ಬೆಳಗಾವಿ: ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದ್ದು, ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚೂರಿ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ ಆಗಿದ್ದು, ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದಾರೆ.
ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದ್ದು, ಇವರು ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಾಗಿದ್ದಾರೆ. ಈ ಘಟನೆಯಲ್ಲಿ ಪ್ರವೀಣ್ ಗುಂಡ್ಯಾಗೋಳ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ಗಾಯಾಳುಗಳಾದ ದರ್ಶನ್ ಪಾಟೀಲ್, ಸತೀಶ್ ಪೂಜಾರಿಗೆ ಬಿಮ್ಸ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗಣಪತಿ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಕಾಲು ತಾಗಿದೆ, ನಂತರ ಮೆರವಣಿಗೆಯಿಂದ ಹೊರಬಂದು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಮೂವರಿಗೆ ಚಾಕು ಇರಿತವಾಗಿದೆ. ಗಾಂಜಾ ಮತ್ತಿನಲ್ಲಿ ವೈಯಕ್ತಿಕ ಕಾರಣಕ್ಕೆ ಚಾಕು ಇರಿತ ನಡೆಸಲಾಗಿದೆ ಎಂಬ ಸಂಶಯವಿದೆ. ಇನ್ನು ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ತನಿಖೆಯಿಂದ ವಿಷಯ ಬಯಲಾಗಬೇಕಿದೆ ಎಂದು ಕಮಿಷನರ್ ಯಡಾ ಮಾರ್ಟಿನ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





