Breaking News

ಬೆಳಗಾವಿ

ಕೋ-ಆಪರೇಟೀವ್​ ಬ್ಯಾಂಕ್​​ನಲ್ಲಿ ಕೋಟ್ಯಂತರ ಅವ್ಯವಹಾರ

ಬೆಳಗಾವಿ: ಡಿಕೆಶಿ ಗರ್ಲ್​​ ಫ್ರೆಂಡ್​ ಮನೆ ಲಂಡನ್​​ನಲ್ಲಿ ಇದೆ ಎಂದು ಡಿ.ಕೆ.ಶಿವಕುಮಾರ್​​ ವಿರುದ್ಧ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.  ಶುಗರ್​ ಫ್ಯಾಕ್ಟರಿಯಲ್ಲಿ ಡಿಕೆಶಿ ಹಣ ಹೂಡಿಕೆ ಮಾಡಿದ್ದಾರೆ. ಹೆಬ್ಬಾಳ್ಕರ್​​ ಶುಗರ್​​ ಫ್ಯಾಕ್ಟರಿಯಲ್ಲಿ ಡಿಕೆಶಿ ಬ್ಲಾಕ್​​ಮನಿ ಇದೆ, ಕೋ-ಆಪರೇಟೀವ್​ ಬ್ಯಾಂಕ್​​ನಲ್ಲಿ ಕೋಟ್ಯಂತರ ಅವ್ಯವಹಾರ ಆಗಿದೆ.  ಲಂಡನ್​​, ದುಬೈನಲ್ಲಿ ಮನೆ ಇವೆ ಅಂತಾ ಡಿಕೆಶಿ ಹೇಳಿದ್ದಾರೆ, ಡಿಕೆಶಿ ಗರ್ಲ್​​ ಫ್ರೆಂಡ್​ ಮನೆ ಲಂಡನ್​​ನಲ್ಲಿ ಇದೆ ಎಂದು ಗುಡುಗಿದ್ದಾರೆ. ಡಿ.ಕೆ.ಶಿವಕುಮಾರ್​​​ ನೂರಾರು CD ಮಾಡಿಕೊಂಡಿದ್ದಾರೆ ಎಂದು …

Read More »

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತು ಚರ್ಚೆ

ಬೆಳಗಾವಿ : ಸುವರ್ಣಸೌಧದಲ್ಲಿ ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದೆ. ಬೆಳಗಾವಿ ಚಳಿಗಾಲದ ಅಧಿವೇಶನ ಇಂದೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ನಿಗದಿತ ಅವಧಿಗಿಂತ ಒಂದು ದಿನ …

Read More »


ರಾಜ್ಯ ಸರ್ಕಾರವು ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ

ಬೆಳಗಾವಿ : ರಾಜ್ಯ ಸರ್ಕಾರವು ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹ ಭಾಗ್ಯ ಯೋಜನೆಯಡಿ ರಾಜ್ಯಾದ್ಯಂತ ಪೌರಕಾರ್ಮಿಕರಿಗೆ 5,188 ಮನೆಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಡಳಿ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ.ನಾಗರಾಜ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರಾಜ್ಯಾದ್ಯಂತ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ 5,188 ಮನೆಗಳನ್ನು ನೀಡಲು ಅನುಮೋದನೆಗೊಂಡು ಅನೇಕ ಕಡೆ ಕಾಮಗಾರಿಯೂ ನಡೆಯುತ್ತಿದೆ. ಪೌರ ಕಾರ್ಮಿಕರು ನಿವೇಶನ …

Read More »

ರಾಜ್ಯಾದ್ಯಂತ ಇಂದಿನಿಂದ ಮಾಸ್ಕ್ ಕಡ್ಡಾಯ : ಆರ್.ಅಶೋಕ್

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮುಂಜಾಗೃತಾ ಕ್ರಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ಸಧ್ಯಕ್ಕೆ ದಂಡ ವಿಧಿಸುವುದಿಲ್ಲ. ಆದರೆ, ಜನರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ವಹಿಸಿ ಮಾಸ್ಕ್ ಧರಿಸುವುದು …

Read More »

ರೈತರಿಗೆ ಸಿಹಿ ಸುದ್ದಿ ನೀಡಿದ ಬಿ.ಸಿ. ಪಾಟೀಲ್

ಬೆಳಗಾವಿ: ಕೃಷಿ ಯಂತ್ರಧಾರೆ ಯೋಜನೆಯನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ ನಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮುನಿರಾಜುಗೌಡ ಪಿ.ಎಂ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಲವೆಡೆ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ.2015-16ನೇ ಸಾಲಿನಲ್ಲಿ ಸ್ಥಾಪಿಸಿರುವ ಕೆಲವು ಕೃಷಿ ಯಂತ್ರಧಾರೆ ಕೇಂದ್ರಗಳ ಆರು ವರ್ಷಗಳ ಒಡಂಬಡಿಕೆ ಅವಧಿಯು ಮುಕ್ತಾಯವಾಗಿದೆ ಎಂದರು. ಸಂಬಂಧಪಟ್ಟ ಸೇವಾ …

Read More »

ಕೋವಿಡ್ ನೆಪವಿಟ್ಟುಕೊಂಡು ಚುನಾವಣೆ ಮುಂದೂಡುವ ಯತ್ನ  : ಡಿಕೆಶಿ

ಬೆಳಗಾವಿ : ಕೋವಿಡ್ ನೆಪವಿಟ್ಟುಕೊಂಡು ಚುನಾವಣೆ ಮುಂದೂಡುವ ಯತ್ನ ವನ್ನು ಸರ್ಕಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಬಳಿ ಚರ್ಚೆ ನಡೆಸಲಾಗಿದೆ.ಸಂಪುಟದಲ್ಲೂ ಚರ್ಚೆ ನಡೆಯುತ್ತಿದೆ. ದೆಹಲಿಯ ಪ್ರಧಾನಿ ಕಚೇರಿಯಿಂದ ದೂರವಾಣಿ ಕರೆ ಬಂದಿದೆ ಎಂಬ ಮಾಹಿತಿ ಇದೆ. ಇದೆಲ್ಲವೂ ಚುನಾವಣೆ ಮುಂದೂಡುವ ಹುನ್ನಾರ. ಅವರು ಯಾವಾಗಲಾದರೂ ಚುನಾವಣೆ ಮಾಡಲಿ ನಮ್ಮ ಪಕ್ಷ ಸಿದ್ಧವಿದೆ ಎಂದರು. ಈ ಹಿಂದೆ …

Read More »

ಕೋವಿಡ್ ಕುರಿತು ಸಿಎಂ ಇಂದು ಮಹತ್ವದ ಸಭೆ

ಬೆಳಗಾವಿ: ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ಗುರುವಾರ ಸಭೆಯನ್ನು ಕರೆಯಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಹೀಗಾಗಿ ಇಂದು ಸಿಎಂ ಕರೆದಿರುವಂತ ಕೋವಿಡ್ ಕಂಟ್ರೋಲ್ ಸಭೆ ಮಹತ್ವ ಮೂಡಿಸಿದ್ದು, ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ನಿಯಮ …

Read More »

ವೀರ ಸಾವರ್ಕರ್‌ ಅನ್ನು ಟಿಪ್ಪು ಸುಲ್ತಾನ್‌ ಗೆ ಹೋಲಿಸುವುದು ಮಾಡುವುದು ಸರಿಯಲ್ಲ : ಯತ್ನಾಳ್

ಬೆಳಗಾವಿ: ವೀರ ಸಾವರ್ಕರ್‌ ಅನ್ನು ಟಿಪ್ಪು ಸುಲ್ತಾನ್‌ ಗೆ ಹೋಲಿಸುವುದು ಮಾಡುವುದು ಸರಿಯಲ್ಲ. ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಾವರ್ಕರ್‌ ಭಾವಚಿತ್ರಕ್ಕೆ ಕಾಂಗ್ರೆಸ್ ಪಕ್ಷ ಮೃದು ಧೋರಣೆ ತೋರಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುದ್ಧಿ ಕಲಿತಂತೆ ತೋರ್ತಿದೆ. ರಾಹುಲ್ ಗಾಂಧಿಯೂ ಸಹ ಬುದ್ಧಿ ಕಲಿಯುವಂತಾಗಲಿ ಎಂದು ಹೇಳಿದರು.ರಾಜಕೀಯ ದುರುದ್ದೇಶ ಇಲ್ಲ: ಸಿಬಿಐ, …

Read More »

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಸಿದ್ಧತೆ

ಬೆಳಗಾವಿ: ಡಿಸೆಂಬರ್ 19 ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ. ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ನಗರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಧಿವೇಶನವನ್ನು ಪರಿಣಾಮಕಾರಿಯಾಗಿ ನಡೆಸುವ ಬಗ್ಗೆ ಚರ್ಚಿಸಿದರು. ಪಾಟೀಲ್ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಹಾರ, ಸಾರಿಗೆ, ಆರೋಗ್ಯ ಮತ್ತು ಇತರ ಸೌಲಭ್ಯಗಳ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು. ಅಧಿವೇಶನ …

Read More »


ಜೆಡಿಎಸ್ ಗೆ ಸೇರ್ಪಡೆ : ಸ್ವತಃ ರಮೇಶ್ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಕಾರ್ಯಕ್ರಮಗಳಿಂದ ದೂರವುಳಿದಿದ್ದು, ಪಕ್ಷ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ಇದೀಗ ಸ್ವತಃ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಬೆಳಗುಂದಿ ಗ್ರಾಮದಲ್ಲಿ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ನಾನು ಮಾತನಾಡಿದ್ದು ನಿಜ. ಆದರೆ …

Read More »

You cannot copy content of this page