ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಯ ಉಸಿರು ತೆಗೆದುಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ, ದೇಶದ ಈ ಸುಂದರ ನಾಡನ್ನು ಹಾಳುಮಾಡಿದ ವಂಶ ರಾಜಕಾರಣಿಗಳ ವಿರುದ್ಧ ತಮ್ಮ ಸರ್ಕಾರ ಹೊಸ ನಾಯಕತ್ವವನ್ನು ಬಿಂಬಿಸುತ್ತಿದೆ ಎಂದು ಹೇಳಿದ್ದಾರೆ.
ಜಮ್ಮುಕಾಶ್ಮೀರ ವಿಧಾನಸಭೆ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ದೋಡಾ ಜಿಲ್ಲೆಯಲ್ಲಿ ಇಂದು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಾವು ಮತ್ತು ನೀವು ಒಟ್ಟಾಗಿ ಜಮ್ಮು ಕಾಶ್ಮೀರವನ್ನು ದೇಶದ ಸುರಕ್ಷಿತ ಮತ್ತು ಸಮೃದ್ಧ ಭಾಗವನ್ನಾಗಿ ಮಾಡೋಣ ಎಂದು ಹೇಳಿದರು.
ಇದೇ ಸೆಪ್ಟೆಂಬರ್ 18 ರಂದು ನಡೆಯಲಿರುವ ಮೊದಲ ಹಂತದ ಅಸೆಂಬ್ಲಿ ಚುನಾವಣೆಗೆ ಮುನ್ನ ಪ್ರಧಾನಿ ನಡೆಸಿದ ಮೊದಲ ಚುನಾವಣಾ ರ್ಯಾಲಿ ಇದಾಗಿದೆ.
ಸ್ವಾತಂತ್ರ್ಯದ ನಂತರ, ಜಮ್ಮು ಮತ್ತು ಕಾಶ್ಮೀರವು ವಿದೇಶಿ ಶಕ್ತಿಗಳ ಗುರಿಯಾಯಿತು ನಂತರ ವಂಶ ರಾಜಕೀಯವು ಈ ಸುಂದರ ಪ್ರದೇಶವನ್ನು ಟೊಳ್ಳಾಗಿಸಿ ಹಾಳುಮಾಡಿತು. ಇಲ್ಲಿನ ವಂಶಾಡಳಿತ ರಾಜಕಾರಣಿಗಳು ತಮ್ಮ ಮಕ್ಕಳನ್ನು ಮುಂದಿಟ್ಟುಕೊಂಡು ಹೊಸ ನಾಯಕರನ್ನು ಬೆಳೆಯಲು ಬಿಡಲಿಲ್ಲ ಎಂದು ಆರೋಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

