ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ ಆಡಿರುವ ಒಂದು ಮಾತು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಬ್ರಾಹ್ಮಣ ಸಮುದಾಯದ ಕುರಿತು ಹಂಸಲೇಖ ಅವರ ಆ ಒಂದು ಮಾತಿಗೆ ಹಲವು ಆಕ್ಷೇಪ ವ್ಯಕ್ತಪಡಿಸಿ ತಮ್ಮ ಬೇಸರವನ್ನು ಹೊರ ಹಾಕುತ್ತಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹಂಸಲೇಖ ಅವರ ವಿಡಿಯೋ ವೈರಲ್ ಆಗಿದ್ದು, ಇದರಲ್ಲಿ ಅವರು ಕನ್ನಡದ ಪ್ರಾದೇಶಿಕ ಪಕ್ಷ ಕಟ್ಟುವುದು ಅಷ್ಟು ಸುಲಭದ ಕೆಲಸವಲ್ಲ. ದೇಶದ ಪ್ರತಿ ಬ್ರಾಹ್ಮಣನ ಮನೆಯಲ್ಲೂ ಭಗವದ್ಗೀತೆ ಜೊತೆಗೆ ಆರ್ ಎಸ್ ಎಸ್ ನ ಚಿಂತನ ಗಂಗಾ ಪುಸ್ತಕ ಇರುತ್ತೆ. 40 ವರ್ಷದ ಹಿಂದೆ ನಾನು ಚಿಂತನ ಗಂಗಾ ಪುಸ್ತಕ ದ್ದೆ, ಅದು ಆರ್ ಎಸ್ ಎಸ್ ಅವರ ಸಂವಿಧಾನ. ಆ ಪುಸ್ತಕ ಎಷ್ಟು ಕೆಲಸ ಮಾಡುತ್ತೆ ಎಂದರೇ, ರಾಷ್ಟ್ರದಲ್ಲಿ ನಡೆಯುತ್ತಿರುವ ಸಂಗತಿಗಳಿಗೆ ವಿರುದ್ಧದವಾದ ಪ್ರತಿದಾಳಿ ಹೇಗೆ ಮಾಡಬೇಕು ಅಂತ ಆ ಚಿಂತನಾ ಗಂಗಾ ಮೂಲಕ ಮೆಸೇಜ್ ಕಳುಹಿಸುತ್ತಾರೆ, ಅದು ಬೇರೆ ವಿಚಾರ ಬಿಡಿ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

