ಹುಬ್ಬಳ್ಳಿ: ಕಾರ್ಮಿಕ ಇಲಾಖೆಯಲ್ಲಿ ಲ್ಯಾಪ್ಟಾಪ್ ಕಳ್ಳತನ ಪ್ರಕರಣ ಇದೆಲ್ಲ ಮಿಲಾಪಿ ಕುಸ್ತಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
ಕಾರ್ಮಿಕ ಇಲಾಖೆಯ 101 ಲ್ಯಾಪ್ಟಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮಕ್ಕಳಿಗೆ ಹಂಚಿಕೆ ಮಾಡೋ ಲ್ಯಾಪ್ಟಾಪ್ ಎಲ್ಲಿ ಹೋದ್ವು? ಅವರೇ ಭಾಗಿಯಾಗಿರ್ತಾರೆ. ನಂತರ ದೂರು ಕೊಡ್ತಾರೆ. ಇದೆಲ್ಲ ಮಿಲಾಪಿ ಕುಸ್ತಿ ಎಂದರು.
ನಿನ್ನೆ ಈ ವಿಚಾರ ದಿಶಾ ಸಭೆಯಲ್ಲೂ ಚರ್ಚೆ ಆಗಿದೆ. ಕಾರ್ಮಿಕ ಸಚಿವರ ತವರಿನಲ್ಲಿಯೇ ಇಂತಹ ಕಳ್ಳತನ ಪ್ರಕರಣ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎಂದ ಜೋಶಿ ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

