ಹುಬ್ಬಳ್ಳಿ: ವಾಲ್ಮೀಕಿ ಹಗರಣದಲ್ಲಿ ಇಡಿ ಚಾರ್ಜ್ ಶೀಟ್ ದಾಖಲಿಸಿದೆ. ಅದರಲ್ಲಿ ಆತಂಕಕಾರಿ ವಿಷಯವನ್ನು ಹೊರಹಾಕಿದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ವಹಿಸಿರುವುದು ಏಕೆ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹುದಿಗೇರಿ ಪ್ರಶ್ನಿಸಿದರು.
ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಎಸ್.ಟಿ ಸಮುದಾಯಕ್ಕೆ ಸೇರಬೇಕಾದ ಹಣ ಚುನಾವಣೆಯಲ್ಲಿ ಬಳಕೆಯಾಗಿರುವ ಆತಂಕಕಾರಿ ಅಂಶ ಇಡಿ ಚಾರ್ಜ್ ಶೀಟ್ ನಲ್ಲಿ ಬಹಿರಂಗಗೊಂಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮೌನ ವಹಿಸದೇ ರಾಜ್ಯದ ಜನತೆಗೆ ಸ್ಪಷ್ಟತೆ ನೀಡಬೇಕು ಎಂದು ಆಗ್ರಹಿಸಿದರು.
ಕಳೆದ ಹದಿನಾರು ತಿಂಗಳುಗಳಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಹಲವಾರು ಕಳಂಕಗಳ ದಾಖಲೆಯನ್ನು ನಿರ್ಮಿಸಿದೆ. ಭ್ರಷ್ಟಾಚಾರದಲ್ಲಿ ತೊಡಗಿದ್ದು, ಕಳಂಕದ ಆಡಳಿತವನ್ನು ನಡೆಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

