Breaking News

ತುಮಕೂರು

ಕಾಂಗ್ರೆಸ್ ಅವಧಿಯಲ್ಲಿ ಅತೀ ಹೆಚ್ಚು ಬಾರಿ ಸಂವಿಧಾನ ತಿದ್ದುಪಡಿ: ಸಂಸದ ಗೋವಿಂದ ಕಾರಜೋಳ ಆರೋಪ

ತುಮಕೂರು: ದೇಶಕ್ಕೆ ಸಂವಿಧಾನ ಅರ್ಪಣೆ ಮಾಡಿ 75 ವರ್ಷವಾಯಿತು. ಈ ಅವಧಿಯಲ್ಲಿ ಅತಿ ಹೆಚ್ಚು ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ‌ ಆರೋಪಿಸಿದರು. ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಸಂಸ್ಥೆಯಿಂದ ಸೋಮವಾರ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಸನ್ಮಾನ ಹಾಗೂ ‘ಸಂವಿಧಾನ ಬದಲಾಯಿಸಿದ್ದು ಯಾರು’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್‌ನವರು ತಮ್ಮ ಸ್ವಾರ್ಥಕ್ಕಾಗಿ, ನೆಹರೂ ಮನೆತನದ …

Read More »

ಶೀಘ್ರವೇ 2.50 ಲಕ್ಷ ಹುದ್ದೆಗಳ ಭರ್ತಿ: ಸಚಿವ ಡಾ.ಜಿ.ಪರಮೇಶ್ವರ್

ತುಮಕೂರು: 76ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣ ನೆರವೇರಿಸಿದ ಮಾನ್ಯ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಸುದ್ದಿಗೋಷ್ಠಿಯನ್ನು ನಡೆಸಿದರು. ಸಮಾಜದ ಅಂಕು-ಡೊಂಕುಗಳನ್ನು, ನ್ಯೂನತೆಗಳನ್ನು ಸರಿ ಮಾಡುವ ಮಾಧ್ಯಮದವರ ಪಾತ್ರ ಅಪಾರವಾದುದು. ತುಮಕೂರಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗಿದೆ. ಜಿಲ್ಲಾಡಳಿತ, ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಗಳು. ರಾಜ್ಯದಲ್ಲಿ ತುಮಕೂರು ಪ್ರತಿಷ್ಟಿತವಾದ ಜಿಲ್ಲೆಯಾಗಿದೆ. ಬೆಳಗಾವಿ, ಕಲಬುರಗಿ ನಂತರ …

Read More »

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವಾರ್ಷಿಕ ₹3 ಸಾವಿರ ಕೋಟಿ: ಜಿ.ಚಂದ್ರಶೇಖರ್ ಗೌಡ

ತುಮಕೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವಾರ್ಷಿಕ ಸುಮಾರು ₹3 ಸಾವಿರ ಕೋಟಿ ಅನುದಾನ ಅಗತ್ಯವಿದೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಚಂದ್ರಶೇಖರ್‌ಗೌಡ ಹೇಳಿದರು. ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಪ್ರಗತಿ ಪರಿಶೀಲನೆ ನಡೆಸಿದರು. ಗೃಹಲಕ್ಷ್ಮಿ ಯೋಜನೆಯಲ್ಲಿ ಹಣ ಪಾವತಿಯಾಗುತ್ತಿಲ್ಲ ಎಂದು ಕೆಲವರು ದೂರು ನೀಡುತ್ತಿದ್ದಾರೆ. ಯಾವ ಕಾರಣಕ್ಕೆ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿಲ್ಲ …

Read More »

