ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿನಿಂದನೆ, ಜೀವಬೆದರಿಕೆ, ಹನಿಟ್ರ್ಯಾಪ್ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಮುನಿರತ್ನ ಅವರ ವಿರುದ್ಧ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಿಡಿದೆದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರು. ಮುನಿರತ್ನ ಓರ್ವ ಒಕ್ಕಲಿಗ, ದಲಿತರ ವಿರೋಧಿ ಎಂದು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು. ಈ ಕೂಡಲೇ ಶಾಸಕ ಸ್ಥಾನಕ್ಕೆ ಮುನಿರತ್ನ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ರು.
bigtvnews | Hubli Dharwad News | Kannada News | Karnataka News Hubli News | News In Hubli | Local news

