Breaking News

ಸಿಡಿಲಿಗೆ ಓರ್ವ ರೈತ ಬಲಿ

ಧಾರವಾಡ: ಸಿಡಿಲಿಗೆ ಓರ್ವ ರೈತ ಬಲಿಯಾಗಿರುವ ಘಟನೆ ಧಾರವಾಡ ತಾಲೂಕಿನ ಹನುಮನಹಾಳ ಗ್ರಾಮದಲ್ಲಿ ನಡೆದಿದೆ.

ಭೀಮನಗೌಡ ಮಲ್ಲನಗೌಡ ಪಾಟೀಲ (65) ಎಂಬುವವರೇ ಸಿಡಿಲಿಗೆ ಬಲಿಯಾದವರು. ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ತಮ್ಮ ಹೊಲಕ್ಕೆ ಹೋಗಿ ಶೇಂಗಾ ಸೋಸುವ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ವಿಪರೀತ ಮಳೆಯಾಗಲು ಆರಂಭಿಸಿದ್ದರಿಂದ ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ಮರಳಿ ಮನೆ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಅವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಗರಗ ಠಾಣೆ ಪಿಎಸ್‌ಐ ಭೇಟಿ ನೀಡಿ ಪರಿಶೀಲಿಸಿ, ದೂರು ದಾಖಲಿಸಿಕೊಂಡಿದ್ದಾರೆ. ನಂತರ ಭೀಮನಗೌಡ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *