Breaking News

ಮಲಪ್ರಭಾ ಸಕ್ಕರೆ ಕಾರ್ಖಾನೆ ಅವ್ಯವಹಾರ: ತನಿಖೆಯನ್ನು ಸಿಬಿಐಗೆ ಒಪ್ಪಿಸಲು ರೈತ ಸಂಘಗಳ ಆಗ್ರಹ

ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಕಾರ್ಖಾನೆ ಆವರಣದಲ್ಲಿ ರೈತ ಸಂಘಗಳ ಒಕ್ಕೂಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು.
ಅವ್ಯವಹಾರದ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಸೆ.25ರಂದು ನಡೆಯಲಿರುವ ಕಾರ್ಖಾನೆ ವಾರ್ಷಿಕ ಮಹಾಸಭೆಯಲ್ಲಿ ಠರಾವು ಪಾಸ ಮಾಡಬೇಕೆಂದು ಆಗ್ರಹಿಸಿದರು, ತನಿಖೆ ನಡೆಸಲು ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ, ರೈತರು, ಲೆಕ್ಕ ಪರಿಶೋಧಕರು, ಪೊಲೀಸರು, ಕಾರ್ಖಾನೆಯ ನಿರ್ದೇಶಕರು, ನಿವೃತ್ತ ಸೈನ್ಯಾಧಿಕಾರಿ ಸೇರಿ ಉನ್ನತ ಅಧಿಕಾರಿಗಳ ಒಳಗೊಂಡ ಸಮಿತಿ ರಚಿಸಿ, ಕಾನುನಾತ್ಮಕ ತನಿಖೆ ನಡೆಸಲು ಒಪ್ಪಿಗೆಯ ಠರಾವು ಪಾಸ್ ಮಾಡಬೇಕೆಂದು ರೈತರು ಆಗ್ರಹಿಸಿದ್ದಾರೆ. ತನಿಖೆಗೆ ಒಪ್ಪಿಗೆ ಸಿಗುವ ತನಕ ಧರಣಿ ಸತ್ಯಾಗ್ರಹ ಮುಂದುವರೆಸುವುದಾಗಿ ಘೋಷಿಸಿದ್ದಾರೆ.
ಈ ಸಂದರ್ಭದಲ್ಲಿ ರೈತಸಂಘಗಳ ಒಕ್ಕೂಟದ ಮುಖಂಡರಾದ ಪ್ರಕಾಶ ನಾಯ್ಕ, ಬಸವರಾಜ ಮೊಕಾಶಿ, ಬಸನಗೌಡ ಪಾಟೀಲ, ಶಿವಾನಂದ ಜ್ಯೋತಿ, ರುದ್ರಪ್ಪ ಕೊಡ್ಲಿ, ಸುರೇಶ ಕರವಿನಕೊಪ್ಪ, ಬೀರಪ್ಪ ದೇಶನೂರ, ಆನಂದ ಹುಚ್ಚಗೌಡ್ರ, ಶಂಕರೆಪ್ಪ ಸುಣಗಾರ, ಸಂಜೀವಕುಮಾರ ತಿಲಗರ ಉಪಸ್ಥಿತರಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *