ಹುಬ್ಬಳ್ಳಿ: ಹುಬ್ಬಳ್ಳಿ: ಫೈ ಓವರ್ ಬ್ರಿಡ್ಜ್ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಎಸ್ ಐ ನಾಬೀರಾಜ್ ಅವರ ಆರೋಗ್ಯವನ್ನು ಸೆಂಟ್ರಲ್ ಮಿನಿಸ್ಟರ್ ಪ್ರಹ್ಲಾದ್ ಜೋಶಿ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.
ಈ ಘಟನೆ ನಡೆಯಬಾರದಿತ್ತು. ಆದ್ರೆ ನಡೆದಿದ್ದು ದುರಂತ. ಇದಕ್ಕೆ ಸಂಬಂಧಿಸಿದಂತೆ PWD ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದ್ರೆ, ಕೈಗೊಳ್ಳದ ಕಾರಣ ಈ ದುರಂತ ಸಂಭವಿಸಿದೆ. ಹೀಗಾಗಿ ಗುತ್ತಿಗೆದಾರರ ವಿರುದ್ಧ ಈಗಾಗಲೇ ಕ್ರಮವನ್ನು ಪೊಲೀಸ್ ಇಲಾಖೆ ಕೈಗೊಂಡಿದೆ.
ಸದ್ಯಕ್ಕೆ ಕಾಮಗಾರಿಯನ್ನು ಬಂದ್ ಮಾಡಲಾಗಿದ್ದು, ಮುಂದಿನ ದಿನಮಾನಗಳಲ್ಲಿ ಸುರಕ್ಷತಾ ಕ್ರಮವನ್ನು ಅನುಸರಿಸಿ ಕಾಮಗಾರಿ ನಡೆಸುವಂತೆ ಜಿಲ್ಲಾಡಳಿತಕ್ಕೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದರು. ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಎಸ್ ಐ ನಾಬೀರಾಜ್ ಅವರ ಆರೋಗ್ಯವನ್ನು ಸೆಂಟ್ರಲ್ ಮಿನಿಸ್ಟರ್ ಪ್ರಹ್ಲಾದ್ ಜೋಶಿ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.
ಈ ಘಟನೆ ನಡೆಯಬಾರದಿತ್ತು. ಆದ್ರೆ ನಡೆದಿದ್ದು ದುರಂತ. ಇದಕ್ಕೆ ಸಂಬಂಧಿಸಿದಂತೆ PWD ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದ್ರೆ, ಕೈಗೊಳ್ಳದ ಕಾರಣ ಈ ದುರಂತ ಸಂಭವಿಸಿದೆ. ಹೀಗಾಗಿ ಗುತ್ತಿಗೆದಾರರ ವಿರುದ್ಧ ಈಗಾಗಲೇ ಕ್ರಮವನ್ನು ಪೊಲೀಸ್ ಇಲಾಖೆ ಕೈಗೊಂಡಿದೆ.
ಸದ್ಯಕ್ಕೆ ಕಾಮಗಾರಿಯನ್ನು ಬಂದ್ ಮಾಡಲಾಗಿದ್ದು, ಮುಂದಿನ ದಿನಮಾನಗಳಲ್ಲಿ ಸುರಕ್ಷತಾ ಕ್ರಮವನ್ನು ಅನುಸರಿಸಿ ಕಾಮಗಾರಿ ನಡೆಸುವಂತೆ ಜಿಲ್ಲಾಡಳಿತಕ್ಕೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

