ಕಲಬುರಗಿ: ಕಲಬುರಗಿಯನ್ನು 1685 ಕೋಟಿ ರೂ. ವೆಚ್ಚದ ಯೋಜನೆಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದಲೇ ಸ್ಮಾರ್ಟ್ ಸಿಟಿಯನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ. ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿ ಪಡಿಸಲು ಯೋಜನೆ ಹಾಗೂ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 1 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.
ಕಲಬುರಗಿ ಜಯದೇವ ಆಸ್ಪತ್ರೆ ಉದ್ಘಾಟನಾ ಹಂತದಲ್ಲಿದೆ ಇಂದಿರಾ ಗಾಂಧಿ ಚೈಲ್ಡ್ ಕೇರ್ ಘಟಕಕ್ಕೂ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
ಇಂದಿರಾಗಾಂಧಿ ಚೈಲ್ಡ್ ಕೇರ್ ಘಟಕಕ್ಕೂ ಅನುಮೋದನೆ ನೀಡಿದ್ದೇವೆ. ಆ ಮೂಲಕ ಕಲಬುರಗಿಯನ್ನು ರೀಜನಲ್ ಹೆಲ್ತ್ ಹಬ್ ಮಾಡುವತ್ತ ಹೆಜ್ಜೆ ಇಟ್ಟಿದ್ದೇವೆ. ಈ ಭಾಗದ ಶೈಕ್ಷಣಿಕ ಪರಿಸ್ಥಿತಿ ಸುಧಾರಿಸಲು 2023-24 ಅನ್ನು ಇಯರ್ ಆಫ್ ಎಜುಕೇಷನ್ ಎಂದು ಘೋಷಣೆ ಮಾಡಿದ್ದೇವೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅಕ್ಷರ ಅವಿಷ್ಕಾರ ಯೋಜನೆ ಜಾರಿಗೊಳಿಸಿದ್ದೇವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

