Breaking News

ಕೋಲಾರ

ಕುಡಿದ ಅಮಲಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ, ಕೊಲೆಯಲ್ಲಿ ಅಂತ್ಯವಾದ ಘಟನೆ.!

ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಹೊರವಲಯದಲ್ಲಿರುವ ಬಾರ್ ಎದುರು ಘಟನೆ ನಡೆದಿದೆ.ಸ್ನೇಹಿತ ಮೊಯಿನ್‌ನಿಂದಲೇ ಮತೀನ್ ಹತ್ಯೆಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಜಗಳ ಪ್ರಾರಂಭವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Read More »

ಕುಲುಮೆ ಫ್ಯಾಕ್ಟರಿ ಬಂದ್. ಜಿಲ್ಲಾಧಿಕಾರಿಯಿಂದ ದೂರು ದಾಖಲು.

ಕೋಲಾರದಲ್ಲಿನ ಕುಲುಮೆ ಫ್ಯಾಕ್ಟರಿ ಬಂದ್ ಅಂಗನವಾಡಿ ಮಕ್ಕಳಿಗೆ ಉಂಟಾಗುತ್ತಿರುವುದರಿಂದ ಶಬ್ದ ಮಾಲಿನ್ಯದಿಂದ ಕಾರಣದಿಂದ ಜಿಲ್ಲಾಡಳಿತಕ್ಕೆ ದೂರು ನೀಡಿದ ಕಾರಣ ಕುಲುಮೆಯನ್ನು ಬಂದ್ ಮಾಡಿಸಲಾಗಿದೆ

Read More »

ಎಸ್. ಮುನಿಸ್ವಾಮಿ ಕೋಲಾರ-ಆಂಧ್ರ ಪ್ರದೇಶ ನಡುವಿನ 6 ಪಥದ ರಸ್ತೆ ಕಾಮಗಾರಿಯ ವೀಕ್ಷಣೆ…

ಕೋಲಾರದ ಬಿಜೆಪಿ ಸಂಸದ ಎಸ್. ಮುನಿಸ್ವಾಮಿ ಕೋಲಾರ-ಆಂಧ್ರ ಪ್ರದೇಶ ನಡುವಿನ 6 ಪಥದ ರಸ್ತೆ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.ಎನ್‌ಹೆಚ್‌ಎಐನ ಯೋಜನಾ ನಿರ್ದೇಶಕ ಜಯಕುಮಾರ್ ಮತ್ತು ಇತರ ಅಧಿಕಾರಿಗಳು ಯೋಜನೆ ಬಗ್ಗೆ ಸಂಸದರಿಗೆ ವಿವರಣೆ ನೀಡಿದರು.ಆರು ಪಥದ ರಸ್ತೆ ನಿರ್ಮಾಣ ಸ್ಥಳವನ್ನು ವೀಕ್ಷಣೆ ಮಾಡಿದ ಸಂಸದರು ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದರು.ಆರು ಪಥದ ರಸ್ತೆ ಕಾಮಗಾರಿಯನ್ನು ಚುರುಕುಗೊಳಿಸಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.

Read More »

ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ……

ಕೋಲಾರ: ಪೊರಕೆಯಿಂದ ಥಳಿಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರಲಾದ ಘಟನೆ ಕೋಲಾರದಲ್ಲಿ‌ ಜರುಗಿದೆ. ಮಾಲೂರು ತಾಲೂಕಿನ ಹುರುಳಗೆರೆ ಗ್ರಾಮದಲ್ಲಿ ಘಟ‌ನೆ ನಡೆದಿದ್ದು, ಶ್ರೀನಿವಾಸ್ (30) ಎಂಬವರು ಸಾವನ್ನಪ್ಪಿದ್ದಾರೆ. ಗ್ರಾಮದ ನಿವಾಸಿಗಳಾದ ಅಶೋಕ್, ರಮೇಶ್, ಧರ್ಮೇಂದ್ರ ಹಾಗೂ ಮಂಜು ಎಂಬವರು ಬುಧವಾರ ಸಂಜೆ ಶ್ರೀನಿವಾಸ್‌ಗೆ ಮನಬಂದಂತೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಜಾತಿ ನಿಂದನೆಯನ್ನೂ ಮಾಡಿದ್ದಾರೆ. ಇದರಿಂದ ತೀವ್ರವಾಗಿ …

Read More »

ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್​ನ 22ನೇ ಶಾಖೆ ಉದ್ಘಾಟನೆ…

ಕೋಲಾರ: ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್​ನ 22ನೇ ಶಾಖೆ ಉದ್ಘಾಟನೆಗೊಂಡಿದೆ. ಸಂಸ್ಥೆಯ ಒಟ್ಟಾರೆ 109 ನೇ ಶಾಖೆ ಇದಾಗಿದೆ. ಕಂಪನಿ ಎಂಡಿ ಶೈಲಜಾ ಕಿರಣ್ ಅವರು ಈ ಶಾಖೆಯನ್ನು ವರ್ಚುಯಲ್​ ಆಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಹಕರು ಭಾಗವಹಿಸಿದ್ದರು. ನೂತನ ಶಾಖೆ ಉದ್ಘಾಟನೆ ಬಳಿಕ ಮಾತನಾಡಿದ ಮಾರ್ಗದರ್ಶಿ ಚಿಟ್ಸ್​ ನಿರ್ದೇಶಕರಾದ ಪಿ ಲಕ್ಷ್ಮಣ್​ರಾವ್​, ಕೋಲಾರ ಜನತೆಯ ಸಹಕಾರ ಅಮೂಲ್ಯವಾದದ್ದು ಎಂದು ಹೇಳಿದರು. ಜನತೆ ಮಾರ್ಗದರ್ಶಿ ಚಿಟ್ಸ್​ ಕಂಪನಿಯಿಂದ …

Read More »

ನೀಡಿದ ಸಾಲ ಕೇಳುಲು ಹೋದ ಬ್ಯಾಂಕ ಸಿಬ್ಬಂದಿ ಬೈಕ್‌ ಸುಟ್ಟ ಮಹಿಳೆಯರು.

ಕೋಲಾರ: ಸಾಲ ವಸೂಲಿಗೆ ತೆರಳಿದ್ದ ವೇಳೆ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಬೈಕ್‍ಗೆ ಬೆಂಕಿ ಹಚ್ಚಿದ ಘಟನೆ ಕೋಲಾರದಲ್ಲಿ ಗುರುವಾರ ನಡೆದಿದೆ. ಸ್ತ್ರೀಶಕ್ತಿ ಸಂಘದ ಸಾಲ ವಸೂಲಾತಿಗೆ ಡಿಸಿಸಿ ಬ್ಯಾಂಕ್ (DCC Bank) ಸಿಬ್ಬಂದಿ ಕೋಲಾರದ ಮುಳಬಾಗಿಲಿನ (Mulabagilu) ಬಿಸ್ನಹಳ್ಳಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದಾರೆ. ಅಲ್ಲದೇ ಅಲ್ಲಿದ್ದ ಬೈಕ್‍ಗೆ ಬೆಂಕಿ ಹಚ್ಚಿ ಸಿಬ್ಬಂದಿ ಮತ್ತೆ ಬಂದರೆ ಅವರ ಬೈಕ್‍ಗೂ ಇದೇ ಗತಿ …

Read More »

ವಂಚನೆ ಪ್ರಕರಣ : ಮಾಜಿ ಕಾರ್ಪೊರೇಟರ್ ದೇವದಾಸ್ ಬಂಧನ

ಕೋಲಾರ: ವಂಚನೆ ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ಬಿಟಿಎಂ ಲೇಔಟ್ ಮಾಜಿ ಕಾರ್ಪೊರೇಟರ್​ ಅನ್ನು ಬಂಧಿಸಲಾಗಿದೆ.ಮದನಪಲ್ಲಿ ಪೊಲೀಸರು ಮಾಜಿ ಕಾರ್ಪೊರೇಟರ್ ದೇವದಾಸ್ ಅವನ್ನು ಬಂಧಿಸಲಾಗಿದೆ. ಸರ್ಕಾರಿ ಜಮೀನನ್ನು ನಿಮ್ಮ ಹೆಸರಿಗೆ ಮಾಡಿಸಿಕೊಡುತ್ತೇನೆ ಎಂದು ಮದನಪಲ್ಲಿ ಶಾಸಕ ಮಹಮದ್ ನವಾಜ್ ಬಾಷರಿಂದ ಹಣ ಪಡೆದಿದ್ದ ದೇವದಾಸ್ ಅವರ ವಿರುದ್ಧ ಕೇಸ್​ ದಾಖಲಾಗಿದೆ. ಒಂದು ಕೋಟಿ ರೂಪಾಯಿ ಹಣ ಪಡೆದಿರುವ ಆರೋಪ ಎದುರಿಸುತ್ತಿರುವ ದೇವದಾಸ್, ಹಣ ಪಡೆದ ಬಳಿಕ ಯಾವುದೇ ಜಮೀನು ಕೊಡಿಸಿರಲಿಲ್ಲ. ಹೀಗಾಗಿ …

Read More »

ಕಾಂಗ್ರೆಸ್‌ ಪಕ್ಷಕ್ಕೆ ಹೋಗುವ ಅನಿವಾರ್ಯತೆ ಇಲ್ಲ

ಕೋಲಾರ: ‘ಕಾಂಗ್ರೆಸ್‌ ಬಿಟ್ಟು ಬಂದ ನಮಗೆ ಮತ್ತೆ ಆ ಪಕ್ಷಕ್ಕೆ ಹೋಗುವ ಅನಿವಾರ್ಯತೆ ಇಲ್ಲ, ಬಿಜೆಪಿ ನಮ್ಮನ್ನು ಗೌರವಯುತವಾಗಿ ನಡೆಸಿಕೊಂಡಿದೆ’ ಎಂದು ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಮುನಿರತ್ನ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ‘ಒಂದು ವೇಳೆ ಕಾಂಗ್ರೆಸ್‌ ಬಿಟ್ಟು ಬಂದವರ ಪೈಕಿ ಕನಿಷ್ಠ ಒಬ್ಬರೂ ಕಾಂಗ್ರೆಸ್‌ಗೆ ವಾಪಸ್‌ ಹೋದರೆ ಸಿದ್ದರಾಮಯ್ಯ ಅವರು ಆ ಪಕ್ಷದಲ್ಲಿ ಇರುವುದಿಲ್ಲ.ಏಕೆಂದರೆ ಸಿದ್ದರಾಮಯ್ಯರು ಕೊಟ್ಟ ಮಾತಿನಂತೆ ನಡೆದುಕೊಳ್ಳುವವರು. ನಾವು ಏನಾದರೂ ಕಾಂಗ್ರೆಸ್‌ಗೆ ವಾಪಸ್‌ ಹೋದರೆ …

Read More »

ಶಾಲೆಯಲ್ಲಿ ನಮಾಜ್ :ಶಿಕ್ಷಕಿ ಅಮಾನತು

ಕೋಲಾರ : ಸರ್ಕಾರಿ ಶಾಲೆ ಕೊಠಡಿಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿ ಉಮಾದೇವಿ ಅವರನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜೇಶ್ವರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಲು ಪಟ್ಟಣದ ಬಳೆ ಚಂಗಪ್ಪ ಸರ್ಕಾರಿ ಶಾಲೆ ಕೊಠಡಿಯಲ್ಲಿ ಜನವರಿ 21 ರಂದು ವಿದ್ಯಾರ್ಥಿಗಳು ನಮಾಜ್ ಮಾಡಿದ್ದರು. ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ …

Read More »

ಕರ್ತವ್ಯನಿರತ ಸಿಆರ್​ಪಿಎಫ್ ಯೋಧ ಸಾವು

ಕೋಲಾರ: ಹೃದಯಾಘಾತದಿಂದ ಕರ್ತವ್ಯನಿರತ ಸಿಆರ್​ಪಿಎಫ್(CRPF)​ ಯೋಧ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿಯ ಯೋಧ  ಸುರೇಶ್(45) ಮೃತಪಟ್ಟಿದ್ದಾರೆ. ನಿನ್ನೆ ಸಂಜೆ (ಜನವರಿ, 07) ಜಾರ್ಖಂಡ್​ನ ಮಿಲಿಟರಿ ಕ್ಯಾಂಪ್​ನಲ್ಲಿ ತರಬೇತಿ ನೀಡುವಾಗ ಹೃದಯಾಘಾತದಿಂದ  ಸಾವನ್ನಪ್ಪಿದ್ದಾರೆ.

Read More »