ಹುಬ್ಬಳ್ಳಿ: ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ, ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಹಾಗೂ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ವಿರೂಪಗೊಳಿಸಿದ್ದನ್ನು ಖಂಡಿಸಿ, ಜಯ ಕರ್ನಾಟಕ ಸಂಘಟನೆ ವತಿಯಿಂದ ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿ ಎದುರಿಗೆ ಪ್ರತಿಭಟನೆ ಮಾಡಿದರು.
ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ವಿರೂಪಗೊಳಿಸಿದ ವ್ಯಕ್ತಿಗೆ ಉಗ್ರವಾದ ಶಿಕ್ಷೆಯಾಗಬೇಂದು ಜಯ ಕರ್ನಾಟಕ ಸದಸ್ಯರು ಆಕ್ರೋಶ ಕೂಗಿ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

