ನವಲಗುಂದ: ಪಟ್ಟಣದ ರಾಮಲಿಂಗ ಓಣಿಯ ನಿವಾಸಿ ಇಮಾಮಹುಸೇನ ಮುಲ್ಲಾನವರ ಅವರು ಸಾಲಗಳ ಮರುಪಾವತಿಗಾಗಿ ಮರಣ ಪ್ರಮಾಣ ಪತ್ರ ಪಡೆದು ಫೈನಾನ್ಸ್ ಗಳಿಗೆ ಸಲ್ಲಿಸಿದ್ದಾನೆ.
ಆಗಸ್ಟ್ 21ರಂದು ಪುರಸಭೆಗೆ ಆಗಸ್ಟ್ 27ರಂದು ಮರಣ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾನೆ. ಅಧಿಕಾರಿಗಳು ಅದನ್ನು ಪರಿಶೀಲಿಸಿ ಆಗಸ್ಟ್ 29ರಂದು ಪ್ರಮಾಣಪತ್ರ ನೀಡಿದ್ದಾರೆ. ಯಾವುದೇ ವ್ಯಕ್ತಿ ತೀರಿಕೊಂಡರೆ ಪುರಸಭೆಗೆ ಸ್ಥಾನಿಕ ಚೌಕಾಶಿ (ಪಂಚರ ಸಹಿ) ಮಾಡಿ ಆ ಓಣಿಯ/ವಾರ್ಡಿನ ಸದಸ್ಯರ ಹಾಗೂ ಆಶಾ ಕಾರ್ಯಕರ್ತೆಯರು, ಅಷ್ಟೇ ಅಲ್ಲದೇ ಹಿರಿಯರ ಸಹಿ ಪಡೆದು ಅವರೊಂದಿಗೆ ಪರಿಶೀಲಿಸಿ ಮೃತರ ಮನೆಗೆ ಭೇಟಿ ನೀಡಿ ಮರಣ ಪ್ರಮಾಣ ಪತ್ರದ ಅರ್ಜಿ ನೋಂದಣಿ ಮಾಡಲಾಗುತ್ತದೆ. ಆದರೆ ಇಲ್ಲಿನ ಅಧಿಕಾರಿಗಳ ಹಾಗೂ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಇದ್ಯಾವುದನ್ನೂ ಮಾಡಿಲ್ಲ. ಈ ಕುರಿತು ಕೇಳಿದರೆ ಕೆಲಸದ ಒತ್ತಡದಲ್ಲಿ ಈ ಘಟನೆ ನಡೆದಿರಬಹುದು ಎಂದು ಸಬೂಬು ನೀಡಿದ್ದಾರೆ.
ಇನ್ನು ಈ ವ್ಯಕ್ತಿ ಬದುಕಿದ್ದಾನೆ ಎಂದು ತಿಳಿದ ತಕ್ಷಣ ಪುರಸಭೆ ಸಿಬ್ಬಂದಿ ಆತನ ಮರಣ ಪ್ರಮಾಣ ಪತ್ರ ರದ್ದು ಮಾಡಲು ಶಿಫಾರಸು ಮಾಡಿದ್ದು, ಸಾಮಾನ್ಯ ವ್ಯಕ್ತಿಗಳಿಗೆ ಮರಣ ಪ್ರಮಾಣ ಪತ್ರ ನೀಡಲು ಒಂದು ವಾರ ಸಮಯ ಕೇಳುವ ಇವರು ಇಮಾಮಹುಸೇನ್ಗೆ 3ದಿನಗಳಲ್ಲಿ ನೀಡಿದ್ದು ನೋಡಿದರೆ ಇದರಲ್ಲಿ ಏನೋ ಹಗರಣ ನಡೆದಿದೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

