ಧಾರವಾಡ : ಧಾರವಾಡದಲ್ಲಿ ಕಾಡಿನಿಂದ ನಾಡಿಗೆ ಆಗಾಗ ಕಾಡು ಪ್ರಾಣಿಗಳು ಬಂದು ಜನರಲ್ಲಿ ಆತಂಕ ಮೂಡಿಸುತ್ತವೆ ಇದೀಗ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಚಿರತೆ ಒಂದು ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಹಜವಾಗಿ ಜನರಲ್ಲಿ ಆತಂಕ ಮೂಡಿಸಿದೆ.
ಹೌದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕರ್ನಾಟಕ ವಿಶ್ವವಿದ್ಯಾಲಯ ಬಳಿಯ ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆಯು, ನಂತರ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕ್ಯಾಂಪಸ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆ ತೆರಳುತ್ತಿರುವ ದೃಶ್ಯ ಇದೀಗ ಸೆರೆಯಾಗಿದೆ. ಇದರಿಂದ ಸಹಜವಾಗಿ ಧಾರವಾಡದ ಜನತೆಗೆ ಆತಂಕ ಹೆಚ್ಚಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

