ಬೆಂಗಳೂರು: ಸುಮಾರು ಮೂರು ರಾಜ್ಯಗಳಲ್ಲಿ ಅವಾಂತರಗಳ ಸೃಷ್ಟಿಗೆ ಕಾರಣವಾದ ಬಂಗಾಳಕೊಲ್ಲಿಯಲ್ಲಿನ ಆಸ್ನಾ ಚಂಡಮಾರುತದ ತೀವ್ರತೆ ಮುಂದಿನ 48 ಗಂಟೆಗಳವರೆಗೂ ಮುಂದುವರೆಯಲಿದೆ. ಸಮುದ್ರ ಮಟ್ಟದಿಂದ 7.6 ಕಿಮೀ ವರೆಗೆ ವಿಸ್ತರಣೆ ಆಗಿದ್ದು ಇದರ ಪ್ರಭಾವದಿಂದ ಕರ್ನಾಟಕ ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಾಯುಭಾರ ಕುಸಿತು ಪರಿಣಾಮ ಕರ್ನಾಟಕದಲ್ಲಿ ಮುಂದಿನ ಮೂರು ದಿನ ಜೋರು ಮಳೆ ಆಗಲಿದೆ ಒಟ್ಟು ಐದು ದಿನ ಕರಾವಳಿಯ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆನಾಳೆ ಶನಿವಾರ ಸೆಪ್ಟಂಬರ್ 07ರಿಂದ ಮೂರು ದಿನ ಒಳನಾಡಿನಲ್ಲಿ ಮಳೆ ಆರ್ಭಟಿಸಲಿದೆ. ಬೆಳಗಾವಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಎರಡು ದಿನ ಹಾಗೂ ತುಮಕೂರು, ಕಲಬುಗರಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಒಂದು ದಿನ ಜೋರು ಮಳೆ ಆಗಲಿದೆ. ಇದರಿಂದಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

