Breaking News

ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಯಲ್ಲಿ ಬಯೋಮೆಟ್ರಿಕ್ ಅಳವಡಿಕೆ ಕಡ್ಡಾಯ: ಜಿಲ್ಲಾಧಿಕಾರಿ ಆದೇಶ

ಕೊಪ್ಪಳ: ಸರ್ಕಾರಿ ಕೆಲಸ ದೇವರ ಕೆಲಸ ಎನ್ನುತ್ತಾರೆ, ಆದರೆ ಆ ಕೆಲಸವನ್ನು ಮಾಡುವ ಅಧಿಕಾರಿಗಳಲ್ಲಿ ಹಲವರು ಸರಿಯಾದ ಸಮಯಕ್ಕೆ ಕಚೇರಿಗೆ ಬಾರದೆ ಸಭೆ ಇದೆ ಎನ್ನುವ ನೆಪ ಮುಂದಿಡುತ್ತಿದ್ದು, ಈ ಕುರಿತು ವ್ಯಾಪಕ ದೂರುಗಳು ಕೇಳಿಬಂದಿವೆ.
ಆದ್ದರಿಂದ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಸರ್ಕಾರದ ಸೂಚನೆಯಂತೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಬಯೊಮೆಟ್ರಿಕ್‌ ಅಳವಡಿಕೆ ಕಡ್ಡಾಯ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಕಚೇರಿಯಲ್ಲಿ ತಮ್ಮ ಇರುವಿಕೆಯನ್ನು ಬಯೊಮೆಟ್ರಿಕ್‌ ಹಾಜರಾತಿ ಮೂಲಕ ದೃಢಪಡಿಸಬೇಕಾಗಿದೆ. ಇದರಿಂದ ಅಧಿಕಾರಿಗಳ ಹಾಜರಾತಿ ಕುರಿತು ನಿಗಾ ವಹಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಬಯೊಮೆಟ್ರಿಕ್‌ ಕಡ್ಡಾಯ ಎಂದು ಈ ಹಿಂದೆಯೇ ಸೂಚಿಸಿದ್ದರೂ ಜಿಲ್ಲಾಡಳಿತ ಭವನ ಮತ್ತು ಹೊರಗಡೆ ಇರುವ ಹಲವು ಸರ್ಕಾರಿ ಕಚೇರಿಗಳಲ್ಲಿ ಬಯೊಮೆಟ್ರಿಕ್ ಅಳವಡಿಕೆ ಮಾಡಿಲ್ಲ. ಸರ್ಕಾರಿ ಕಚೇರಿಯ ಸಮಯ ಬೆಳಿಗ್ಗೆ 10 ಗಂಟೆಗೆ ನಿಗದಿ ಮಾಡಿದ್ದರೂ ಕೆಲವರು ವಿನಾಕಾರಣ ತಡವಾಗಿ ಬರುವುದು, ತಮ್ಮ ಮೇಲಧಿಕಾರಿಗಳು ರಜೆ ಇದ್ದಾಗಲಂತೂ ಅರ್ಧ ದಿನ ಕಳೆದ ಬಳಿಕವೇ ಕಚೇರಿಗೆ ಬರುವ ಪ್ರಕರಣಗಳು ನಡೆಯುತ್ತಲೇ ಇವೆ. ಇನ್ನೂ ಕೆಲವರು ಕಚೇರಿಯ ಮೊಬೈಲ್‌ ಸಂಖ್ಯೆ ಇರುವ ಫೋನ್‌ ಕಚೇರಿಯಲ್ಲಿಯೇ ಬಿಟ್ಟು ಹೊರಗಡೆ ಓಡಾಡುತ್ತಿರುವ ಆರೋಪಗಳು ಕೂಡ ಇವೆ.
ಆದ್ದರಿಂದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ನಿಗದಿತ ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗಬೇಕು. ಮೇಲಧಿಕಾರಿಗಳು ಈ ಕುರಿತು ನಿಗಾ ವಹಿಸಬೇಕು. ಜಿಲ್ಲೆ ಮತ್ತು ತಾಲ್ಲೂಕು ಮಟ್ಟದ ಎಲ್ಲ ಕಚೇರಿಗಳಲ್ಲಿ ಕಡ್ಡಾಯವಾಗಿ ಬಯೊಮೆಟ್ರಿಕ್ ಅಳವಡಿಸಬೇಕು ಎಂದಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *