Breaking News

ವಿಜಯನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಶಾಸಕರಿಂದ ಸಚಿವ ಎಂ.ಬಿ.ಪಾಟೀಲ್ ಗೆ ಮನವಿ

ಹೊಸಪೇಟೆ : ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ,‌ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್. ಆರ್.ಗವಿಯಪ್ಪ ಅವರು ಇಂದು ಬೆಂಗಳೂರಿನಲ್ಲಿ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ವಿಜಯನಗರ ಜಿಲ್ಲೆಯು ಪ್ರಾಕೃತಿಕವಾಗಿ ತನ್ನದೇ ವಿಶೇಷತೆಯನ್ನು ಹೊಂದಿದ್ದು, ಜಾಗತಿಕವಾಗಿ ಹೆಸರುವಾಸಿಯಾಗಿದೆ.
ಪ್ರತಿ ದಿನ ಹಂಪಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಅಗಮಿಸುತ್ತಾರೆ. ಅಲ್ಲದೆ, ಹಂಪಿ ಸುತ್ತಲೂ ಪ್ರಸಿದ್ಧ ಧಾರ್ಮಿಕ ತಾಣಗಳಿವೆ. ಹಾಗಾಗಿ ವಿಜಯನಗರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಅವಶ್ಯಕತೆ ಇದೆ ಎಂದು ಶಾಸಕ ಗವಿಯಪ್ಪ ಸಚಿವರಿಗೆ ಮನವರಿಕೆ ಮಾಡಿದರು.
ಐತಿಹಾಸಿಕ ಹಂಪಿ ವ್ಯಾಪ್ತಿಯಲ್ಲಿ ಟೂರಿಸಂ ಪಾರ್ಕ್ ನಿರ್ಮಾಣ ಹಾಗೂ ಹೊಸಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸ್ಟೀಲ್ ಪಾರ್ಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಾಸಕರು ಸಚಿವರಿಗೆ ಮನವಿ ಸಲ್ಲಿಸಿದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *