BigTv News
April 20, 2025
Breaking News, Crime, ಚಿತ್ರದುರ್ಗ
ಚಿತ್ರದುರ್ಗದ ಕೆಳಗಳಹಟ್ಟಿ ಗ್ರಾಮದ ಓಬಣ್ಣ ಹಾಗೂ ದೀಪಾ ಎಂಬ ದಂಪತಿಯ ಪುತ್ರ ಈ ಅನಾಹುತದಲ್ಲಿ ಬಲಿಯಾಗಿದ್ದಾನೆ. ದೀಪಾ ತನ್ನ ಪುತ್ರನೊಂದಿಗೆ ತವರಿಗೆ ಬಂದಿದ್ದರು.ಈ ವೇಳೆ ದೀಪಾ ಅವರು ತನ್ನ ತಂದೆ ಮಾರಣ್ಣ ಜೊತೆ ಮಗನನ್ನು ಹೊಲಕ್ಕೆ ಟ್ರ್ಯಾಕ್ಟರ್ನಲ್ಲಿ ಕರೆದುಕೊಂಡು ಹೋಗಿದ್ದರು. ತಾತನೊಂದಿಗೆ ಕುಳಿತಿದ್ದ ಬಾಲಕ ಮಾರ್ಗಮಧ್ಯೆ ಆಯತಪ್ಪಿ ಬಿದ್ದು ಟ್ರ್ಯಾಕ್ಟರ್ನ ರೂಟರ್ ಯಂತ್ರಕ್ಕೆ ಸಿಲುಕಿದಾಗ ದೇಹ ತುಂಡಾಗಿದೆ. ಗುಡೇಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
April 10, 2025
Breaking News, ಚಿತ್ರದುರ್ಗ
ಕಾರು ಮತ್ತು ದ್ವಿಚಕ್ರ ವಾಹನ ಸಾವರ ಚಿತ್ರದುರ್ಗಕೆಕ ಹೋಗುತ್ತಿದ್ದು, ಕಾರಿನ ಚಾಲಕನು ಓವರ್ಟೇಕ್ ಮಾಡುವಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಾನಾಹೊಸಹಳ್ಳಿ ಪಿಎಸ್ಐ ಸಿದ್ದರಾಂ ಬಿದ್ರಾಣಿ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಕಾರಿನ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
March 30, 2025
Breaking News, Crime, ಚಿತ್ರದುರ್ಗ
ಚಿತ್ರದುರ್ಗ ನಗರದ ರಾಮದಾಸ್ ಕಾಂಪೌಡ್ ವಾಸಿಯಾದ ಜುಲ್ಮೀಕರ್ 2015 ರಲ್ಲಿ ಬೆಂಗಳೂರಿನ ಪ್ರಾದೇಶಿಕ ಪಾಸ್ ಪೋರ್ಟ ಕಛೇರಿಗೆ ಇ.ಸಿ.ಎನ್.ಆರ್ ಪಾಸ್ ಪೋರ್ಟ ಪಡೆಯುವ ಸಲುವಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ್ದರು ನಕಲಿ ಅಂಕಪಟ್ಟಿಯನ್ನು ಸೃಷ್ಟಿಸಿ ಅರ್ಜಿಯ ಜೊತೆ ಸಲ್ಲಿಸಿದ್ದನು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್ ಪೋರ್ಟ್ ಪಡೆಯಲು ಪ್ರಯತ್ನಿಸಿದ ಆರೋಪಿಗೆ ಚಿತ್ರದುರ್ಗ ಪ್ರಧಾನ ಹಿರಿಯ ಸಿವಿಲ್ ಜಡ್ಜ್ ಮತ್ತು ಸಿ.ಜೆ.ಎಂ. ನ್ಯಾಯಾಲಯ ಒಂದು ವರ್ಷ ಸಾದಾ ಶಿಕ್ಷೆ ಮತ್ತು 8500 ದಂಡ …
Read More »
BigTv News
March 23, 2025
Breaking News, Crime, ಚಿತ್ರದುರ್ಗ
ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಿರಿಯೂರು ಸಮೀಪದ ರಾಷ್ಟ್ರೀಯ ಹೆದ್ದಾರಿ ಕೆಳಗಿನ ಸರ್ವಿಸ್ ರಸ್ತೆ ವೃತ್ತದಲ್ಲಿ ಇಂದು ಸಂಭವಿಸಿದೆ. ಇದರಲ್ಲಿ ನಬೀಲ್ ಎಂಬಾತ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಚಿತ್ರದುರ್ಗದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
March 23, 2025
Breaking News, ಚಿತ್ರದುರ್ಗ
ಬಸ್ ಬೈಕ್ಗೆ ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, KSRTC ಬಸ್ ಬೈಕ್ಗೆ ಡಿಕ್ಕಿಯಾದ ಪರಿಣಾಮ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲಿಸಿದ್ದಾರೆ. ಮೃತದೇಹಗಳನ್ನು ಪೋಸ್ಟ್ ಮಾರ್ಟಮ್ ಗೆ ಕಳುಹಿಸಲಾಗಿದೆ.
Read More »
BigTv News
March 10, 2025
News, ಚಿತ್ರದುರ್ಗ
ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಬಳಿಯ ಜಮೀನಿನಲ್ಲಿ ಶುಕ್ರವಾರ ಘಟನೆ ಸಂಭವಿಸಿದೆ. ತಾಲೂಕಿನ ಬಿಸನಹಳ್ಳಿಯ ಲಂಬಾಣಿ ಹಟ್ಟಿಯ ಡಾಕ್ಟರ್ ಜಯರಾಮ ನಾಯಕ್ ಎಂಬುವರು ತೋಟದಲ್ಲಿನ ಕೃಷಿಹೊಂಡದ ಬಳಿ ಓಡಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರುವ ದುರ್ಘಟನೆ ನಡೆದಿದೆ. ವೈದ್ಯಕೀಯ ಸೇವೆಯ ಮೂಲಕ ಗ್ರಾಮಕ್ಕೆ ಚಿರಪರಿಚಿತರಾದ ಇವರು ಬಡ ರೋಗಿಗಳಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಆದರೆ ವಿಧಿ ಆಟವೇ ಬೇರೆ ಇತ್ತು. ಕಾಲೇಜು ಹೊಂಡಕ್ಕೆ ಬಿದ್ದು …
Read More »
BigTv News
August 17, 2024
Breaking News, ಚಿತ್ರದುರ್ಗ
ಚಿತ್ರದುರ್ಗ: ಸಿಡಿಲು ಬಡಿದು ಬರೋಬ್ಬರಿ 106 ಕುರಿಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದ ಬಳಿ ನಿನ್ನೆ(ಶುಕ್ರವಾರ) ನಡೆದಿದೆ. ಕುರಿಗಳ ಮಾರಣಹೋಮದಿಂದ ಕುರಿಗಾಹಿಗಳು ಲಕ್ಷಾಂತರ ರೂ. ನಷ್ಟಕ್ಕೆ ಸಿಲುಕಿದ್ದಾರೆ. ಕಳೆದ ರಾತ್ರಿ ಜಾಜೂರು ಭಾಗದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದು 106 ಕುರಿಗಳು ಸಾವನ್ನಪ್ಪಿವೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »
BigTv News
January 2, 2024
ಕರ್ನಾಟಕ, ಚಿತ್ರದುರ್ಗ, ಸುದ್ದಿ
ಚಿತ್ರದುರ್ಗ: ಶಾಲಾ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಮಲ್ಲಪ್ಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಸ್ಪಲ್ಟಿಯಾಗಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡೊದ್ದಾರೆ. ಇನ್ನು ಗಾಯಾಳು ವಿದ್ಯಾರ್ಥಿಗಳನ್ನು ಹೊಸದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಈ ಪ್ರಕರಣ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ …
Read More »
BigTv News
December 2, 2022
Breaking News, ಚಿತ್ರದುರ್ಗ
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳು ಜೈಲು ಸೇರಿರುವ ಘಟನೆ ಬೆನ್ನಲ್ಲೇ ಮುರುಘಾ ಮಠದ ಹಾಸ್ಟೆಲ್ ನಲ್ಲಿದ್ದ 22 ಮಕ್ಕಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ರದುರ್ಗದ ಮುರುಘಾ ಮಠದ ಹಾಸ್ಟೆಲ್ ನಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. 22 ಮಕ್ಕಳಲ್ಲಿ 14 ಹೆಣ್ಣು ಮಕ್ಕಳು ಹಾಗು 8 ಗಂಡು ಮಕ್ಕಳಾಗಿದ್ದಾರೆ. 22 ಅನಾಥ ಮಕ್ಕಳು ಮಠಕ್ಕೆ ಸಿಕ್ಕಿದ್ದಾದರೂ ಹೇಗೆ ? ಅನಾಥ ಮಕ್ಕಳನ್ನು ಸಾಕಲು ಮಠ …
Read More »
BigTv News
November 23, 2022
Breaking News, ಚಿತ್ರದುರ್ಗ
ಚಿತ್ರದುರ್ಗ : ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗದಲ್ಲಿ ಹೇಳಿದರು. ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಹಿಂದುಗಳನ್ನು ಭಯೋತ್ಪಾದಕರು ಟಾರ್ಗೆಟ್ ಮಾಡಿದ್ದಾರೆ. ಹಾಗಾಗಿ ಈ ಕುಕ್ಕರ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ,’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈಗಾಗಲೇ ಕರ್ನಾಟಕ ಪೋಲಿಸ್ 18 ಸ್ಲಿಪರ್ ಸೇಲ್ ಹಿಡಿದು ತಿಹಾರ್ …
Read More »