ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನತಾ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಜನರ ಅಹವಾಲು ಸ್ವೀಕಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ.
ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿಂದು ಧಾರವಾಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ, ಪಾಲಿಕೆ ಆಯುಕ್ತರು, ಮೇಯರ್, ಉಪ ಮೇಯರ್ ಭಾಗಿಯಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗಿಯಾಗಿದ್ದರು.
ಇನ್ನೂ ನೂರಾರು ಜನರಿದಿಂದ ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್ ಅವರು ವೇದಿಕೆಯ ಮೇಲೆಯೇ ಅಧಿಕಾರಿಗಳಿಂದ ಸ್ಪಷ್ಟನೆ ಪಡೆದಿರುವುದು ನಿಜಕ್ಕೂ ವಿಶೇಷವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

