ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧಿಸಿದ್ದು ಇದು ಅಸಂಭವ ಎಂದು ಕೇಂದ್ರ ಸಚಿವ ಸಂಪುಟದ ನಿರ್ಧಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಬುಧವಾರ ಒಂದು ರಾಷ್ಟ್ರ ಒಂದು ಚುನಾವಣೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ ಬೆನ್ನಲ್ಲೇ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಏಕಕಾಲಕ್ಕೆ ಚುನಾವಣಾ ಪ್ರಸ್ತಾವನೆಗೆ ಒಪ್ಪಿಗೆ ನೀಡಿರುವುದು ಚುನಾವಣೆಗೆ ಮುನ್ನ ಮಾಡಿರುವ ಚುನಾವಣಾ ಗಿಮಿಕ್, ಚುನಾವಣೆಗಳು ಬಂದಾಗ ಬಿಜೆಪಿ ಈ ಎಲ್ಲ ವಿಷಯಗಳನ್ನು ಹೇಳುತ್ತಾರೆ. ಇದನ್ನು ದೇಶದ ಜನ ಒಪ್ಪುವುದಿಲ್ಲ ಎಂದು ಖರ್ಗೆ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

