Breaking News

ಪಂಚಮಸಾಲಿ ಮೀಸಲಾತಿಗಾಗಿ ಬೃಹತ್ ಕಾನೂನು ಹೋರಾಟಕ್ಕೆ ಸಿದ್ದತೆ: ಜಯಮೃತ್ಯುಂಜಯ ಸ್ವಾಮೀಜಿ

ಗದಗ: ವಕೀಲರ ಮೂಲಕ ಪಂಚಮಸಾಲಿ ಮೀಸಲಾತಿ ಎರಡನೇ ಹಂತದ ಹೋರಾಟಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪಂಚಮಸಾಲಿ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಗದಗನಲ್ಲಿಂದು ವಕೀಲರ ಪೂರ್ವಭಾವಿ ಸಭೆ ನಡೆಸಿದ ಸ್ವಾಮೀಜಿ 2 ಎ ಮೀಸಲಾತಿ ಬಗ್ಗೆ ಸ್ಪಷ್ಟತೆ ಪಡೆಯಲು ವಕೀಲರ ಸಂಘಟನೆಗೆ ಕರೆ ನೀಡಿದರು.
ಸೆಪ್ಟೆಂಬರ್ 22 ನೇ ತಾರೀಖು ಬೆಳಗಾವಿಯ ಗಾಂಧಿ ಭವನದಲ್ಲಿ ಪಂಚಮಸಾಲಿ‌ ವಕೀಲರ ಪರಿಷತ್ ಆಯೋಜನೆ ಮಾಡಲಾಗಿದೆ ಸದನದಲ್ಲಿ ಸಮಾಜದ ಶಾಸಕರು ಈ ಕುರಿತು ಮಾತನಾಡಲ್ಲಿಲ್ಲ ಆದ್ದರಿಂದ ವಕೀಲರ ಮೂಲಕ ಒತ್ತಡ ತರಲು ಈ ಹೋರಾಟ ಅನಿವಾರ್ಯ ಆಗಿದೆ ಶಾಸಕರ ಮನಸ್ಸು ಪರಿವರ್ತನೆ ಮಾಡಲು ವಕೀಲರ ಬೃಹತ್ ಹೋರಾಟಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ, ಕಾನೂನಾತ್ಮಕವಾಗಿ ಹೋರಾಟ ಮಾಡುವ ಕುರಿತು ಚರ್ಚಿಸಲಾಗುವುದು ಎಂದಿದ್ದಾರೆ. ವಿಧಾನ ಸಭೆ ಅಧಿವೇಶನದಲ್ಲಿ ಸಮಾಜದ ಶಾಸಕರಿಗೆ ವಿಧಾನಸಭಾ ಅಧ್ಯಕ್ಷರು ಅವಮಾನ ಮಾಡಿದ್ದಾರೆ ನಿಯಮ 69ರ ಅಡಿ ಮಾತನಾಡಲು ಅವಕಾಶ ನೀಡಬೇಕಿತ್ತು ಆದರೆ ಇದನ್ನು ಸಮಾಜದ ಶಾಸಕರು ಪ್ರಶ್ನಿಸಲಿಲ್ಲ ಇವೆಲ್ಲದರ ಕುರಿತು 10 ಹಿರಿಯ ವಕೀಲರ ಸಮಿತಿ ರಚನೆ ಮಾಡಿ ಮುಂದಿನ ಹೋರಾಟದ ಕುರಿತು ರೂಪರೇಖೆಗಳನ್ನು ಸಿದ್ದ ಪಡಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *