ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಗಳ ಮೊದಲ ಹಂತದ ಕಾಮಗಾರಿ 2026 ಡಿಸೆಂಬರ್ನಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸೋಮವಾರ ಮಾಹಿತಿ ನೀಡಿದರು.
ಉಪನಗರ ರೈಲ್ವೆ ಯೋಜನೆ ಮತ್ತು ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಕುರಿತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಕೇಂದ್ರ ಸಚಿವರು, ಚಿಕ್ಕಬಾಣಾವರ- ಬೈಯ್ಯಪ್ಪನಹಳ್ಳಿ (25 ಕಿ.ಮೀ- ಕಾರಿಡಾರ್-2 ) ಮತ್ತು ಹೀಲಲಗಿ- ರಾಜಾನುಕುಂಟೆ (46.88 ಕಿ.ಮೀ- ಕಾರಿಡಾರ್-4 ) ಉಪನಗರ ರೈಲ್ವೆ ಯೋಜನೆಗಳನ್ನು 2026ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದರು.
ಉಪನಗರ ರೈಲು ಯೋಜನೆಯ ಒಟ್ಟು ನಾಲ್ಕು ಕಾರಿಡಾರ್ಗಳಿಗೆ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಶಂಕುಸ್ಥಾಪನೆ ನೆರವೇರಿಸಿದ್ದರು. ನಿಗದಿತ ಅವಧಿಯ ಒಳಗೆ 2 ಮತ್ತು 4ನೇ ಕಾರಿಡಾರ್ ಯೋಜನೆಗಳನ್ನು ಉದ್ಘಾಟಿಸಲಾಗುವುದು. ಬಳಿಕ ಇತರ ಎರಡು ಕಾರಿಡಾರ್ಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

