಡಲು ಕೇಂದ್ರದಿಂದ ಒಪ್ಪಿಗೆ ಸಿಕ್ಕಿದೆ. ಇದರಿಂದಾಗಿ ಹಾವೇರಿ ಜನ ವಂದೇ ಭಾರತ್‌ ರೈಲಿನಲ್ಲಿ ಪ್ರಯಾಣ ಮಾಡಬಹುದಾಗಿದೆ. ಇದಕ್ಕಾಗಿ ಮಾಜಿ ಸಿಎಂ ಹಾಗೂ ಹಾವೇರಿಯ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Read More »

ಅಕ್ರಮವಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ದಂಪತಿಯ ಬಂಧನ.

‘ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ಭಾಗ್ಯ ಗುಡಿಗಾರ ಹಾಗೂ ಅವರ ಪತಿ ರಮೇಶನನ್ನು ಅಕ್ರಮವಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಆರೋಪದಡಿ ಹಾನಗಲ್ ಠಾಣೆ ಪೊಲೀಸರು ಬಂಧಿಸಿದ್ದು, ಅವರಿಂದ 7 ಖಾಲಿ ಚೆಕ್ ಜಪ್ತಿ ಮಾಡಿದ್ದಾರೆ. ಖ್ವಾಜಾಮುದ್ದೀನ್, ಸ್ಥಳೀಯ ಬ್ಯಾಂಕ್‌ವೊಂದರಲ್ಲಿ ಫಿಗ್ಮಿ ಕಲೆಕ್ಟರ್ ಆಗಿದ್ದಾರೆ. ಮದುವೆ ಬಾಸಿಂಗ ತಯಾರಿ ಕೆಲಸ ಮಾಡುತ್ತಿದ್ದ ದಂಪತಿ, ವಿವಿಧ ಸಂಘಗಳಲ್ಲಿ ಸಾಲ ಪಡೆದು ಖ್ವಾಜಾಮುದ್ದೀನ್‌ಗೆ ನೀಡಿದ್ದರೆಂಬ ಮಾಹಿತಿ ಇದೆ. ಇಬ್ಬರ ನಡುವೆಯೂ ಹಲವು ಬಾರಿ ಹಣದ …

Read More »

ಅಣುತ್ತಿರ್ಣ ಶಂಕೆಯಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

ವಿದ್ಯಾರ್ಥಿಗಳು ಅನುತ್ತೀರ್ಣ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುವುದು ಎಷ್ಟು ಸರಿ ಈ ಬಗ್ಗೆ ಉಪಾಧ್ಯಾಯರು ಮನೆಯವರು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಾಗಿದೆ. ಹಾವೇರಿಯ ವಿದ್ಯಾರ್ಥಿ ಗುರುವಾರ ಕೊನೆ ಪರೀಕ್ಷೆ ಮುಗಿಸಿ ಮನೆಗೆ ಬಂದು ಪರೀಕ್ಷೆ ಚೆನ್ನಾಗಿ ಆಗಿಲ್ಲ ಎಂದು ಕಣ್ಣೀರಿಟ್ಟು ಮನೆಯವರ ಮುಂದೆ ಹೇಳಿಕೊಂಡಿದ್ದಳು. ಸಂಜೆ ಕೊನೆ ಬಾಗಿಲನ್ನು ಹಾಕಿಕೊಂಡವಳು ತೆಗೆದೆ ಇರಲಿಲ್ಲ. ಶುಂಠಿಗೆ ತಂದ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಡಲೇ ಮನೆಯವರು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ …

Read More »

You cannot copy content of this page