ವಾಣಿವಿಲಾಸ ಜಲಾಶಯಕ್ಕೆ ಜ.18 ರಂದು ಬಾಗಿನ ಅರ್ಪಣೆ: ಅಧಿಕಾರಿಗಳೊಂದಿಗೆ ಸಭೆ

ಹಿರಿಯೂರು: ತಾಲ್ಲೂಕಿನ ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಲು ಜ. 18ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಸಿದ್ಧತೆಗಾಗಿ ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. 120 ವರ್ಷಗಳಲ್ಲಿ ಮೂರನೇ ಬಾರಿ ಜಲಾಶಯ ಕೋಡಿ ಬಿದ್ದಿದೆ. 1933 ಮತ್ತು 2022ರಲ್ಲಿ ವರುಣನ ಕೃಪೆಯಿಂದ ಕೋಡಿ ಬಿದ್ದಿದ್ದರೆ, ಈ ಬಾರಿ ನಮ್ಮ ಪಾಲಿನ ನೀರನ್ನು ಜ. 31ರವರೆಗೆ …

Read More »

ಭದ್ರಾ ಮೇಲ್ದಂಡೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ: ಕೇಂದ್ರ ಸಚಿವ ಸೋಮಣ್ಣ

ತುಮಕೂರು: ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಿಗೆ ನೀರು ಒದಗಿಸುವ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಕಾಲುವೆ ನಿರ್ಮಾಣಕ್ಕಾಗಿ ಅರಣ್ಯ ಭೂಮಿ ಬಳಕೆ ಮಾಡಿಕೊಳ್ಳಲು ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯಡಿ ತುಮಕೂರು ಜಿಲ್ಲೆಯಲ್ಲಿ ಕಾಲುವೆ ನಿರ್ಮಾಣಕ್ಕಾಗಿ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ ಬಳಿ …

Read More »

ದಿನದಿಂದ ದಿನಕ್ಕೆ ತೆಂಗಿನಕಾಯಿ ಬೇಡಿಕೆ ಹೆಚ್ಚಳ: ಗಗನಕ್ಕೇರಿದ ಧಾರಣೆ

ತುಮಕೂರು: ದಿನದಿಂದ ದಿನಕ್ಕೆ ತೆಂಗಿನಕಾಯಿಗೆ ಬೇಡಿಕೆ ಹೆಚ್ಚುತ್ತಿದ್ದು, ರೈತರಿಗೆ ಉತ್ತಮ ಬೆಲೆ ಸಿಗುತ್ತಿದೆ. ಮುಂದಿನ ಬೇಸಿಗೆ ಹೊತ್ತಿಗೆ ದರ ಮತ್ತಷ್ಟು ದುಬಾರಿಯಾಗಲಿದೆ ಎಂದು ವರ್ತಕರು ಹೇಳುತ್ತಾರೆ. ತೆಂಗಿನಕಾಯಿಗಳ ಗಾತ್ರಕ್ಕೆ ಅನುಗುಣವಾಗಿ ಮಾರುಕಟ್ಟೆಯಲ್ಲಿ ಬೆಲೆ ನಿಗದಿಯಾಗುತ್ತಿದೆ. ಸಣ್ಣ ಗಾತ್ರದ ಕಾಯಿ ₹20-₹22ಕ್ಕೆ ಮಾರಾಟವಾಗುತ್ತಿದ್ದರೆ, ಮಧ್ಯಮ ಗಾತ್ರ ₹25, ದೊಡ್ಡ ಗಾತ್ರದ ಕಾಯಿಗೆ ₹30ರ ವರೆಗೂ ಬೆಲೆ ಸಿಗುತ್ತಿದೆ. ಸಂತೆಗಳಲ್ಲಿ ಕೆ.ಜಿ ಲೆಕ್ಕದಲ್ಲೂ ಖರೀದಿಸುತ್ತಿದ್ದು, ಕೆ.ಜಿ ₹57-₹60ರ ವರೆಗೂ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2.24 …

Read More »

ಶಿರಾದಲ್ಲೂ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ: ಸಚಿವ ಕೆ.ಜೆ.ಜಾರ್ಜ್‌

ಶಿರಾ: ತಾಲ್ಲೂಕಿನ ಗೌಡಗೆರೆ ‌ಹೋಬಳಿಯ ಚೆಂಗಾವರ, ಹುಲಿಕುಂಟೆ ಹೋಬಳಿಯ ಚಿಕ್ಕಬಾಣಗೆರೆ ಗ್ರಾಮದ ಬಳಿ ಸೋಲಾರ್ ಘಟಕ ನಿರ್ಮಿಸಿದ್ದು, ಎರಡೂ ಕಡೆಯಿಂದ ಒಟ್ಟು 8.9 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಸೋಲಾರ್ ಘಟಕ ನಿರ್ಮಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ, ‘ಉತ್ಪಾದಿಸಿದ ವಿದ್ಯುತ್‌ಅನ್ನು ಸ್ಥಳೀಯವಾಗಿ ಕೃಷಿ ಪಂಪ್‌ಸೆಟ್‌ಗಳಿಗೆ ಸರಬರಾಜು ಮಾಡಲಾಗುತ್ತಿದೆ. ಪಿಎಂ- ಕುಸುಮ್ ಯೋಜನೆಯಲ್ಲಿ ಸೋಲಾರ್ ಘಟಕ ನಿರ್ಮಿಸಿ ವಿದ್ಯುತ್ ಉತ್ಪಾದನೆ …

Read More »

ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನಲ್ಲೂ ಸೋಲಾರ್ ಪಾರ್ಕ್ ನಿರ್ಮಾಣ: ಇಂಧನ ಸಚಿವ ಕೆ.ಜೆ.ಜಾರ್ಜ್

ಶಿರಾ: ರೈತರ ಪಂಪ್ ಸೆಟ್ ಗಳಿಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಪ್ರತಿ ಜಿಲ್ಲೆಯ, ಪ್ರತಿ ತಾಲೂಕಿನಲ್ಲಿ ಎಲ್ಲೆಲ್ಲಿ ಅವಶ್ಯಕತೆ ಇದೆ ಅಲ್ಲಿ ಸೋಲಾರ್‌ಪಾರ್ಕ್ ನಿರ್ಮಾಣ ಮಾಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಅವರು ಸೋಮವಾರ ತಾಲೂಕಿನ ಚಂಗಾವರ ಮತ್ತು ಚಿಕ್ಕಬಾಣಗೆರೆ ಗ್ರಾಮದ ಬಳಿ ಪಿಎಂ ಕುಸುಮ್ ಯೋಜನೆಯಡಿ ನಿರ್ಮಾಣ ಮಾಡಲಾಗಿರುವ ಸೋಲಾರ್‌ ಪಾರ್ಕ್ ವೀಕ್ಷಣೆ ಮಾಡಿ ರೈತರು ಮತ್ತು ಅಧಿಕಾರಿಗಳ ಜೊತೆ ಸಂವಾದ …

Read More »

ರಾಜ್ಯದಲ್ಲಿ ಕುಸುಮ್ ಬಿ ಯೋಜನೆಯಡಿ ಪಂಪ್‌ಸೆಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್: ಸಚಿವ ಕೆ.ಜೆ.ಜಾರ್ಜ್‌

ತುಮಕೂರು: ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡುವ ಕುಸುಮ್- ಸಿ ಯೋಜನೆಯ ಮೊದಲ ಹಂತದಲ್ಲಿ ಮಾರ್ಚ್ 15ರೊಳಗೆ 1,300 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕುಸುಮ್-ಸಿ ಯೋಜನೆಯಡಿ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಾಂಗವರ ಬಳಿ ಮತ್ತು ಚಿಕ್ಕಬಾಣಗೆರೆ ಬಳಿ ನಿರ್ಮಿಸಿರುವ ಸೋಲಾರ್ ಪಾರ್ಕ್ ಗಳು ಹಾಗೂ ಚಿತ್ರದುರ್ಗ …

Read More »

ರಾಜ್ಯದ 10 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮಗ್ರ ಮೂಲಭೂತ ಅಭಿವೃದ್ದಿಗಾಗಿ 200 ಕೋಟಿ ರೂ. ಬಿಡುಗಡೆ: ಸಚಿವ ಪರಮೇಶ್ವರ್

ತುಮಕೂರು: ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ 200 ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, …

Read More »

You cannot copy content of this page