Breaking News

ಪ್ರವಾಹ ಸಂತ್ರಸ್ತರ ನೆರವಿಗಾಗಿ ದೇಣಿಗೆ ನೀಡಿದ ಪವನ್ ಕಲ್ಯಾಣ್

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಏರ್ಪಟ್ಟಿರುವ ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದು, ಟಾಲಿವುಡ್​ ಸೆಲಬ್ರಿಟಿಗಳು ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ. ಇದೀಗ ಸರ್ಕಾರದ ಭಾಗವೇ ಆಗಿರುವ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಭಾರಿ ದೇಣಿಗೆಯನ್ನು ಘೋಷಿಸಿದ್ದಾರೆ.
ತಮ್ಮ ಸ್ವಂತ ನಿಧಿಯಿಂದ ಪ್ರವಾಹ ಸಂತ್ರಸ್ತರಿಗಾಗಿ ಆಂಧ್ರದ 400 ಪಂಚಾಯತಿಗಳಿಗೆ ತಲಾ 1 ಲಕ್ಷ ರೂ.ಗಳಂತೆ 4 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಈ ಹಣವನ್ನು ನೇರವಾಗಿ ಆಯಾ ಪಂಚಾತಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಪವನ್ ತಿಳಿಸಿದ್ದಾರೆ.
ಇನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1ಕೋಟಿ ರೂ.ನೆರವನ್ನು ಉಪ ಮುಖ್ಯಮಂತ್ರಿ ಪವನ್​ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಶನಿವಾರ ವಿಜಯವಾಡದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸ್ತಾಂತರಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *