Breaking News

ವಿಶ್ವ ಪ್ರಜಾಪ್ರಭುತ್ವ ದಿನ: ಜಿಲ್ಲೆಯಲ್ಲಿ ಮಾನವ ಸರಪಳಿ ನಿರ್ಮಾಣ

ಬೆಳಗಾವಿ: ಸೆ.15ರಂದು ಆಚರಿಸಲಾಗುವ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ 135 ಕಿ.ಮೀ ಉದ್ದದಷ್ಟು ಮಾನವ ಸರಪಣಿ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರಿನಿಂದ ಚಾಮರಾಜನಗರ ವರೆಗೆ 2,500 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರಜಾಪ್ರಭುತ್ವ ಮಹತ್ವ ಸಾರಲು ಇದನ್ನು ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲೆಯ ಎಲ್ಲ ಶಾಲೆ ಕಾಲೇಜು ಮಕ್ಕಳು, ಗ್ರಾಮ ಪಂಚಾಯಿತಿ ಸದಸ್ಯರು, ಇಲಾಖೆಗಳ ಸಿಬ್ಬಂದಿ, ಕಲಾವಿದರು ಸೇರಿದಂತೆ ಎಲ್ಲರನ್ನೂ ಸೇರಿಸಬೇಕು. ಅಂದು ಬೆಳಿಗ್ಗೆ 8.30ರಿಂದ 9.30ರವರೆಗೆ ಒಂದು ತಾಸು ಮಾತ್ರ ಇದನ್ನು ನಡೆಸಲಾಗುವುದು ಎಂದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *