Breaking News

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ರಾಜ್ಯಸರ್ಕಾರ

ಬೆಂಗಳೂರು: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈಗ ಮತ್ತೆ ಅವಕಾಶ ನೀಡಲಾಗಿದೆ. ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತು ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದು, ಈಗಾಗಲೇ ಈ ರೇಷನ್ ಕಾರ್ಡ್ ಗಳ ಅರ್ಜಿಯನ್ನು ಪರಿಶೀಲನೆ ಮಾಡಲಾಗುತ್ತಿದ್ದು ಹೊಸ ರೇಷನ್ ಕಾರ್ಡ್ ಗಳ ವಿತರಣೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಮಾಡಲಾಗುತ್ತದೆ. ಹೊಸ ರೇಷನ್ ಕಾರ್ಡ್ ಗಳ ಅರ್ಜಿಯನ್ನು ವಿತರಣೆಯಾದ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 15 ರಿಂದ 30ನೇ ತಾರೀಕಿನೊಳಗೆ ಯಾವುದಾದರೂ ಒಂದು ದಿನದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *