ಹುಬ್ಬಳ್ಳಿ: ಶ್ರೀ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಶಾಂತಿಯುತವಾಗಿ, ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿದ ಸರ್ವ ನಾಗರಿಕರಿಗೂ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಕಮಿಷನರ್, ಎಲ್ಲ ಧರ್ಮಗಳ ಮುಖಂಡರು, ಶ್ರೀ ಗಣೇಶ ಮಂಡಳಿ ಮತ್ತು ಈದ್ ಮಿಲಾದ್ ಸಂಘಟನೆಯ ಮುಖಂಡರು, ಚುನಾಯಿತ ಪ್ರತಿನಿಧಿಗಳು ಸೇರಿದಂತೆ ನಗರದ ಎಲ್ಲ ಸಾರ್ವಜನಿಕರಿಗೆ ಮತ್ತು ವಿವಿಧ ಇಲಾಖೆಗಳ ಹಾಗೂ ಅಚ್ಚುಕಟ್ಟಾಗಿ ಕರ್ತವ್ಯವನ್ನು ನಿರ್ವಹಿಸಿದ ಹೊರ ಜಿಲ್ಲೆಗಳಿಂದ ಬಂದೋಬಸ್ತ್ ಕರ್ತವ್ಯಕ್ಕೆ ಬಂದಿದ್ದ ಹಾಗೂ ಹುಬ್ಬಳ್ಳಿ- ಧಾರವಾಡ ಕಮಿಷನರೇಟ್ ನ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಧನ್ಯವಾದಗಳು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

