Breaking News

ಬಸ್ ಹಾಗೂ ಟೆಂಪೋ ನಡುವೆ ಭೀಕರ ರಸ್ತೆ ಅಪಘಾತ: 17 ಮಂದಿ ಸಾವು

ಲಖನೌ: ಧಾರ್ಮಿಕ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ಬಸ್​ ಹಾಗೂ ಟೆಂಪೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17 ಮಂದಿ ಮೃತಪಟ್ಟು, 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಹತ್ರಾಸ್​ನ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ನಡೆದಿದೆ.
ಈ ಕುರಿತು ಮಾತನಾಡಿರುವ ಅಲಿಘರ್ ಇನ್ಸ್‌ಪೆಕ್ಟರ್ ಜನರಲ್ ಶಲಭ್ ಮಾಥುರ್, ಶುಕ್ರವಾರ ಸಂಜೆ 6:45ರ ಸುಮಾರಿಗೆ ಅಪಘಾತ ಸಂಭಭವಿಸಿದ್ದು, ಸಾರಿಗೆ ನಿಗಮದ ಬಸ್​ ಓವರ್​ಟೇಕ್​ ಮಾಡಲು ಮುಂದಾದಾಗ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಹತ್ರಾಸ್ ಜಿಲ್ಲೆಯ ಚಂದ್ಪಾ ಪೊಲೀಸ್ ಠಾಣೆ ವ್ಯಾಪ್ತಿಯ ಮೆಟೈ ಗ್ರಾಮದ ಬಳಿ ನಡೆದಿದ್ದು, 17 ಮಂದಿ ಮೃತಪಟ್ಟಿದ್ದಾರೆ. 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ 08 ಜನರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅಪಘಾತಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದು, ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಟ್ವೀಟ್​ ಮಾಡಿದ್ದಾರೆ. ಘಟನೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಗಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *