ಧಾರವಾಡ : ಇಡಿಯನ್ನು ಕೇವಲ ರಾಜಕಾರಣಕ್ಕಾಗಿ ಮಾತ್ರ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇಡಿ ಹಾಕಿದ ಚಾರ್ಜ್ಶೀಟ್ನಲ್ಲಿ ಎಷ್ಟು ಜನರಿಗೆ ಶಿಕ್ಷೆಯಾಗಿದೆ ಹೇಳಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ನಮ್ಮದೂ ಸಹ ಎಸ್ಐಟಿ ತನಿಖೆ ನಡೆಯುತ್ತಿದೆ. ಅದರ ವರದಿ ಕೂಡ ಬಂದಿಲ್ಲ. ಇಡಿಯವರು ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ಗೆ ಹೋಗುವುದೇ ಇಲ್ಲ. ಸಿಬಿಐನವರು ರೇಪ್ ಕೇಸ್ ಇದ್ದಾಗ ಕೋರ್ಟ್ಗೆ ಹೋಗುವುದೇ ಇಲ್ಲ. ಕೋರ್ಟಿಗೇನೇ ಈಗ ಏನು ಮಾಡಬೇಕು ಎಂದು ಕೇಳುತ್ತಾರೆ. ಇಂತಹ ಪ್ರಶ್ನೆಗಳನ್ನು ಬಿಜೆಪಿಯವರಿಗೆ ಕೇಳಿದರೆ ಪುಸ್ಸ ಎಂದು ಓಡಿ ಹೋಗುತ್ತಾರೆ. ಈ ವ್ಯವಸ್ಥೆ ರಾಜಕೀಯ ಮಾಡೋದನ್ನು ಬಿಟ್ಟರೆ ಬೇರೆ ಏನೂ ಇಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

