ಹುಬ್ಬಳ್ಳಿ: ಎರಡು ಕುಟುಂಬಗಳ ನಡುವೆಗಣಪತಿ ವಿಸರ್ಜನೆ ವೇಳೆಯಲ್ಲಿ ಪಟಾಕಿ ಹಚ್ಚುವ ವಿಚಾರಕ್ಕೆ ಕಲ್ಲು ಹಾಗೂ ಕಟ್ಟಿಗೆಗಳಿಂದ ಮಾರಾಮಾರಿ ಸಂಭವಿಸಿದ ಘಟನೆ ರವಿವಾರ ರಾತ್ರಿ ಕಲಘಟಗಿ ತಾಲ್ಲೂಕಿನಲ್ಲಿ ನಡೆದಿದೆ.
ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಸು ಹಾಗೂ ಸಂಜು ಎಂಬುವರ ಮೇಲೆ ಅದೇ ಗ್ರಾಮದ ಶೇಕಪ್ಪ ಹೊನ್ನಿಹಳ್ಳಿ. ಕಲ್ಮಶ, ಮಂಜಪ್ಪ, ನಾಗಪ್ಪ, ಪರಶು, ಹಾಗೂ ಇನ್ನಿತರರು ಸೇರಿ ಕಲ್ಲು ಹಾಗೂ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ.
ಇದರ ಪರಿಣಾಮ ಬಸು ಹಾಗೂ ಸಂಜು ತಲೆಗೆ ಗಂಭೀರವಾಗಿ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಇಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

