Breaking News

ವಾಹನಗಳ ಹರಾಜಿಗೆ ಮುಗಿಬಿದ್ದ ಜನ

ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದ ವಾಹನಗಳ ಹರಾಜಿಗೆ ಜನರು ಮುಗಿಬಿದ್ದಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ ಹೊರಠಾಣೆ ಬಂಡಿವಾಡದಲ್ಲಿ ವಿವಿಧ ಮೊಕದ್ದಮೆಗಳಲ್ಲಿ ವಶಪಡಿಸಿಕೊಂಡಿದ್ದ, 12 ದ್ವಿಚಕ್ರ ವಾಹನಗಳ ಹರಾಜು ಪ್ರಕ್ರಿಯೆಯನ್ನು ಹಮ್ಮಿಕೊಂಡಿದ್ದು ಖರೀದಿ ಮಾಡಲು ಜನರು ಮುಗಿಬಿದ್ದಿದ್ದಾರೆ.

ಬೆಳಗ್ಗೆಯಿಂದಲೇ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ನೂರಾರು ಜನ ಹಾಜರಿದ್ದರು. ಬಳಿಕ ಪಿಎಸ್‌ಐ ಸಚಿನ್‌ ಅಲಮೇಲ್ಕ‌ರ್ ವಾಹನ ಹರಾಜು ಪ್ರಕ್ರಿಯೆ ನಡೆಸಿದರು. ಮುಂಗಡ 5,000 ಸಾವಿರ ರೂ. ಪಾವತಿಸಿ ರಸೀದಿ ಪಡೆದವರಿಗೆ ಮಾತ್ರ ಹರಾಜಿನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಹರಾಜಿನಲ್ಲಿ ಭಾಗವಹಿಸಿದ ಜನರು ಉತ್ತಮ ಮಟ್ಟದಲ್ಲಿ ಬಿಡ್ ಕೂಗಲು ಆರಂಭಿಸಿದರು.

ವಾಹನಗಳು ಹೆಚ್ಚಿನ ಬೆಲೆಗೆ ಹರಾಜಾದವು. ಇನ್ನು ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ 12 ವಾಹನಗಳ ವಾರಸುದಾರರು ಪತ್ತೆಯಾಗದ ಕಾರಣ ಹರಾಜು ಮಾಡಲಾಗುತ್ತಿದೆ. ಈ ವಾಹನಗಳನ್ನು ಸಾರ್ವಜನಿಕ ಬಹಿರಂಗ ಹರಾಜು ಮಾಡಲು ನ್ಯಾಯಾಲಯದಿಂದ ಅನುಮತಿ ಪಡೆದು, ಬಂಡಿವಾಡದಲ್ಲಿನ ಗ್ರಾಮೀಣ ಠಾಣೆ ಆವರಣದಲ್ಲಿ ಹರಾಜು ಹಾಕಿದ್ದರು.

Share News

About Shaikh BigTv

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *