ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಚುನಾವಣಾ ಪ್ರಚಾರವನ್ನು ಮಾಡಲಿದ್ದಾರೆ.
ಸೆಪ್ಟೆಂಬರ್ 14ಕ್ಕೆ ಬೃಹತ್ ಸಮಾವೇಶಗಳನ್ನು ಆಯೋಜಿಸಲಾಗಿದ್ದು, ಪ್ರಧಾನಿ ಮೋದಿ ಜಮ್ಮುವಿನಲ್ಲಿ ಮೆಗಾ ರ್ಯಾಲಿಗಳನ್ನು ನಡೆಸುವ ಮೂಲಕ ಪ್ರಚಾರ ನಡೆಸಲಿದ್ದಾರೆ.
ಇದು ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ವೇಗ ನೀಡಲಿದೆ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಈಗಾಗಲೇ ಪ್ರಚಾರ ನಡೆಸಿದ್ದು, ಪ್ರಧಾನಿ ಮೋದಿ ಕೂಡ ಪ್ರಚಾರ ನಡೆಸುತ್ತಿರುವುದು ಬಿಜೆಪಿ ಪಾಳಯದಲ್ಲಿ ಉತ್ಸಾಹ ಹೆಚ್ಚಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು ಮತ್ತು ಈ ವಿಧಾನಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಮೆಟ್ರೋ ಮತ್ತು ಹೆರಿಟೇಜ್ ಪಾರ್ಕ್ಗಳನ್ನು ರಚಿಸಲಾಗುವುದು, ಪ್ರತಿ ಕುಟುಂಬದ ಹಿರಿಯ ಮಹಿಳೆಗೆ ಪ್ರತಿ ವರ್ಷ 18,000 ರೂಪಾಯಿ ನೀಡಲು ಬಿಜೆಪಿ ಮಾ ಸಮ್ಮಾನ್ ಯೋಜನೆಯನ್ನು ತರಲಿದೆ. ಬಿಜೆಪಿ ಉಜ್ವಲ ಯೋಜನೆಯಡಿ ವರ್ಷಕ್ಕೆ ಎರಡು ಉಚಿತ ಸಿಲಿಂಡರ್ ನೀಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

