Breaking News

ಆಂಧ್ರ ತೆಲಂಗಾಣದಲ್ಲಿ ಪ್ರವಾಹ: ಸಂತ್ರಸ್ತರ ನೆರವಿಗಾಗಿ ದೇಣಿಗೆ ನೀಡಿದ ಮೆಗಾಸ್ಟಾರ್ ಚಿರಂಜೀವಿ

ಹೈದರಾಬಾದ್: ಉಭಯ ತೆಲುಗು ರಾಜ್ಯಗಳಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಮೆಗಾಸ್ಟಾರ್ ಚಿರಂಜೀವಿ ಮತ್ತೊಮ್ಮೆ ತಮ್ಮ ಸಹಾನುಭೂತಿ ವ್ಯಕ್ತಪಡಿಸಿದ್ದು ಎರಡೂ ರಾಜ್ಯಗಳಿಗೆ 1ಕೋಟಿ ರೂಪಾಯಿ ನೆರವು ಘೋಷಿಸಿದ್ದಾರೆ.
ಕೇರಳದ ವಯನಾಡ್ ಭೂಕುಸಿತದ ಹಿನ್ನೆಲೆಯಲ್ಲಿ ಹೆಚ್ಚು ನೆರವು ನೀಡಿದ್ದ ಟಾಲಿವುಡ್ ಮಂದಿ ಈಗ ತಮ್ಮದೇ ನೆಲದಲ್ಲಿ ಜಲತಾಂಡವವಾಡುತ್ತಿದ್ದು, ಜನ ಜಾನುವಾರು ಪ್ರಾಣ ಕಳೆದುಕೊಂಡಿದ್ದು, ಸಂತ್ರಸ್ತರಿಗೆ ಸಹಾಯ ಮಾಡಲು ಮುಂದೆ ಬಂದು ದೇಣಿಗೆಯನ್ನು ಘೋಷಿಸುತ್ತಿದ್ದಾರೆ. ವಯನಾಡ್​ ಸಂತ್ರಸ್ತರ ನೆರವಿಗೆ 1 ಕೋಟಿ ನೆರವು ನೀಡಿದ್ದ ಚಿರಂಜೀವಿ ಆಂಧ್ರ, ತೆಲಂಗಾಣ ಸಂತ್ರಸ್ತರ ನೆರವಿಗಾಗಿ 1 ಕೋಟಿ ರೂ. ಕೊಟ್ಟಿದ್ದಾರೆ.
ಈ ಸಂದರ್ಭದಲ್ಲಿ ಚಿರಂಜೀವಿ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಹತ್ತಾರು ಅಮಾಯಕರು ಬಲಿಯಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ತೆಲುಗು ರಾಜ್ಯಗಳ ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಎರಡೂ ಸರ್ಕಾರಗಳು ಪರಿಸ್ಥಿತಿಯನ್ನು ಸುಧಾರಿಸಲು ಶ್ರಮಿಸುತ್ತಿವೆ. ನಾವೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಈ ಪ್ರಕ್ರಿಯೆಯ ಭಾಗವಾಗಿ, ಎರಡೂ ರಾಜ್ಯಗಳ ಜನರ ಪರಿಹಾರಕ್ಕೆ ಸಹಾಯ ಮಾಡಲು ನಾನು ಒಂದು ಕೋಟಿ ರೂಪಾಯಿಗಳನ್ನು ನೀಡುತ್ತೇನೆ ಎಂದು ಘೋಷಿಸಿದ್ದಾರೆ.ಈ ಭೀಕರ ಪರಿಸ್ಥಿತಿಗಳು ಶೀಘ್ರದಲ್ಲೇ ಕೊನೆಗೊಳ್ಳಲಿ ಮತ್ತು ಎಲ್ಲಾ ಜನರು ಸುರಕ್ಷಿತವಾಗಿರಲಿ ಎಂದು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಘೋಷಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *