Breaking News

ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಒತ್ತು ನೀಡಿ ರೈತರಿಗೆ ಅನುಕೂಲ ಕಲ್ಪಿಸಬೇಕು: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಧಾರವಾಡ: ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಬೇಕು, ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಬೀಜ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗಳಿಗೆ ₹3.05 ಲಕ್ಷ ಕೋಟಿ ಜಮೆ ಮಾಡಲಾಗಿದೆ. ಕೃಷಿ ಉತ್ಪನ್ನಗಳ ಬೆಲೆ ಹೆಚ್ಚಾಗಿದೆ. ವಿವಿಧ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದರು.
ಸೌರಶಕ್ತಿ ಬಳಕೆಗೆ ರೈತರನ್ನು ಪ್ರೋತ್ಸಾಹಿಸಬೇಕು. ಕುಸುಮ, ಸೂರ್ಯ ಘರ್ ಯೋಜನೆಗಳ ಬಗ್ಗೆ ತಿಳಿಸಬೇಕು. ರಾಜ್ಯ ಸರ್ಕಾರ ವಿದ್ಯುತ್ ಪುಕ್ಕಟ್ಟೆಯಾಗಿ ಪೊರೈಸುತ್ತಿದೆ. ಪುಕ್ಕಟ್ಟೆಯಾಗಿ ವಿದ್ಯುತ್ ಪೂರೈಸಿ ಹಿಮಾಚಲ ಪ್ರದೇಶ ಸರ್ಕಾರ ದಿವಾಳಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್. ಪಾಟೀಲ, ಕುಲಸಚಿವೆ ಜಯಲಕ್ಷ್ಮಿ, ಶಾಸಕ ಮಹೇಶ ಟೆಂಗಿನಕಾಯಿ ಉಪಸ್ಥಿತರಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *